Homeಕರ್ನಾಟಕ31 ವರ್ಷಗಳಲ್ಲಿ 150 ಬೋರ್‌ವೆಲ್: ರೈತನ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕ ಪ್ರತಿಫಲ

31 ವರ್ಷಗಳಲ್ಲಿ 150 ಬೋರ್‌ವೆಲ್: ರೈತನ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕ ಪ್ರತಿಫಲ

ಆದರೆ ಬಸಾಪುರ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸರ್ಕಾರ ನಮಗೆ ನೋಟಿಸ್ ನೀಡಿದೆ- ಚನ್ನಕುಮಾರ ಮೇಟಿ

- Advertisement -
- Advertisement -

ಕಳೆದ 31 ವರ್ಷಗಳಲ್ಲಿ 150 ಬೋರ್‌ವೆಲ್‌ಗಳನ್ನು ಕೊರೆಸಿದರೂ ನೀರು ಸಿಕ್ಕಿರಲಿಲ್ಲ. ಆದರೆ ಕಳೆದ ವಾರ ಕೊನೆಯ ಪ್ರಯತ್ನ ಯಶಸ್ವಿಯಾಗಿ ನೀರು ಸಿಕ್ಕಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕುತುಗನಹಳ್ಳಿ ಗ್ರಾಮದ 53 ವರ್ಷದ ಅಶೋಕ್ ಮೇಟಿಯ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಒಂದು ವಾರದಲ್ಲಿ 4 ಬೋರ್‌ವೆಲ್‌ಗಳನ್ನು ಕೊರೆಸಿದ್ದಾರೆ. 31 ವರ್ಷಗಳ ಪ್ರಯತ್ನವು ಕೊನೆಗೂ ಪ್ರತಿಫಲ ನೀಡಿದೆ.

“ನಾವು ನೀರನ್ನು ಪಡೆಯಲು ಕಳೆದ 31 ವರ್ಷಗಳಲ್ಲಿ ಎಲ್ಲಾ ರೀತಿಯಿಂದಲೂ ಪ್ರಯತ್ನಿಸಿದ್ದೇವೆ. ನೀರು ಸಿಗುವ ಬಿಂದುವನ್ನು ಕಂಡುಹಿಡಿಯಲು ನಾವು ಯಂತ್ರೋಪಕರಣಗಳ ವಿಧಾನ ಮತ್ತು ಸಾಂಪ್ರದಾಯಿಕ ವಿಧಾನಗಳನ್ನು ಬಳಸಿದ್ದೇವೆ. ಆದರೆ ಅವುಗಳೆಲ್ಲವೂ ವ್ಯರ್ಥವಾಗಿತ್ತು. ನಾವು ಜಮೀನಿನಲ್ಲಿ ಪೂಜೆಗಳನ್ನು ಸಹ ಮಾಡಿದ್ದೇವೆ. ಅಂತಿಮವಾಗಿ ಕಳೆದ ವಾರ ನೀರು ಸಿಕ್ಕಿದೆ. ಸುಮಾರು 3 ಇಂಚುಗಳಷ್ಟು ನೀರು ಬರುತ್ತಿದೆ” ಎಂದು ಅಶೋಕ್ ಮೇಟಿ ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್…

“ನಾವು ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುತ್ತಿದ್ದೆವು. ಈಗ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿರುವುದರಿಂದ ಕೃಷಿಯನ್ನು ಇನ್ನಷ್ಟು ವಿಸ್ತರಿಸಲು ಯೋಚಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಕೊಪ್ಪಳ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಅಂತರ್ಜಲ ಕೆಲವೊಮ್ಮೆ ತುಂಬಾ ಆಳದಲ್ಲಿರುತ್ತದೆ. ಕಳೆದ ಎರಡು ವರ್ಷಗಳಿಂದ ಈ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಇದು ಅಂತರ್ಜಲ ಮಟ್ಟವನ್ನು ಹೆಚ್ಚಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಈ ರೈತ ಬೋರ್‌ವೆಲ್‌ನಲ್ಲಿ ನೀರು ಪಡೆಯಲು ಸಾಧ್ಯವಾಗಿರಬಹುದು ಎಂದು ಜಲವಿಜ್ಞಾನ ತಜ್ಞರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಅಶೋಕ್ ಮೇಟಿಯವರು ಬೋರ್‌ವೆಲ್ ಕೊರೆಸುವುದರಲ್ಲಿ ವಿಫಲವಾಗಿದ್ದರೂ ಸಹ ತಮ್ಮ ಪ್ರಯತ್ನವನ್ನು ನಿಲ್ಲಿಸಲಿಲ್ಲ. ಇವರ ಕುಟುಂಬವು 27 ಎಕರೆ ಭೂಮಿಯನ್ನು ಹೊಂದಿದೆ” ಎಂದು ಕುತಗನಹಳ್ಳಿಯ ಗ್ರಾಮಸ್ಥರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

“ಸತತವಾಗಿ ಬೋರ್‌ವೆಲ್ ಕೊರೆಸಿದ್ದರಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಹಣ ಖರ್ಚಾಗಿತ್ತು. ಇದರಿಂದ ಬೇಸತ್ತ ಕುಟುಂಬವು 27 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿತ್ತು. ಆದರೆ ಕೊನೆಯ ಪ್ರಯತ್ನವಾಗಿ ಕುಟುಂಬದವರಿಗೆ ತಿಳಿಸದೇ ಕಳೆದ ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಸಲು ನಿರ್ಧರಿಸಿದೆ. ಆಗ ನಮ್ಮ ಪ್ರಯತ್ನಕ್ಕೆ ಪ್ರತಿಫಲ ಸಿಕ್ಕಿತು” ಎಂದು ಅಶೋಕ್ ಮೇಟಿ ಕುಟುಂಬ ಸದಸ್ಯರಾದ ಚನ್ನಕುಮಾರ ಮೇಟಿ ಟೈಮ್ಸ್‌ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಆದರೆ ಬಸಾಪುರ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸರ್ಕಾರ ನಮಗೆ ನೋಟಿಸ್ ನೀಡಿದೆ. ಈಗ ನಾವು ಸಂತೋಷ ಪಡಬೇಕೋ ಅಥವಾ ನೋಟಿಸ್‌ಗೆ ಉತ್ತರಿಸಬೇಕೋ ತಿಳಿಯುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಾಳೆ ಪ್ರಧಾನಿ ತಮಿಳುನಾಡಿಗೆ – ಇಂದೇ ಪ್ರಾರಂಭವಾದ #GoBackModi ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...