Homeಕರ್ನಾಟಕರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

- Advertisement -
- Advertisement -

ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ ಎಂಬ ನೆಪದಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸುಮಾರು 1500 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗಿದೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸೇರಿದಂತೆ ಹಲವರು ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ.

30 ಹೆಚ್ಚು ಹಳ್ಳಿಗಳ ಕಾರ್ಮಿಕರು, ವ್ಯಾಪಾರಿಗಳು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ರಾಜ್ಯಸರ್ಕಾರವು ಇಲ್ಲಿ ವಿದ್ಯುತ್‌ ಖರೀದಿ ನಿಲ್ಲಿಸಿ, ಖಾಸಗಿಯವರಿಂದ ವಿದ್ಯುತ್ ಖರೀದಿಗೆ ಮುಂದಾಗಿದ್ದೆ ರಾಯಚೂರು ಶಾಖೊತ್ಪನ್ನ ವಿದ್ಯುತ್ ಕೇಂದ್ರದ ವಿದ್ಯುತ್ ಬೇಡಿಕೆ ಕಡಿಮೆಯಾಗಲು ಮತ್ತು ಕಾರ್ಮಿಕರು ಕೆಲಸ ಕಳೆದುಕೊಳ್ಳಲು ಕಾರಣ ಎಂಬ ಆರೋಪ ಕೇಳಿಬಂದಿದೆ.

3500 ಸರ್ಕಾರಿ ನೌಕರರು, 10000 ಕ್ಕೂ ಹೆಚ್ಚು ಗುತ್ತಿಗೆ ನೌಕರರು, 500ಕ್ಕೂ ಹೆಚ್ಚು ಅಪ್ರೆಂಟಿಸ್ ತರಬೇತಿದಾರರು ಕೆಲಸ ನಿರ್ವಹಿಸುತ್ತಿರುವ ಇಲ್ಲಿ ವಿದ್ಯುತ್ ಬೇಡಿಕೆಯಿಲ್ಲ ಎಂಬ ಕಾರಣದಿಂದ ಕೆಲ ಸಮಯ ಕೆಲಸ ಸ್ಥಗಿತಗೊಳಿಸಲು ಸೂಚಿಸಲಾಗಿದೆ.

ನಾಡಿಗೆ ಶೇ.40 ರಷ್ಟು ವಿದ್ಯುತ್ ನೀಡುವ ಈ ಸಂಸ್ಥೆಯ ಕಾರ್ಮಿಕರು ಈಗ ಅನಾಥರಾಗಿದ್ದಾರೆ. ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಈಗ ಉದ್ಯೋಗವೂ ಇಲ್ಲದೇ ಅತಂತ್ರರಾಗಿರುವ ಈ ಕಾರ್ಮಿಕರ ಪರಿಸ್ಥಿತಿಗೆ ಯಾರು ಹೊಣೆ? ಈ ವಿದ್ಯುತ್ ಸ್ಥಾವರದಿಂದ ಹೊರಸೂಸುವ ಹಾರುಬೂದಿಯಿಂದ ಹಲವಾರು ರೋಗಗಳಿಂದ ಬಳಲುವುದು, ಅಸ್ತಮಾದಂತಹ ತೀವ್ರತರ ರೋಗಗಳಿಗೆ ಇಲ್ಲಿನ ಜನರು ಬಲಿಯಾಗುತ್ತಲೇ ಇದ್ದಾರೆ. ಫಲವತ್ತಾದ ಕೃಷಿ ಭೂಮಿಯನ್ನು, ತಮ್ಮ ಆರೋಗ್ಯವನ್ನು ತ್ಯಾಗ ಮಾಡಿದ ಇಲ್ಲಿನ ಜನರಿಗೆ ಸರ್ಕಾರ ನೀಡಿರುವ ಕೊಡುಗೆಯೆಂದರೆ ಕಾರ್ಮಿಕರನ್ನು ಮನೆಗೆ ಕಳಿಸಿರುವುದು ಎಂದು ಸ್ಥಳೀಯರಾದ ಪ್ರವೀಣ್ ರೆಡ್ಡಿ ಗುಂಜಳ್ಳಿಯವರು ದೂರಿದ್ದಾರೆ.

ಈ ಕುರಿತು ರಾಯಚೂರು ಗ್ರಾಮಾಂತರ ಶಾಸಕರಾದ ಬಸನಗೌಡ ದದ್ದಲ್‌ರವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಈ ಭಾಗದ ಸಾವಿರಾರು ಜನರು ಕಾರ್ಖಾನೆಗಾಗಿ ತಮ್ಮ ಭೂಮಿ ಕೊಟ್ಟಿದ್ದಾರೆ. ಕಾರ್ಖಾನೆಯ ದೂಳು ಕುಡಿದಿದ್ದಾರೆ. ಈಗ ಇದ್ದಕ್ಕಿದ್ದಂತೆ ಖಾಸಗಿಯವರಿಂದ ವಿದ್ಯುತ್ ಖರೀದಿಸುವ ಮೂಲಕ ಸರ್ಕಾರಿ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರ ಹೊರಟಿರುವುದು ಸರಿಯಿಲ್ಲ. ಈ ಕ್ರಮದಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ ಎಂಬ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದು ಕಡೆ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಒಪ್ಪಿಸಿರುವುದು ಅತ್ಯಂತ ಮೂರ್ಖತನದ ಕೆಲಸವಾಗಿದೆ. ರೈತರ ಕೃಷಿ ಭೂಮಿಯನ್ನು ಪಡೆದುಕೊಂಡು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿರುವ ವಿದ್ಯುತ್ ಕೇಂದ್ರವನ್ನು ಇಡಿಯಾಗಿ ಪವರ್ ಮ್ಯಾಕ್ ಎನ್ನುವ ಖಾಸಗಿ ಸಂಸ್ಥೆಗೆ ಬಳುವಳಿಯಾಗಿ ನೀಡಿರುವ ಸರ್ಕಾರ ನಾಡಿನ ಜನತೆಗೆ, ಈ ಭಾಗದ ಉದ್ಯೋಗಾಂಕ್ಷಿಗಳಿಗೆ ಮೋಸವೆಸಗಿದೆ ಎಂದು ಪ್ರವೀಣ್ ರೆಡ್ಡಿ ಆರೋಪಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...