Homeಮುಖಪುಟಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸದ ಹಿನ್ನೆಲೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್‌ಪುರದಲ್ಲಿ ಮೂವರು ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ, 15 ವರ್ಷದ ದಲಿತ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಚಿತ್ರಕೂಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಂಕಿತ್ ಮಿತ್ತಲ್ ಘಟನೆಯನ್ನು ಖಚಿತಪಡಿಸಿ, ಅಪ್ರಾಪ್ತೆ ಮಂಗಳವಾರ ಮಾಣಿಕ್‌ಪುರದಲ್ಲಿ ಪ್ರದೇಶದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ’ಅಕ್ಟೋಬರ್ 8 ರಂದು ಅರಣ್ಯ ಪ್ರದೇಶದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ’ ಎಂದು ಎಸ್‌ಪಿ ಅಂಕಿತ್‌ ಮಿತ್ತಲ್ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಗ್ರಾಮದ ಮಾಜಿ ಮುಖಂಡರ ಮಗ ಕಿಶನ್ ಉಪಾಧ್ಯಾಯ, ಆಶಿಶ್ ಮತ್ತು ಸತೀಶ್ ಎಂಬುವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ಎಸ್‌.ಸಿ/ಎಸ್‌.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ ) ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಮಿತ್ತಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮೂವರು ಅಪ್ರಾಪ್ತ ದಲಿತ ಸಹೋದರಿಯರ ಮೇಲೆ ಕೆಮಿಕಲ್ ದಾಳಿ!

ಮಗಳ ಮೇಲೆ ಅತ್ಯಾಚಾರ ಮಾಡಿದ ನಂತರ ಆರೋಪಿಗಳು ಆಕೆಯ ಕೈ ಕಾಲುಗಳನ್ನು ಕಟ್ಟಿದ್ದರು. ಪೊಲೀಸರೇ ಮಗಳನ್ನು ಮನೆಗೆ ಕರೆತಂದರು. ಆದರೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಿಲ್ಲ. ದೂರು ದಾಖಲಿಸದ ಹಿನ್ನೆಲೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.

‌ಆದರೆ ಆರೋಪ ನಿರಾಕರಿಸಿರುವ ಪೊಲೀಸರು, ಸಂತ್ರಸ್ತ ಬಾಲಕಿ, ಬಾಲಕಿಯ ಕುಟುಂಬದವರು ಯಾರು ಎಫ್ಐಆರ್ ದಾಖಲಿಸಲು ಯಾವುದೇ ಅರ್ಜಿಯನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯು ಅತ್ಯಾಚಾರವನ್ನು ದೃಢಿಕರಿಸಿಲ್ಲ. ಮಾದರಿಗಳನ್ನು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಗ್ರಾಮದಲ್ಲಿ ಬುಧವಾರ ಬಾಲಕಿಯ ಅಂತ್ಯಕ್ರಿಯೆ ನಡೆಯಲಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರು ಮೇಲ್ಜಾತಿಯ ಪುರುಷರು 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಸಾವಿಗೆ ಕಾರಣರಾದ ಘಟನೆ ಇನ್ನು ಜನರ ಮನಸ್ಸಿನಲ್ಲಿ ಜೀವಂತವಾಗಿರುವಾಗಲೇ ಉತ್ತರ ಪ್ರದೇಶದಲ್ಲಿ ಮತ್ತೆ ಮತ್ತೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ.

ನಿನ್ನೆಯಷ್ಟೇ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರಾಸಾಯನಿಕ ಸುರಿದು ಓಡಿಹೋಗಿದ್ದ. ಮೂವರು ಬಾಲಕಿಯರು ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿ ದಿನ ಒಂದಲ್ಲ ಒಂದು ಘಟನೆಗಳು ರಾಜ್ಯದಲ್ಲಿ ವರದಿಯಾಗುತ್ತಲೇ ಇವೆ. ಆದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ವಿಪಕ್ಷಗಳು, ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ – 104


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...