Homeಕರ್ನಾಟಕ31 ವರ್ಷಗಳಲ್ಲಿ 150 ಬೋರ್‌ವೆಲ್: ರೈತನ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕ ಪ್ರತಿಫಲ

31 ವರ್ಷಗಳಲ್ಲಿ 150 ಬೋರ್‌ವೆಲ್: ರೈತನ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕ ಪ್ರತಿಫಲ

ಆದರೆ ಬಸಾಪುರ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸರ್ಕಾರ ನಮಗೆ ನೋಟಿಸ್ ನೀಡಿದೆ- ಚನ್ನಕುಮಾರ ಮೇಟಿ

- Advertisement -
- Advertisement -

ಕಳೆದ 31 ವರ್ಷಗಳಲ್ಲಿ 150 ಬೋರ್‌ವೆಲ್‌ಗಳನ್ನು ಕೊರೆಸಿದರೂ ನೀರು ಸಿಕ್ಕಿರಲಿಲ್ಲ. ಆದರೆ ಕಳೆದ ವಾರ ಕೊನೆಯ ಪ್ರಯತ್ನ ಯಶಸ್ವಿಯಾಗಿ ನೀರು ಸಿಕ್ಕಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕುತುಗನಹಳ್ಳಿ ಗ್ರಾಮದ 53 ವರ್ಷದ ಅಶೋಕ್ ಮೇಟಿಯ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಒಂದು ವಾರದಲ್ಲಿ 4 ಬೋರ್‌ವೆಲ್‌ಗಳನ್ನು ಕೊರೆಸಿದ್ದಾರೆ. 31 ವರ್ಷಗಳ ಪ್ರಯತ್ನವು ಕೊನೆಗೂ ಪ್ರತಿಫಲ ನೀಡಿದೆ.

“ನಾವು ನೀರನ್ನು ಪಡೆಯಲು ಕಳೆದ 31 ವರ್ಷಗಳಲ್ಲಿ ಎಲ್ಲಾ ರೀತಿಯಿಂದಲೂ ಪ್ರಯತ್ನಿಸಿದ್ದೇವೆ. ನೀರು ಸಿಗುವ ಬಿಂದುವನ್ನು ಕಂಡುಹಿಡಿಯಲು ನಾವು ಯಂತ್ರೋಪಕರಣಗಳ ವಿಧಾನ ಮತ್ತು ಸಾಂಪ್ರದಾಯಿಕ ವಿಧಾನಗಳನ್ನು ಬಳಸಿದ್ದೇವೆ. ಆದರೆ ಅವುಗಳೆಲ್ಲವೂ ವ್ಯರ್ಥವಾಗಿತ್ತು. ನಾವು ಜಮೀನಿನಲ್ಲಿ ಪೂಜೆಗಳನ್ನು ಸಹ ಮಾಡಿದ್ದೇವೆ. ಅಂತಿಮವಾಗಿ ಕಳೆದ ವಾರ ನೀರು ಸಿಕ್ಕಿದೆ. ಸುಮಾರು 3 ಇಂಚುಗಳಷ್ಟು ನೀರು ಬರುತ್ತಿದೆ” ಎಂದು ಅಶೋಕ್ ಮೇಟಿ ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್…

“ನಾವು ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುತ್ತಿದ್ದೆವು. ಈಗ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿರುವುದರಿಂದ ಕೃಷಿಯನ್ನು ಇನ್ನಷ್ಟು ವಿಸ್ತರಿಸಲು ಯೋಚಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಕೊಪ್ಪಳ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಅಂತರ್ಜಲ ಕೆಲವೊಮ್ಮೆ ತುಂಬಾ ಆಳದಲ್ಲಿರುತ್ತದೆ. ಕಳೆದ ಎರಡು ವರ್ಷಗಳಿಂದ ಈ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಇದು ಅಂತರ್ಜಲ ಮಟ್ಟವನ್ನು ಹೆಚ್ಚಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಈ ರೈತ ಬೋರ್‌ವೆಲ್‌ನಲ್ಲಿ ನೀರು ಪಡೆಯಲು ಸಾಧ್ಯವಾಗಿರಬಹುದು ಎಂದು ಜಲವಿಜ್ಞಾನ ತಜ್ಞರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಅಶೋಕ್ ಮೇಟಿಯವರು ಬೋರ್‌ವೆಲ್ ಕೊರೆಸುವುದರಲ್ಲಿ ವಿಫಲವಾಗಿದ್ದರೂ ಸಹ ತಮ್ಮ ಪ್ರಯತ್ನವನ್ನು ನಿಲ್ಲಿಸಲಿಲ್ಲ. ಇವರ ಕುಟುಂಬವು 27 ಎಕರೆ ಭೂಮಿಯನ್ನು ಹೊಂದಿದೆ” ಎಂದು ಕುತಗನಹಳ್ಳಿಯ ಗ್ರಾಮಸ್ಥರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

“ಸತತವಾಗಿ ಬೋರ್‌ವೆಲ್ ಕೊರೆಸಿದ್ದರಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಹಣ ಖರ್ಚಾಗಿತ್ತು. ಇದರಿಂದ ಬೇಸತ್ತ ಕುಟುಂಬವು 27 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿತ್ತು. ಆದರೆ ಕೊನೆಯ ಪ್ರಯತ್ನವಾಗಿ ಕುಟುಂಬದವರಿಗೆ ತಿಳಿಸದೇ ಕಳೆದ ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಸಲು ನಿರ್ಧರಿಸಿದೆ. ಆಗ ನಮ್ಮ ಪ್ರಯತ್ನಕ್ಕೆ ಪ್ರತಿಫಲ ಸಿಕ್ಕಿತು” ಎಂದು ಅಶೋಕ್ ಮೇಟಿ ಕುಟುಂಬ ಸದಸ್ಯರಾದ ಚನ್ನಕುಮಾರ ಮೇಟಿ ಟೈಮ್ಸ್‌ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಆದರೆ ಬಸಾಪುರ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸರ್ಕಾರ ನಮಗೆ ನೋಟಿಸ್ ನೀಡಿದೆ. ಈಗ ನಾವು ಸಂತೋಷ ಪಡಬೇಕೋ ಅಥವಾ ನೋಟಿಸ್‌ಗೆ ಉತ್ತರಿಸಬೇಕೋ ತಿಳಿಯುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಾಳೆ ಪ್ರಧಾನಿ ತಮಿಳುನಾಡಿಗೆ – ಇಂದೇ ಪ್ರಾರಂಭವಾದ #GoBackModi ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...