Homeಕರ್ನಾಟಕರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

- Advertisement -
- Advertisement -

ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ ಎಂಬ ನೆಪದಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸುಮಾರು 1500 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗಿದೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸೇರಿದಂತೆ ಹಲವರು ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ.

30 ಹೆಚ್ಚು ಹಳ್ಳಿಗಳ ಕಾರ್ಮಿಕರು, ವ್ಯಾಪಾರಿಗಳು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ರಾಜ್ಯಸರ್ಕಾರವು ಇಲ್ಲಿ ವಿದ್ಯುತ್‌ ಖರೀದಿ ನಿಲ್ಲಿಸಿ, ಖಾಸಗಿಯವರಿಂದ ವಿದ್ಯುತ್ ಖರೀದಿಗೆ ಮುಂದಾಗಿದ್ದೆ ರಾಯಚೂರು ಶಾಖೊತ್ಪನ್ನ ವಿದ್ಯುತ್ ಕೇಂದ್ರದ ವಿದ್ಯುತ್ ಬೇಡಿಕೆ ಕಡಿಮೆಯಾಗಲು ಮತ್ತು ಕಾರ್ಮಿಕರು ಕೆಲಸ ಕಳೆದುಕೊಳ್ಳಲು ಕಾರಣ ಎಂಬ ಆರೋಪ ಕೇಳಿಬಂದಿದೆ.

3500 ಸರ್ಕಾರಿ ನೌಕರರು, 10000 ಕ್ಕೂ ಹೆಚ್ಚು ಗುತ್ತಿಗೆ ನೌಕರರು, 500ಕ್ಕೂ ಹೆಚ್ಚು ಅಪ್ರೆಂಟಿಸ್ ತರಬೇತಿದಾರರು ಕೆಲಸ ನಿರ್ವಹಿಸುತ್ತಿರುವ ಇಲ್ಲಿ ವಿದ್ಯುತ್ ಬೇಡಿಕೆಯಿಲ್ಲ ಎಂಬ ಕಾರಣದಿಂದ ಕೆಲ ಸಮಯ ಕೆಲಸ ಸ್ಥಗಿತಗೊಳಿಸಲು ಸೂಚಿಸಲಾಗಿದೆ.

ನಾಡಿಗೆ ಶೇ.40 ರಷ್ಟು ವಿದ್ಯುತ್ ನೀಡುವ ಈ ಸಂಸ್ಥೆಯ ಕಾರ್ಮಿಕರು ಈಗ ಅನಾಥರಾಗಿದ್ದಾರೆ. ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಈಗ ಉದ್ಯೋಗವೂ ಇಲ್ಲದೇ ಅತಂತ್ರರಾಗಿರುವ ಈ ಕಾರ್ಮಿಕರ ಪರಿಸ್ಥಿತಿಗೆ ಯಾರು ಹೊಣೆ? ಈ ವಿದ್ಯುತ್ ಸ್ಥಾವರದಿಂದ ಹೊರಸೂಸುವ ಹಾರುಬೂದಿಯಿಂದ ಹಲವಾರು ರೋಗಗಳಿಂದ ಬಳಲುವುದು, ಅಸ್ತಮಾದಂತಹ ತೀವ್ರತರ ರೋಗಗಳಿಗೆ ಇಲ್ಲಿನ ಜನರು ಬಲಿಯಾಗುತ್ತಲೇ ಇದ್ದಾರೆ. ಫಲವತ್ತಾದ ಕೃಷಿ ಭೂಮಿಯನ್ನು, ತಮ್ಮ ಆರೋಗ್ಯವನ್ನು ತ್ಯಾಗ ಮಾಡಿದ ಇಲ್ಲಿನ ಜನರಿಗೆ ಸರ್ಕಾರ ನೀಡಿರುವ ಕೊಡುಗೆಯೆಂದರೆ ಕಾರ್ಮಿಕರನ್ನು ಮನೆಗೆ ಕಳಿಸಿರುವುದು ಎಂದು ಸ್ಥಳೀಯರಾದ ಪ್ರವೀಣ್ ರೆಡ್ಡಿ ಗುಂಜಳ್ಳಿಯವರು ದೂರಿದ್ದಾರೆ.

ಈ ಕುರಿತು ರಾಯಚೂರು ಗ್ರಾಮಾಂತರ ಶಾಸಕರಾದ ಬಸನಗೌಡ ದದ್ದಲ್‌ರವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಈ ಭಾಗದ ಸಾವಿರಾರು ಜನರು ಕಾರ್ಖಾನೆಗಾಗಿ ತಮ್ಮ ಭೂಮಿ ಕೊಟ್ಟಿದ್ದಾರೆ. ಕಾರ್ಖಾನೆಯ ದೂಳು ಕುಡಿದಿದ್ದಾರೆ. ಈಗ ಇದ್ದಕ್ಕಿದ್ದಂತೆ ಖಾಸಗಿಯವರಿಂದ ವಿದ್ಯುತ್ ಖರೀದಿಸುವ ಮೂಲಕ ಸರ್ಕಾರಿ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರ ಹೊರಟಿರುವುದು ಸರಿಯಿಲ್ಲ. ಈ ಕ್ರಮದಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ ಎಂಬ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದು ಕಡೆ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಒಪ್ಪಿಸಿರುವುದು ಅತ್ಯಂತ ಮೂರ್ಖತನದ ಕೆಲಸವಾಗಿದೆ. ರೈತರ ಕೃಷಿ ಭೂಮಿಯನ್ನು ಪಡೆದುಕೊಂಡು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿರುವ ವಿದ್ಯುತ್ ಕೇಂದ್ರವನ್ನು ಇಡಿಯಾಗಿ ಪವರ್ ಮ್ಯಾಕ್ ಎನ್ನುವ ಖಾಸಗಿ ಸಂಸ್ಥೆಗೆ ಬಳುವಳಿಯಾಗಿ ನೀಡಿರುವ ಸರ್ಕಾರ ನಾಡಿನ ಜನತೆಗೆ, ಈ ಭಾಗದ ಉದ್ಯೋಗಾಂಕ್ಷಿಗಳಿಗೆ ಮೋಸವೆಸಗಿದೆ ಎಂದು ಪ್ರವೀಣ್ ರೆಡ್ಡಿ ಆರೋಪಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...