Homeಮುಖಪುಟದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

- Advertisement -
- Advertisement -

ಹದಿನೈದು ದಿನಗಳ ಹಿಂದೆ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ, ಬೆಂಕಿ ಹಚ್ಚಿದ್ದರು ಎನ್ನಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಆ.2) ತಿಳಿಸಿದ್ದಾರೆ.

ಜುಲೈ 19ರಂದು ಬೆಳಿಗ್ಗೆ ಪುರಿ ಜಿಲ್ಲೆಯ ಭಾರ್ಗವಿ ನದಿಯ ದಡದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ್ದರು ಎಂದು ವರದಿಯಾಗಿತ್ತು.

ಬಾಲಕಿ ತನ್ನ ಸ್ನೇಹಿತೆಯನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ, ಮಾರ್ಗ ಮಧ್ಯೆ ಆಕೆಯನ್ನು ತಡೆದಿದ್ದ ಮೂವರು ವ್ಯಕ್ತಿಗಳು ಅಪಹರಿಸಿ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದಿದ್ದರು. ಅಲ್ಲಿ ಸೀಮೆ ಎಣ್ಣೆಯಂತಹ ವಸ್ತುವನ್ನು ಆಕೆಯ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ್ದರು ಎಂದು ಬಾಲಕಿಯ ತಾಯಿ ಬಲಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶೇಕಡ 70ರಷ್ಟು ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿಯನ್ನು ಆರಂಭದಲ್ಲಿ ಸ್ಥಳೀಯ ಪಿಪಿಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ಆ ದಿನವೇ ಆಕೆಯನ್ನು ಭುವನೇಶ್ವರದ ಏಮ್ಸ್ ಸ್ಥಳಾಂತರಿಸಲಾಗಿತ್ತು. ಅಲ್ಲಿಂದ ಮರುದಿನ ದೆಹಲಿಯ ಏಮ್ಸ್‌ಗೆ ಏರ್‌ಲಿಫ್ಟ್ ಮಾಡಲಾಗಿತ್ತು. ಅಲ್ಲಿ ಆಕೆಗೆ ಕನಿಷ್ಠ ಎರಡು ಶಸ್ತ್ರಚಿಕಿತ್ಸೆಗಳು ಮತ್ತು ಚರ್ಮ ಕಸಿ ಮಾಡಲಾಗಿತ್ತು.

ಶುಕ್ರವಾರ ದೆಹಲಿಯ ಏಮ್ಸ್‌ನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಒಡಿಶಾ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

“ಬಲಂಗಾ ಪ್ರದೇಶದ ಬಾಲಕಿಯ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಸರ್ಕಾರ ಮತ್ತು ದೆಹಲಿಯ ಏಮ್ಸ್‌ನ ತಜ್ಞ ವೈದ್ಯಕೀಯ ತಂಡದ ನಿರಂತರ ಪ್ರಯತ್ನಗಳ ಹೊರತಾಗಿಯೂ, ಆಕೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಬಾಲಕಿಯ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಆಕೆಯ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರ ಮುಂದೆ ಪ್ರಾರ್ಥಿಸುತ್ತೇನೆ” ಎಂದು ಸಿಎಂ ಮಾಝಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಡಿಶಾದ ಉಪಮುಖ್ಯಮಂತ್ರಿಗಳಾದ ಕೆ.ವಿ. ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಕೂಡ ಬಾಲಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಿಜೆಡಿ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ಬಾಲಕಿಯ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಆಕೆಯ ಕುಟುಂಬಕ್ಕೆ ಸಂತಾಪ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ನೇತೃತ್ವದ ಬಿಜೆಡಿ ಸಂಸದರ ನಿಯೋಗವು ದೆಹಲಿಯ ಏಮ್ಸ್‌ಗೆ ಭೇಟಿ ನೀಡಿದೆ ಎಂದು ವರದಿಯಾಗಿದೆ.

ಒಡಿಶಾ ಪೊಲೀಸರು ಕೂಡ ಬಾಲಕಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಆಕೆ ಸುಟ್ಟು ಕರಕಲಾದ ಘಟನೆಯ ತನಿಖೆ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ವಿಷಯದ ಬಗ್ಗೆ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (ಒಪಿಸಿಸಿ) ಅಧ್ಯಕ್ಷ ಭಕ್ತ ಚರಣ್ ದಾಸ್ ಕೂಡ ಬಾಲಕಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಮೂವರು ದುಷ್ಕರ್ಮಿಗಳನ್ನು ವಾರದೊಳಗೆ ಬಂಧಿಸಬೇಕು. ಇಲ್ಲದಿದ್ದರೆ ನಾವು ಡಿಜಿಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ದಾಸ್ ಹೇಳಿದ್ದಾರೆ.

ಬಾಲಕಿಗೆ ಬೆಂಕಿ ಹಚ್ಚಿ 15 ದಿನಗಳು ಕಳೆದಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಅಪರಾಧಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 2 ಅನ್ನು ‘ಕೆಟ್ಟ ಶನಿವಾರ’ ಎಂದು ದಾಸ್ ಬಣ್ಣಿಸಿದ್ದು, ಏಕೆಂದರೆ ಶನಿವಾರ (ಜುಲೈ 19) ಬಾಲಕಿಗೆ ಬೆಂಕಿ ಹಚ್ಚಲಾಗಿತ್ತು ಎಂದಿದ್ದಾರೆ.

ಈ ನಡುವೆ, ಪುರಿ ಪೊಲೀಸರು ಬಾಲಂಗದಲ್ಲಿರುವ ಮೃತ ಬಾಲಕಿಯ ಮನೆಯ ಬಳಿ ಕೆಲ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯಲಾರದೆ ಬಾಲಸೋರ್‌ನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಬಾಲಕಿಗೆ ಬೆಂಕಿ ಹಚ್ಚಿ ಕೊಂದಿರುವ ಈ ಘಟನೆ ನಡೆದಿದೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಹಿಂಸಾಚಾರ ಹೆಚ್ಚಳ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...