Homeಕರ್ನಾಟಕರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರ ವಜಾ

- Advertisement -
- Advertisement -

ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ ಎಂಬ ನೆಪದಲ್ಲಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಸುಮಾರು 1500 ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗಿದೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸೇರಿದಂತೆ ಹಲವರು ಕೊರೊನಾ ಸಾಂಕ್ರಾಮಿಕದ ಕಾಲದಲ್ಲಿ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದಾರೆ.

30 ಹೆಚ್ಚು ಹಳ್ಳಿಗಳ ಕಾರ್ಮಿಕರು, ವ್ಯಾಪಾರಿಗಳು ಈ ಕಾರ್ಖಾನೆಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ರಾಜ್ಯಸರ್ಕಾರವು ಇಲ್ಲಿ ವಿದ್ಯುತ್‌ ಖರೀದಿ ನಿಲ್ಲಿಸಿ, ಖಾಸಗಿಯವರಿಂದ ವಿದ್ಯುತ್ ಖರೀದಿಗೆ ಮುಂದಾಗಿದ್ದೆ ರಾಯಚೂರು ಶಾಖೊತ್ಪನ್ನ ವಿದ್ಯುತ್ ಕೇಂದ್ರದ ವಿದ್ಯುತ್ ಬೇಡಿಕೆ ಕಡಿಮೆಯಾಗಲು ಮತ್ತು ಕಾರ್ಮಿಕರು ಕೆಲಸ ಕಳೆದುಕೊಳ್ಳಲು ಕಾರಣ ಎಂಬ ಆರೋಪ ಕೇಳಿಬಂದಿದೆ.

3500 ಸರ್ಕಾರಿ ನೌಕರರು, 10000 ಕ್ಕೂ ಹೆಚ್ಚು ಗುತ್ತಿಗೆ ನೌಕರರು, 500ಕ್ಕೂ ಹೆಚ್ಚು ಅಪ್ರೆಂಟಿಸ್ ತರಬೇತಿದಾರರು ಕೆಲಸ ನಿರ್ವಹಿಸುತ್ತಿರುವ ಇಲ್ಲಿ ವಿದ್ಯುತ್ ಬೇಡಿಕೆಯಿಲ್ಲ ಎಂಬ ಕಾರಣದಿಂದ ಕೆಲ ಸಮಯ ಕೆಲಸ ಸ್ಥಗಿತಗೊಳಿಸಲು ಸೂಚಿಸಲಾಗಿದೆ.

ನಾಡಿಗೆ ಶೇ.40 ರಷ್ಟು ವಿದ್ಯುತ್ ನೀಡುವ ಈ ಸಂಸ್ಥೆಯ ಕಾರ್ಮಿಕರು ಈಗ ಅನಾಥರಾಗಿದ್ದಾರೆ. ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಂಡು ಈಗ ಉದ್ಯೋಗವೂ ಇಲ್ಲದೇ ಅತಂತ್ರರಾಗಿರುವ ಈ ಕಾರ್ಮಿಕರ ಪರಿಸ್ಥಿತಿಗೆ ಯಾರು ಹೊಣೆ? ಈ ವಿದ್ಯುತ್ ಸ್ಥಾವರದಿಂದ ಹೊರಸೂಸುವ ಹಾರುಬೂದಿಯಿಂದ ಹಲವಾರು ರೋಗಗಳಿಂದ ಬಳಲುವುದು, ಅಸ್ತಮಾದಂತಹ ತೀವ್ರತರ ರೋಗಗಳಿಗೆ ಇಲ್ಲಿನ ಜನರು ಬಲಿಯಾಗುತ್ತಲೇ ಇದ್ದಾರೆ. ಫಲವತ್ತಾದ ಕೃಷಿ ಭೂಮಿಯನ್ನು, ತಮ್ಮ ಆರೋಗ್ಯವನ್ನು ತ್ಯಾಗ ಮಾಡಿದ ಇಲ್ಲಿನ ಜನರಿಗೆ ಸರ್ಕಾರ ನೀಡಿರುವ ಕೊಡುಗೆಯೆಂದರೆ ಕಾರ್ಮಿಕರನ್ನು ಮನೆಗೆ ಕಳಿಸಿರುವುದು ಎಂದು ಸ್ಥಳೀಯರಾದ ಪ್ರವೀಣ್ ರೆಡ್ಡಿ ಗುಂಜಳ್ಳಿಯವರು ದೂರಿದ್ದಾರೆ.

ಈ ಕುರಿತು ರಾಯಚೂರು ಗ್ರಾಮಾಂತರ ಶಾಸಕರಾದ ಬಸನಗೌಡ ದದ್ದಲ್‌ರವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಮತ್ತು ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ಈ ಭಾಗದ ಸಾವಿರಾರು ಜನರು ಕಾರ್ಖಾನೆಗಾಗಿ ತಮ್ಮ ಭೂಮಿ ಕೊಟ್ಟಿದ್ದಾರೆ. ಕಾರ್ಖಾನೆಯ ದೂಳು ಕುಡಿದಿದ್ದಾರೆ. ಈಗ ಇದ್ದಕ್ಕಿದ್ದಂತೆ ಖಾಸಗಿಯವರಿಂದ ವಿದ್ಯುತ್ ಖರೀದಿಸುವ ಮೂಲಕ ಸರ್ಕಾರಿ ಕಾರ್ಖಾನೆಗಳನ್ನು ಮುಚ್ಚಲು ಸರ್ಕಾರ ಹೊರಟಿರುವುದು ಸರಿಯಿಲ್ಲ. ಈ ಕ್ರಮದಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ ಎಂಬ ಎಚ್ಚರಿಕೆ ನೀಡಿದ್ದಾರೆ.

ಇನ್ನೊಂದು ಕಡೆ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರವನ್ನು ಸಂಪೂರ್ಣವಾಗಿ ಖಾಸಗಿಯವರಿಗೆ ಒಪ್ಪಿಸಿರುವುದು ಅತ್ಯಂತ ಮೂರ್ಖತನದ ಕೆಲಸವಾಗಿದೆ. ರೈತರ ಕೃಷಿ ಭೂಮಿಯನ್ನು ಪಡೆದುಕೊಂಡು ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಿಸಿರುವ ವಿದ್ಯುತ್ ಕೇಂದ್ರವನ್ನು ಇಡಿಯಾಗಿ ಪವರ್ ಮ್ಯಾಕ್ ಎನ್ನುವ ಖಾಸಗಿ ಸಂಸ್ಥೆಗೆ ಬಳುವಳಿಯಾಗಿ ನೀಡಿರುವ ಸರ್ಕಾರ ನಾಡಿನ ಜನತೆಗೆ, ಈ ಭಾಗದ ಉದ್ಯೋಗಾಂಕ್ಷಿಗಳಿಗೆ ಮೋಸವೆಸಗಿದೆ ಎಂದು ಪ್ರವೀಣ್ ರೆಡ್ಡಿ ಆರೋಪಿಸಿದ್ದಾರೆ.


ಇದನ್ನೂ ಓದಿ: ವರ್ಷಗಳ ಕಾಲ ವೇತನ ರಹಿತ ರಜೆ: ಸಂಕಷ್ಟದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...