Homeಮುಖಪುಟ15 ವರ್ಷ ಹಳೆಯ ವಾಹನಗಳಿಗೆ ಇಂಧನ ಸಿಗಲ್ಲ; ದೆಹಲಿ ಬಿಜೆಪಿ ಸರ್ಕಾರದಿಂದ ಮಹತ್ವದ ಘೋಷಣೆ

15 ವರ್ಷ ಹಳೆಯ ವಾಹನಗಳಿಗೆ ಇಂಧನ ಸಿಗಲ್ಲ; ದೆಹಲಿ ಬಿಜೆಪಿ ಸರ್ಕಾರದಿಂದ ಮಹತ್ವದ ಘೋಷಣೆ

- Advertisement -
- Advertisement -

ವಾಯು ಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ನದಲ್ಲಿ ಬಿಜೆಪಿ ನೇತೃತ್ವದ ದೆಹಲಿ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮಾರ್ಚ್ 31 ರ ನಂತರ ರಾಜಧಾನಿಯ ಪೆಟ್ರೋಲ್ ಪಂಪ್‌ಗಳಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಇಂಧನ ತುಂಬಲು ಅವಕಾಶ ನೀಡಲಾಗುವುದಿಲ್ಲ ಎಂದು ಶನಿವಾರ ಹೇಳಿದೆ.

ವಾಯು ಮಾಲಿನ್ಯವನ್ನು ಎದುರಿಸಲು ಕ್ರಮಗಳನ್ನು ಚರ್ಚಿಸಲು ಅಧಿಕಾರಿಗಳೊಂದಿಗೆ ನಡೆದ ನಿರ್ಣಾಯಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ನಗರದಲ್ಲಿ ವಾಹನಗಳ ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

“ನಾವು 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸುವ ಗ್ಯಾಜೆಟ್‌ಗಳನ್ನು ಪೆಟ್ರೋಲ್ ಪಂಪ್‌ಗಳಲ್ಲಿ ಸ್ಥಾಪಿಸುತ್ತಿದ್ದೇವೆ. ಅವುಗಳಿಗೆ ಯಾವುದೇ ಇಂಧನವನ್ನು ಒದಗಿಸಲಾಗುವುದಿಲ್ಲ. ಈ ನಿರ್ಧಾರದ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಾಗುವುದು” ಎಂದು ಹೇಳಿದರು.

ನಿಯಮವನ್ನು ಜಾರಿಗೊಳಿಸಲು ಮತ್ತು ಪಾಲಿಸದ ವಾಹನಗಳನ್ನು ಗುರುತಿಸಲು ಸರ್ಕಾರವು ವಿಶೇಷ ಕಾರ್ಯಪಡೆಯನ್ನು ಸಹ ಸ್ಥಾಪಿಸುತ್ತದೆ.

“ಈ ತಂಡವು ಏಪ್ರಿಲ್ 1 ರಿಂದ ಕಟ್ಟುನಿಟ್ಟಿನ ಅನುಷ್ಠಾನದ ಮೇಲ್ವಿಚಾರಣೆ ನಡೆಸುತ್ತದೆ. ಹೆಚ್ಚುವರಿಯಾಗಿ, ದೆಹಲಿಗೆ ಪ್ರವೇಶಿಸುವ ಭಾರೀ ವಾಹನಗಳ ಪರಿಶೀಲನೆಯನ್ನು ತೀವ್ರಗೊಳಿಸುತ್ತೇವೆ, ಪ್ರವೇಶಕ್ಕೆ ಅವಕಾಶ ನೀಡುವ ಮೊದಲು ಅವು ನಿಗದಿತ ಪರಿಸರ ಮಾನದಂಡಗಳನ್ನು ಪೂರೈಸುತ್ತವೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಸಿರ್ಸಾ ಹೇಳಿದರು.

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್‌) ಈಗಾಗಲೇ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳು ರಸ್ತೆಗಳಲ್ಲಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸುವ ನೀತಿಯನ್ನು ಜಾರಿಗೊಳಿಸಿದೆ. 2021 ರ ನಿರ್ದೇಶನವು ಈ ನಿಯಮವನ್ನು ಬಲಪಡಿಸಿತು, ಜನವರಿ 1, 2022 ರ ನಂತರ ಕಂಡುಬರುವ ಉಲ್ಲಂಘನೆದಾರರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್‌ಯಾರ್ಡ್‌ಗಳಿಗೆ ಕಳುಹಿಸಬೇಕು ಎಂದು ಕಡ್ಡಾಯಗೊಳಿಸಿತು.

ಇಂಧನ ತುಂಬುವ ನಿರ್ಬಂಧಗಳನ್ನು ಹೊರತುಪಡಿಸಿ, ದೆಹಲಿಯಲ್ಲಿರುವ ಎಲ್ಲ ಎತ್ತರದ ಕಟ್ಟಡಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಸಂಕೀರ್ಣಗಳು ವಾಯು ಮಾಲಿನ್ಯ ಮಟ್ಟವನ್ನು ನಿಗ್ರಹಿಸಲು ಆಂಟಿ-ಸ್ಮೋಗ್ ಗನ್‌ಗಳನ್ನು ಸ್ಥಾಪಿಸಬೇಕಾಗುತ್ತದೆ.

“ದೆಹಲಿಯಲ್ಲಿ ಕೆಲವು ದೊಡ್ಡ ಹೋಟೆಲ್‌ಗಳು, ಕೆಲವು ದೊಡ್ಡ ಕಚೇರಿ ಸಂಕೀರ್ಣಗಳು, ದೆಹಲಿ ವಿಮಾನ ನಿಲ್ದಾಣ, ದೊಡ್ಡ ನಿರ್ಮಾಣ ತಾಣಗಳಿವೆ. ಅವರೆಲ್ಲರೂ ತಮ್ಮ ಸ್ಥಳಗಳಲ್ಲಿ ಮಾಲಿನ್ಯವನ್ನು ನಿಯಂತ್ರಿಸಲು ತಕ್ಷಣವೇ ಆಂಟಿ-ಸ್ಮೋಗ್ ಗನ್‌ಗಳನ್ನು ಸ್ಥಾಪಿಸುವುದನ್ನು ನಾವು ಕಡ್ಡಾಯಗೊಳಿಸಲಿದ್ದೇವೆ” ಎಂದು ಸಿರ್ಸಾ ಹೇಳಿದರು.

“ದೆಹಲಿಯ ಎಲ್ಲ ಬಹುಮಹಡಿ ಕಟ್ಟಡಗಳಲ್ಲಿ ಸ್ಮಾಗ್ ಗನ್‌ಗಳನ್ನು ಅಳವಡಿಸುವುದನ್ನು ನಾವು ಕಡ್ಡಾಯಗೊಳಿಸುತ್ತೇವೆ. ಅದೇ ರೀತಿ, ಎಲ್ಲ ವಾಣಿಜ್ಯ ಸಂಕೀರ್ಣಗಳಿಗೂ ಈ ಅವಶ್ಯಕತೆಯನ್ನು ಜಾರಿಗೊಳಿಸಲಾಗುವುದು” ಎಂದು ಅವರು ಹೇಳಿದರು.

ಇದಲ್ಲದೆ, ಡಿಸೆಂಬರ್ 2025 ರ ವೇಳೆಗೆ ದೆಹಲಿಯ ಸುಮಾರು 90 ಪ್ರತಿಶತದಷ್ಟು ಸಾರ್ವಜನಿಕ ಸಿಎನ್‌ಜಿ ಬಸ್‌ಗಳನ್ನು ನಿವೃತ್ತಿಗೊಳಿಸಿ ವಿದ್ಯುತ್ ಚಾಲಿತ ಬಸ್‌ಗಳೊಂದಿಗೆ ಬದಲಾಯಿಸಲಾಗುವುದು, ಇದು ಸ್ವಚ್ಛ ಮತ್ತು ಹೆಚ್ಚು ಸುಸ್ಥಿರ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸರ್ಕಾರದ ಉಪಕ್ರಮಕ್ಕೆ ಅನುಗುಣವಾಗಿದೆ ಎಂದು ಸಿರ್ಸಾ ಹೇಳಿದರು.

ಸೇನಾ ವಿರೋಧಿ ಟ್ವೀಟ್‌; ಶೆಹ್ಲಾ ರಶೀದ್ ಮೇಲಿನ ಪ್ರಕರಣ ಹಿಂಪಡೆಯಲು ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...