Homeಚಳವಳಿರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು...

ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

- Advertisement -
- Advertisement -

ಜಗತ್ತಿಗೆ ಮಾದರಿಯಾದ ಐತಿಹಾಸಿಕ ರೈತ ಹೋರಾಟ ಸೋಮವಾರ (ಏಪ್ರಿಲ್ 26) 150 ದಿನಗಳನ್ನು ಪೂರೈಸುತ್ತಿದೆ. ದೆಹಲಿಯ ನಾಲ್ಕು ಗಡಿಗಳಲ್ಲಿ ಕುಳಿತಿರುವ ಪ್ರತಿಭಟನಾ ನಿರತ ರೈತರು ಇನ್ನು ಮೊದಲ ದಿನದ ಉತ್ಸಾಹವನ್ನೇ ಹೊಂದಿದ್ದು, ಭವಿಷ್ಯದ ಹೋರಾಟಗಳಿಗೆ ಮಾದರಿಯಾಗಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಈ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕೆ 150 ದಿನಗಳು ಸಂದಿವೆ. 2020ರ ನವೆಂಬರ್‌ 26 ರಂದು ದೆಹಲಿಯ ಗಡಿಗಳಿಗೆ ಬಂದಿಳಿದ ದೇಶದ ಅನ್ನದಾತರ ಹೋರಾಟ ಈಗ ದೇಶಾದ್ಯಂತ ಪಸರಿಸಿದೆ. ಎಲ್ಲಾ ರಾಜ್ಯಗಳಲ್ಲೂ ರೈತ ಹೋರಾಟದ ಕಾವಿದೆ. ಇದರ ನಡುವೆಯೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದರೂ ಹೋರಾಟಗಾರರರಲ್ಲಿ ಯಾವುದೇ ಆತಂಕ ಕಾಣಿಸುತ್ತಿಲ್ಲ. ಕೊರೊನಾ ಬಗ್ಗೆ ಜಾಗೃತಿ ವಹಿಸುತ್ತ ಮತ್ತಷ್ಟು ತೀವ್ರವಾಗಿ ಹೋರಾಟಕ್ಕೆ ಸಜ್ಜಾಗಿದ್ದಾರೆ.

ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ್‌ ಮತ್ತು ರಾಜಸ್ಥಾನದ ಶಹಜಾನ್‌ಪುರ್‌ ಗಡಿಗಳಲ್ಲಿ ಕಳೆದ ಐದು ತಿಂಗಳಿನಿಂದ ಕುಳಿತಿದ್ದಾರೆ. ಪಂಜಾಬಿನಲ್ಲಿ 8 ತಿಂಗಳುಗಳೇ ಕಳೆದಿವೆ. ಆದರೆ ಈ ಹೋರಾಟಗಾರರಲ್ಲಿ ಪ್ರತಿಭಟನಾ ಉತ್ಸಾಹ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ ಎಂಬುದನ್ನು ಅವರ ಮಾತುಗಳೇ ಹೇಳುತ್ತವೆ. ವಾತಾವರಣಕ್ಕೆ, ಹವಾಮಾನಕ್ಕೆ ತಕ್ಕಂತೆ ತಾವು ಬದಲಾಗುತ್ತಿದ್ದಾರೆಯೇ ಹೊರತು ತಮ್ಮ ಬೇಡಿಕೆಯಿಂದ ಹಿಂದೆ ಸರಿದಿಲ್ಲ ಎಂಬುದು ಈ ಐತಿಹಾಸಿಕ ಹೋರಾಟದ ಮತ್ತೊಂದು ವಿಶೇಷ.

ಇದನ್ನೂ ಓದಿ: ಸಿಂಘು ಬಾರ್ಡರ್‌ನಲ್ಲಿ ಒಂದು ಬದಿಯ ಬ್ಯಾರಿಕೇಡ್ ತೆಗೆಯಲು ರೈತರ ನಿರ್ಧಾರ

150 ದಿನಗಳ ರೈತ ಹೋರಾಟ ದೇಶದ ಜನರಿಗೆ ಹಲವು ಹುರುಪುಗಳನ್ನು ನೀಡಿದೆ. ಇದರಿಂದಾಗಿ ಹಲವು ಧ್ವನಿಗಳು ಒಗ್ಗೂಡಿವೆ. ಕಾರ್ಮಿಕರು, ವಿದ್ಯಾರ್ಥಿಗಳು, ನಿರುದ್ಯೋಗಿಗಳು, ವಕೀಲರು, ವೈದ್ಯರು, ನಾಗರಿಕರು ತಮ್ಮ ಹಕ್ಕುಗಳನ್ನು ಕೇಳಲು ಶುರು ಮಾಡಿದ್ದಾರೆ.

ಕೇವಲ ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರ ಹೋರಾಟ ಎಂದು ಒಕ್ಕೂಟ ಸರ್ಕಾರ ನೀಡಿದ್ದ ಹಣೆಪಟ್ಟಿಯನ್ನು ದೇಶದ ಹಲವು ರಾಜ್ಯಗಳು ಅಳಿಸಿಹಾಕಿವೆ. ಮಹಾ ಪಂಚಾಯತ್ ಎಂಬ ಹೊಸ ಕಿಸಾನ್ ಪಂಚಾಯತ್‌ಗಳ ಮೂಲಕ ದಕ್ಷಿಣ ಭಾರತತದ ರಾಜ್ಯಗಳಿಗೆ ರೈತ ಹೋರಾಟ ಪಸರಿಸಿದ ಪರಿ ನಿಜಕ್ಕೂ ಗಮನಾರ್ಹವಾದದ್ದು.

ಕಳೆದ ಐದು ತಿಂಗಳಿನಿಂದ ದೆಹಲಿಯ ಸಿಂಘು ಬಾರ್ಡರ್‌ನಲ್ಲಿ ರೈತರ ಜೊತೆಗೆ ತಾವು ಒಂದು ಟೆಂಟ್ ಹಾಕಿಕೊಂಡು ಪ್ರತಿಭಟನೆಯಲ್ಲಿರುವ, ಪ್ರತಿಭಟನೆಯನ್ನು ಗಮನಿಸುತ್ತಿರುವ ವರ್ಕಿಂಗ್‌ ಪೀಪಲ್ ಚಾಟರ್‌ನ ನಿರ್ಮಲ್ ತಾವು ಕಂಡ ರೈತ ಹೋರಾಟವನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದು ಹೀಗೆ.

PC: newsbust

” ರೈತರಲ್ಲಿ ನಾನು ಮೊದಲು ಬಂದಾಗ ನೋಡಿದ ಉತ್ಸಾಹವೇ ಈಗಲೂ ಕಾಣುತ್ತಿದ್ದೇನೆ. ಪಂಜಾಬ್, ಹಿಯಾಣದಲ್ಲಿ ಈಗ ಗೋದಿ ಕೊಯ್ಲು ನಡೆಯುತ್ತಿರುವ ಕಾರಣ ಕೊಂಚ ಮಟ್ಟಿಗೆ ಜನಸಂಖ್ಯೆ ಕಡಿಮೆಯಾಗಿದೆ. ಆದರೆ ಗುಡಿಸಲುಗಳ ಸಂಖ್ಯೆ ಹಾಗೆಯೇ ಇದೆ. ಇನ್ನೋಂದು ವಾರದಲ್ಲಿ ಜನ ಮತ್ತೆ ವಾಪಸ್ ಬರುತ್ತಾರೆ. ಅಷ್ಟರಲ್ಲಿ ಕೊಯ್ಲು ಮುಗಿಯುತ್ತದೆ. ಈಗ ಸಿಂಘು ಬಾರ್ಡರ್‌ನಲ್ಲಿ ಎಷ್ಟೋಂದು ಚಂದ ಚಂದದ ಗುಡಿಸಲು, ಮನೆಗಳು ನಿರ್ಮಾಣವಾಗಿವೆ. ಇವುಗಳನ್ನು ನಾನು ಬರಿ ಪುಸ್ತಕದಲ್ಲಿ ಮಾತ್ರ ನೋಡಿದ್ದೆ. ಈಗ ಕಣ್ಣಾರೆ ನೋಡುತ್ತಿದ್ದೇನೆ. ಈಗ ಸುಂದರವಾದ ಬಿದಿರಿನ ಗುಡಿಸಲುಗಳು ಹೆಚ್ಚಾಗಿದ್ದು, ’ಬಾಂಬೂ ಹಟ್ ನಗರ್” ಎಂಬ ಹೊಸ ಹೆಸರು ಇಡಬೇಕಾಗಬಹುದು. ಅಷ್ಟು ಚಂದದ ಮನೆಗಳನ್ನು ಇವರು ನಿರ್ಮಿಸಿದ್ದಾರೆ. ಇವರು ಇಲ್ಲಿಂದ ಕೃಷಿ ಕಾನೂನುಗಳು ವಾಪಸ್ ಆದ ಮೇಲೆಯೇ ಹೊರಡುವುದು” ಎನ್ನುತ್ತಾರೆ ನಿರ್ಮಲ್.

ಈ ಐತಿಹಾಸಿಕ ಹೋರಾಟದಲ್ಲಿ 405 ರೈತರು ಹುತಾತ್ಮರಾಗಿದ್ದಾರೆ. ಅವರ ನೆನಪಿನಲ್ಲಿ ಎಲ್ಲಾ ಗಡಿಗಳಲ್ಲಿಯೂ ಹುತಾತ್ಮ ಸ್ಮಾರಕಗಳನ್ನು ನಿರ್ಮಿಸಲಾಗಿದೆ. ಈ ಸ್ಮಾರಕಗಳಿಗೆ ಮಿಟ್ಟಿ ಸತ್ಯಾಗ್ರಹ ಯಾತ್ರೆಯಲ್ಲಿ 23 ರಾಜ್ಯಗಳ 1500 ಹಳ್ಳಿಗಳಿಂದ ಮಣ್ಣು ಸಂಗ್ರಹಿಸಲಾಗಿತ್ತು.

PC: PARI

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ನಲ್ಲಿಯೇ ಈ ಆಂದೋಲನ ಆರಂಭವಾಗಿತ್ತು. ದೆಹಲಿಯ ರೈತ ಹೋರಾಟಕ್ಕೆ 5 ತಿಂಗಳಾದರೇ, ಪಂಜಾಬಿನ ಹೋರಾಟಕ್ಕೆ ಸರಿ ಸುಮಾರು 8 ತಿಂಗಳುಗಳು ಕಳೆಯುತ್ತಿವೆ. ಇವರ ಹುರುಪು ಮಾತ್ರ ಇನ್ನು ಹೆಚ್ಚಾಗಿದೆ. ದೆಹಲಿಗೆ ಹೋಗಿರುವ ರೈತರ ಮನೆ, ಹೊಲದ ಕೆಲಸಗಳನ್ನೂ ನೋಡಿಕೊಂಡು, ಪಂಜಾಬಿನ ಪ್ರತಿ ಜಿಲ್ಲೆಯ ಮುಖ್ಯ ಘಟಕಗಳಲ್ಲಿ ಪ್ರತಿಭಟನೆ ನಡಸುತ್ತಿರುವ ಈ ರೈತರ ಆತ್ಮಸ್ಥೈರ್ಯ ನಿಜಕ್ಕೂ ಮಾದರಿ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಪಂಜಾಬಿನ ಬರ್ನಾಲಾ ಜಿಲ್ಲೆಯ ರಾಮ್‌ಪುರ್‌ ಪುಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹರ್ಮೇಶ್ ಕುಮಾರ್‌, ಇದು ನಮ್ಮ ಬದುಕಿನ ಪ್ರಶ್ನೆ. ಎಷ್ಟು ವರ್ಷಗಳಾದರೂ ಸರಿ ನಾವು ಪ್ರತಿಭಟನೆ ನಡೆಸುತ್ತೇವೆ ಎನ್ನುತ್ತಾರೆ.

“ಇಷ್ಟು ದಿನಗಳಾದರೂ ರಾಮ್‌ಪುರ್‌ ಪುಲ್‌ನ ರೈಲು ನಿಲ್ದಾಣ, ಮೆಹಲ್ಕಲಾ ಟೋಲ್, ಬರ್ನಾಲಾ ರೈಲು ನಿಲ್ದಾಣ, ರಿಲಯನ್ಸ್ ಮಾಲ್, ಪೆಟ್ರೋಲ್‌ ಬಂಕ್‌ಗಳ ಬಳಿ ಪ್ರತಿಭಟನೆ ನಿಂತಿಲ್ಲ. ದೆಹಲಿಯ ಹೋರಾಟದಂತೆಯೇ ಇಲ್ಲಿನ ಹೋರಾಟದಲ್ಲೂ ಯಾವುದೇ ಉತ್ಸಾಹ ಕಡಿಮೆಯಾಗಿಲ್ಲ” ಎನ್ನುತ್ತಾರೆ ಹರ್ಮೇಶ್ ಕುಮಾರ್‌.

The protesters had been building shelters using bamboo, tin, plywood and even bricks at the Tikri and Singhu borders over the last two weeks to beat the summer heat and rain.
PC: Hindustantimes

ತೀವ್ರ ಚಳಿ ಎದುರಿಸಿ, ಈಗ ತೀವ್ರ ಬಿಸಿಲಿನ ತಾಪಕ್ಕೆ ಇಲ್ಲಿನ ರೈತರು ಒಳಗಾಗಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಇಲ್ಲಿ ಯಾವುದೇ ಆತಂಕಕಾರಿ ಅಂಶಗಳು ವರದಿಯಾಗದಿರುವುದು ಸಮಾಧಾನದ ಸಂಗತಿಯಾಗಿದೆ.

ಕೊರೊನಾ ಮಾರ್ಗಸೂಚಿಯನ್ನು ಅನುಸರಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಈಗಾಗಲೇ ಹೇಳಿದ್ದಾರೆ. ಕೊರೊನಾಕ್ಕಿಂತ ದೊಡ್ಡ ರೋಗ ಬಂದರೂ ನಾವು ಇಲ್ಲಿಂದ ಕದಲುವುದಿಲ್ಲ. ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಮಾತುಗಳನ್ನು ಆಡಿದ್ದಾರೆ.

Image
ಗಾಜಿಪುರ್‌ ಗಡಿಯಲ್ಲಿ ಸ್ಯಾನಿಟೈಝರ್‌ ಸಿಂಪಡಿಸುತ್ತಿರುವ ರೈತ ಮುಖಂಡ ರಾಕೇಶ್ ಟಿಕಾಯತ್

150 ದಿನಗಳಾಯಿತು ಪ್ರತಿಭಟನೆಗೆ ಹೇಗನ್ನಿಸುತ್ತಿದೆ ಎಂದು ಶಹಜಾನ್‌ಪುರ್‌ ಗಡಿಯಲ್ಲಿ ಪ್ರತಿಭಟನಾ ನಿರತರಾಗಿರುವ ರಾಜಸ್ಥಾನದ ರೈತ ರೇಖಾರಾಮ್‌ಗೆ ಪ್ರಶ್ನೆ ಮಾಡಿದ ನಾನುಗೌರಿ.ಕಾಂಗೆ ಅವರು ಕೊಟ್ಟ ಉತ್ತರ ಇದು.

“ನಾವು 150 ದಿನ ಅಲ್ಲ ಎಷ್ಟು ದಿನಗಳಾದರೂ ಇಲ್ಲಿಯೇ ಇರುತ್ತೇವೆ. ಜೀವನವೇ ನಾಶವಾಗುವಾಗ ಊರಿಗೆ ವಾಪಸ್ ಹೋಗಿ ಮಾಡುವುದಾದರೂ ಏನು…? ಗೋಧಿ ಕೊಯ್ಲಿಗಾಗಿ ಕೆಲವು ಮಂದಿ ಊರುಗಳಿಗೆ ಹೋಗಿದ್ದಾರೆ. ಪಾಳಿಯ ಮಾದರಿಯಲ್ಲಿ ಹೋರಾಟ ನಡೆಯುತ್ತಿದೆ. ಎಷ್ಟು ದಿನಗಳಾದರೂ ಇದು ಹೀಗೆಯೇ ಮುಂದುವರೆಯುತ್ತದೆ. ಈ ರಸ್ತೆಗಳೇ ನಮಗೆ ಮನೆಗಳಾಗಿವೆ. ಒಗ್ಗಟ್ಟಾಗಿ ನಿಂತಿದ್ದೇವೆ. ಗೆಲುವು ಪಡೆದೆ ಪಡೆಯುತ್ತೇವೆ” ಎನ್ನುತ್ತಾರೆ ರೈತ ರೇಖಾರಾಮ್.

ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾದ ಡಾ. ದರ್ಶನ್ ಪಾಲ್, ‘ಐದು ತಿಂಗಳ ಕಾಲ ಶಾಂತಿಯುತವಾಗಿ ಪ್ರತಿಭಟಿಸುವ ಮೂಲಕ ರೈತರು ನೈತಿಕವಾಗಿ ಯುದ್ಧವನ್ನು ಗೆದ್ದಿದ್ದಾರೆ. ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಿ, ಕನಿಷ್ಠ ಬೆಂಬಲ ಬೆಲೆಯನ್ನು ಕಾಯ್ದೆ ಮಾಡಿದ ಮಾಡಿದ ನಂತರ ನಮ್ಮ ಗೆಲುವು ಪೂರ್ಣಗೊಳ್ಳುತ್ತದೆ’ ಎನ್ನುತ್ತಾರೆ.

ಪ್ರತಿಭಟನೆಯೊಂದು ಇಷ್ಟು ದೀರ್ಘಕಾಲದವರೆಗೆ ಇಷ್ಟು ಒಗ್ಗಟ್ಟಿನಿಂದ ನಡೆಯುತ್ತಿರುವುದು ಇದೇ ಮೊದಲು. ಚಳಿಗಾಲದಲ್ಲಿ ಟ್ಯ್ರಾಲಿಗಳನ್ನು ಆಶ್ರಯಿಸಿದ್ದ ರೈತರು, ಈಗ ಬಿದಿರಿನ, ಹುಲ್ಲಿನ ಗುಡಿಸಲುಗಳನ್ನು ಆಶ್ರಯಿಸಿದ್ದಾರೆ. ಮೇ  10 ರ ಒಳಗೆ ಎಲ್ಲಾ ಗೋಧಿ ಕೊಯ್ಲಿನ ಕೆಲಸ ಮುಗಿಯುತ್ತದೆ. ಪ್ರತಿಭಟನೆಗೆ ಮತ್ತಷ್ಟು ಬಿರುಸು ಬರುತ್ತದೆ ಎನ್ನುತ್ತಾರೆ ಪ್ರತಿಭಟನಾ ನಿರತ ರೈತರು.


ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...