Homeಮುಖಪುಟದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

- Advertisement -
- Advertisement -

ಹದಿನೈದು ದಿನಗಳ ಹಿಂದೆ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ, ಬೆಂಕಿ ಹಚ್ಚಿದ್ದರು ಎನ್ನಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಆ.2) ತಿಳಿಸಿದ್ದಾರೆ.

ಜುಲೈ 19ರಂದು ಬೆಳಿಗ್ಗೆ ಪುರಿ ಜಿಲ್ಲೆಯ ಭಾರ್ಗವಿ ನದಿಯ ದಡದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ್ದರು ಎಂದು ವರದಿಯಾಗಿತ್ತು.

ಬಾಲಕಿ ತನ್ನ ಸ್ನೇಹಿತೆಯನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ, ಮಾರ್ಗ ಮಧ್ಯೆ ಆಕೆಯನ್ನು ತಡೆದಿದ್ದ ಮೂವರು ವ್ಯಕ್ತಿಗಳು ಅಪಹರಿಸಿ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದಿದ್ದರು. ಅಲ್ಲಿ ಸೀಮೆ ಎಣ್ಣೆಯಂತಹ ವಸ್ತುವನ್ನು ಆಕೆಯ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ್ದರು ಎಂದು ಬಾಲಕಿಯ ತಾಯಿ ಬಲಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶೇಕಡ 70ರಷ್ಟು ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿಯನ್ನು ಆರಂಭದಲ್ಲಿ ಸ್ಥಳೀಯ ಪಿಪಿಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ಆ ದಿನವೇ ಆಕೆಯನ್ನು ಭುವನೇಶ್ವರದ ಏಮ್ಸ್ ಸ್ಥಳಾಂತರಿಸಲಾಗಿತ್ತು. ಅಲ್ಲಿಂದ ಮರುದಿನ ದೆಹಲಿಯ ಏಮ್ಸ್‌ಗೆ ಏರ್‌ಲಿಫ್ಟ್ ಮಾಡಲಾಗಿತ್ತು. ಅಲ್ಲಿ ಆಕೆಗೆ ಕನಿಷ್ಠ ಎರಡು ಶಸ್ತ್ರಚಿಕಿತ್ಸೆಗಳು ಮತ್ತು ಚರ್ಮ ಕಸಿ ಮಾಡಲಾಗಿತ್ತು.

ಶುಕ್ರವಾರ ದೆಹಲಿಯ ಏಮ್ಸ್‌ನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಒಡಿಶಾ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

“ಬಲಂಗಾ ಪ್ರದೇಶದ ಬಾಲಕಿಯ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಸರ್ಕಾರ ಮತ್ತು ದೆಹಲಿಯ ಏಮ್ಸ್‌ನ ತಜ್ಞ ವೈದ್ಯಕೀಯ ತಂಡದ ನಿರಂತರ ಪ್ರಯತ್ನಗಳ ಹೊರತಾಗಿಯೂ, ಆಕೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಬಾಲಕಿಯ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಆಕೆಯ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರ ಮುಂದೆ ಪ್ರಾರ್ಥಿಸುತ್ತೇನೆ” ಎಂದು ಸಿಎಂ ಮಾಝಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಡಿಶಾದ ಉಪಮುಖ್ಯಮಂತ್ರಿಗಳಾದ ಕೆ.ವಿ. ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಕೂಡ ಬಾಲಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಿಜೆಡಿ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ಬಾಲಕಿಯ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಆಕೆಯ ಕುಟುಂಬಕ್ಕೆ ಸಂತಾಪ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ನೇತೃತ್ವದ ಬಿಜೆಡಿ ಸಂಸದರ ನಿಯೋಗವು ದೆಹಲಿಯ ಏಮ್ಸ್‌ಗೆ ಭೇಟಿ ನೀಡಿದೆ ಎಂದು ವರದಿಯಾಗಿದೆ.

ಒಡಿಶಾ ಪೊಲೀಸರು ಕೂಡ ಬಾಲಕಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಆಕೆ ಸುಟ್ಟು ಕರಕಲಾದ ಘಟನೆಯ ತನಿಖೆ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ವಿಷಯದ ಬಗ್ಗೆ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (ಒಪಿಸಿಸಿ) ಅಧ್ಯಕ್ಷ ಭಕ್ತ ಚರಣ್ ದಾಸ್ ಕೂಡ ಬಾಲಕಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಮೂವರು ದುಷ್ಕರ್ಮಿಗಳನ್ನು ವಾರದೊಳಗೆ ಬಂಧಿಸಬೇಕು. ಇಲ್ಲದಿದ್ದರೆ ನಾವು ಡಿಜಿಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ದಾಸ್ ಹೇಳಿದ್ದಾರೆ.

ಬಾಲಕಿಗೆ ಬೆಂಕಿ ಹಚ್ಚಿ 15 ದಿನಗಳು ಕಳೆದಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಅಪರಾಧಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 2 ಅನ್ನು ‘ಕೆಟ್ಟ ಶನಿವಾರ’ ಎಂದು ದಾಸ್ ಬಣ್ಣಿಸಿದ್ದು, ಏಕೆಂದರೆ ಶನಿವಾರ (ಜುಲೈ 19) ಬಾಲಕಿಗೆ ಬೆಂಕಿ ಹಚ್ಚಲಾಗಿತ್ತು ಎಂದಿದ್ದಾರೆ.

ಈ ನಡುವೆ, ಪುರಿ ಪೊಲೀಸರು ಬಾಲಂಗದಲ್ಲಿರುವ ಮೃತ ಬಾಲಕಿಯ ಮನೆಯ ಬಳಿ ಕೆಲ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯಲಾರದೆ ಬಾಲಸೋರ್‌ನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಬಾಲಕಿಗೆ ಬೆಂಕಿ ಹಚ್ಚಿ ಕೊಂದಿರುವ ಈ ಘಟನೆ ನಡೆದಿದೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಹಿಂಸಾಚಾರ ಹೆಚ್ಚಳ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...