Homeಕರೋನಾ ತಲ್ಲಣಹೊಸ ರೂಪಾಂತರಿ ವೈರಸ್‌ನ 153 ಪ್ರಕರಣ ದಾಖಲು: ಕೇಂದ್ರ ಆರೋಗ್ಯ ಸಚಿವ

ಹೊಸ ರೂಪಾಂತರಿ ವೈರಸ್‌ನ 153 ಪ್ರಕರಣ ದಾಖಲು: ಕೇಂದ್ರ ಆರೋಗ್ಯ ಸಚಿವ

ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್‌ ಈಗ ಜಗತ್ತಿನ 70 ರಾಷ್ಟ್ರಗಳಲ್ಲಿ ಹರಡಿದ್ದು, ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್‌‌ 31 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ- WHO

- Advertisement -
- Advertisement -

“ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್‌ ಈಗ ಜಗತ್ತಿನ 70 ರಾಷ್ಟ್ರಗಳಲ್ಲಿ ಹರಡಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕಳವಳ ವ್ಯಕ್ತಪಡಿಸಿದ್ದು, ಈ ರೂಪಾಂತರಿ ವೈರಸ್ ತಳಿಯ 153 ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಈ ಕುರಿತು ಹರ್ಷವರ್ಧನ್ ಅವರ ಹೇಳಿಕೆಯನ್ನು ವರದಿ ಮಾಡಿರುವ ಎಎನ್‌ಐ, “70 % ಕೊರೊನಾ ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಲ್ಲಿ ವರದಿಯಾಗಿದೆ. ಭಾರತದಲ್ಲಿ ರೂಪಾಂತರಿ ವೈರಸ್‌ನ 153 ಪ್ರಕರಣಗಳು ವರದಿಯಾಗಿದೆ” ಎಂದು ಟ್ವೀಟ್ ಮಾಡಿದೆ.

ಬ್ರಿಟನ್‌ ರೀತಿಯೇ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್‌, ಅತಿ ವೇಗವಾಗಿ ಹರಡಬಲ್ಲದಾಗಿದೆ. ಆ ವೈರಸ್‌ 31 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು WHO ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಜಗತ್ತಿನಾದ್ಯಂತ ಕೊರೊನಾದಿಂದಾಗಿ 20 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈಗಾಗಲೆ ಕೆಲವು ದೇಶಗಳು ಕೊರೊನಾ ವೈರಸ್‌ಗೆ ಲಸಿಕೆಯನ್ನು ಕಂಡುಹಿಡಿದಿವೆ. ಆದರೆ ಅವು ಇನ್ನೂ ಸಮರ್ಪಕವಾಗಿ ಪೂರಕವಾಗುತ್ತಿಲ್ಲ. ಹೀಗಿರುವಾಗ ಈ ಹೊಸ ರೂಪಾಂತರಿ ಕೊರನಾ ವೈರಸ್ ಮತ್ತೊಂದು ಆತಂಕವನ್ನು ಸೃಷ್ಟಿಸಿದ್ದು, ಇದು ಹರಡದಂತೆ ತಡೆಯುವುದು ಹೇಗೆ ಎಂಬುದು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಇದನ್ನೂ ಓದಿ: ರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

ಎರಡೂ ರೀತಿಯ ರೂಪಾಂತರಗೊಂಡ ವೈರಸ್‌ ವೇಗವಾಗಿ ಹರಡಬಹುದಾಗಿದ್ದರೂ ಸಹ, ಅವು ಪ್ರಾಣಕ್ಕೆ ಹೆಚ್ಚು ಅಪಾಯಕಾರಿಯಾಗಬಹುದೆಂದು ಪರಿಗಣಿಸಿಲ್ಲ. ಈಗ ಅಭಿವೃದ್ಧಿಪಡಿಸಿರುವ ಲಸಿಕೆಯು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಬಿ117 ವೈರಸ್‌ ತಡೆಯುವುದರಲ್ಲಿಯೂ ಪರಿಣಾಮಕಾರಿಯಾಗಿದೆ ಎಂದು ಫೈಝರ್‌ ಮತ್ತು ಜರ್ಮನಿಯ ಬಯೊ ಎನ್‌ಟೆಕ್‌ ಹೇಳಿವೆ.


ಇದನ್ನೂ ಓದಿ: ಬ್ರಿಟನ್ ಆಯ್ತು; ಈಗ ಜಪಾನ್‌ನಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...