Homeಕರ್ನಾಟಕಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಲಾಕ್ ಡೌನ್ ಅವಧಿಯಲ್ಲಿ ಭಾರತೀಯ ಆಹಾರ ನಿಗಮದ ಉಗ್ರಾಣದಲ್ಲಿ ಶೇಖರಿಸಲ್ಪಟ್ಟಿದ್ದ 1,550 ಟನ್ ಆಹಾರಧಾನ್ಯ ಹಾಳಾಗಿದೆ ಎಂಬುದು ಗ್ರಾಹಕರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ದೃಢಪಟ್ಟಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.

ಮೇ ತಿಂಗಳಲ್ಲಿ 26 ಟನ್ ಮತ್ತು ಜೂನ್ ತಿಂಗಳಲ್ಲಿ 1453 ಟನ್ ಆಹಾರಧಾನ್ಯ ನಷ್ಟವಾಗಿದೆ ಎಂದು ಅಂಕಿಅಂಶಗಳು ಸ್ಪಷ್ಟಪಡಿಸಿವೆ. ಜುಲೈ-ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 41, 51 ಟನ್ ಆಹಾರಧಾನ್ಯ ನಷ್ಟವಾಗಿರುವುದು ದಾಖಲಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಶೂನ್ಯನಷ್ಟವಾಗಿರುವುದು ದಾಖಲೆಗಳಿಂದ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ದೂರದ ಗ್ರಾಮಗಳಿಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದರು. ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಗ್ರಾಹಕರ ವ್ಯವಹಾರಗಳ ಸಚಿವಾಲಯ ನೀಡಿದ ದಾಖಲೆಗಳಂತೆ ಭಾರತೀಯ ಆಹಾರ ನಿಗಮದ ಉಗ್ರಾಣಗಳಲ್ಲಿ ಆಹಾರಧಾನ್ಯಗಳನ್ನು ಸಂಗ್ರಹ ಮಾಡಲಾಗಿತ್ತು. ಈ ಆಹಾರಧಾನ್ಯಗಳು ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಕೀಟನಾಶಕವನ್ನು ಸಿಂಪಡಿಸಲಾಗಿತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ಆಹಾರಧಾನ್ಯಗಳು ನಷ್ಟವಾಗಿದ್ದರೆ ಶೀಘ್ರವೇ ತನಿಖೆ ಮಾಡುತ್ತೇವೆ. ಪ್ರಕರಣ ದಾಖಲಿಸುತ್ತೇವೆ. ಅದರ ಆಧಾರದ ಮೇಲೆ ಸಂಬಂಧಪಟ್ಟ ಪ್ರಾಧಿಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಿದೆ. 2014 ರಿಂದ 2018ರ ಅವಧಿಯಲ್ಲಿ 125 ಮಂದಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದ’ ಎಂದು ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆಂದು ದಿ ವೈರ್.ಇನ್ ವರದಿ ಮಾಡಿದೆ.

ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಉಗ್ರಾಣಗಳಲ್ಲಿ ಸರ್ಕಾರ ವೈಜ್ಞಾನಿಕ ಮಾದರಿಯನ್ನು ಅಳವಡಿಸಿಕೊಂಡಿದ್ದರಿಂದ ನಷ್ಟ ಕಡಿಮೆಯಾಗಿದೆ. ಸಂಗ್ರಹ ಮತ್ತು ವಿತರಣೆಗೆ ಅನುಕೂಲವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

2015-16 ಸಾಲಿನಲ್ಲಿ 60.3 ದಶಲಕ್ಷ ಟನ್ ಅಕ್ಕಿ ಮತ್ತು ಗೋಧಿ ಖರೀದಿಸಿದ್ದು 3116 ಟನ್ ಆಹಾರ ಧಾನ್ಯ ಗಳು ಹಾಳಾಗಿದೆ. ಇದು ಒಟ್ಟು ಖರೀದಿಯಲ್ಲಿ ಕೇವಲ ಶೇ. 0.005ರಷ್ಟು ಮಾತ್ರ ಎಂದು ಪಾಸ್ವಾನ್ ಸ್ಪಷ್ಟಪಡಿಸಿದ್ದಾರೆ. 2016-17ನೇ ಸಾಲಿನಲ್ಲಿ 61 ದಶಲಕ್ಷ ಟನ್ ಖರೀದಿಸಿದ್ದು ನಷ್ಟ ಪ್ರಮಾಣ ಕೇವಲ ಶೇ. 0.014ರಷ್ಟು ಆಗಿದೆ ಎಂದು ವರದಿ ತಿಳಿಸಿದೆ.

ಈ ನಡುವೆ 2017-18, 2018-19ನೇ ಸಾಲಿನಲ್ಲಿ ಶೇ. 0.003ರಷ್ಟು ಮತ್ತು ಶೇ. 0.006 ರಷ್ಟು ನಷ್ಟವಾಗಿದೆ. 2019-20ರಲ್ಲಿ 75.17 ದಶಲಕ್ಷ ಟನ್ ಆಹಾರಧಾನ್ಯ ಖರೀದಿಸಿತ್ತು. ಇದರಲ್ಲಿ 1930 ಟನ್ ನಷ್ಟವಾಗಿದೆ. ಇದು ಒಟ್ಟು ಖರೀದಿಯ ಕೇವಲ ಶೇ.0.002ರಷ್ಟು ಆಗಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...