Homeಕರ್ನಾಟಕಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಲಾಕ್ ಡೌನ್ ಅವಧಿಯಲ್ಲಿ ಭಾರತೀಯ ಆಹಾರ ನಿಗಮದ ಉಗ್ರಾಣದಲ್ಲಿ ಶೇಖರಿಸಲ್ಪಟ್ಟಿದ್ದ 1,550 ಟನ್ ಆಹಾರಧಾನ್ಯ ಹಾಳಾಗಿದೆ ಎಂಬುದು ಗ್ರಾಹಕರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ದೃಢಪಟ್ಟಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.

ಮೇ ತಿಂಗಳಲ್ಲಿ 26 ಟನ್ ಮತ್ತು ಜೂನ್ ತಿಂಗಳಲ್ಲಿ 1453 ಟನ್ ಆಹಾರಧಾನ್ಯ ನಷ್ಟವಾಗಿದೆ ಎಂದು ಅಂಕಿಅಂಶಗಳು ಸ್ಪಷ್ಟಪಡಿಸಿವೆ. ಜುಲೈ-ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 41, 51 ಟನ್ ಆಹಾರಧಾನ್ಯ ನಷ್ಟವಾಗಿರುವುದು ದಾಖಲಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಶೂನ್ಯನಷ್ಟವಾಗಿರುವುದು ದಾಖಲೆಗಳಿಂದ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ದೂರದ ಗ್ರಾಮಗಳಿಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದರು. ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಗ್ರಾಹಕರ ವ್ಯವಹಾರಗಳ ಸಚಿವಾಲಯ ನೀಡಿದ ದಾಖಲೆಗಳಂತೆ ಭಾರತೀಯ ಆಹಾರ ನಿಗಮದ ಉಗ್ರಾಣಗಳಲ್ಲಿ ಆಹಾರಧಾನ್ಯಗಳನ್ನು ಸಂಗ್ರಹ ಮಾಡಲಾಗಿತ್ತು. ಈ ಆಹಾರಧಾನ್ಯಗಳು ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಕೀಟನಾಶಕವನ್ನು ಸಿಂಪಡಿಸಲಾಗಿತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ಆಹಾರಧಾನ್ಯಗಳು ನಷ್ಟವಾಗಿದ್ದರೆ ಶೀಘ್ರವೇ ತನಿಖೆ ಮಾಡುತ್ತೇವೆ. ಪ್ರಕರಣ ದಾಖಲಿಸುತ್ತೇವೆ. ಅದರ ಆಧಾರದ ಮೇಲೆ ಸಂಬಂಧಪಟ್ಟ ಪ್ರಾಧಿಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಿದೆ. 2014 ರಿಂದ 2018ರ ಅವಧಿಯಲ್ಲಿ 125 ಮಂದಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದ’ ಎಂದು ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆಂದು ದಿ ವೈರ್.ಇನ್ ವರದಿ ಮಾಡಿದೆ.

ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಉಗ್ರಾಣಗಳಲ್ಲಿ ಸರ್ಕಾರ ವೈಜ್ಞಾನಿಕ ಮಾದರಿಯನ್ನು ಅಳವಡಿಸಿಕೊಂಡಿದ್ದರಿಂದ ನಷ್ಟ ಕಡಿಮೆಯಾಗಿದೆ. ಸಂಗ್ರಹ ಮತ್ತು ವಿತರಣೆಗೆ ಅನುಕೂಲವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

2015-16 ಸಾಲಿನಲ್ಲಿ 60.3 ದಶಲಕ್ಷ ಟನ್ ಅಕ್ಕಿ ಮತ್ತು ಗೋಧಿ ಖರೀದಿಸಿದ್ದು 3116 ಟನ್ ಆಹಾರ ಧಾನ್ಯ ಗಳು ಹಾಳಾಗಿದೆ. ಇದು ಒಟ್ಟು ಖರೀದಿಯಲ್ಲಿ ಕೇವಲ ಶೇ. 0.005ರಷ್ಟು ಮಾತ್ರ ಎಂದು ಪಾಸ್ವಾನ್ ಸ್ಪಷ್ಟಪಡಿಸಿದ್ದಾರೆ. 2016-17ನೇ ಸಾಲಿನಲ್ಲಿ 61 ದಶಲಕ್ಷ ಟನ್ ಖರೀದಿಸಿದ್ದು ನಷ್ಟ ಪ್ರಮಾಣ ಕೇವಲ ಶೇ. 0.014ರಷ್ಟು ಆಗಿದೆ ಎಂದು ವರದಿ ತಿಳಿಸಿದೆ.

ಈ ನಡುವೆ 2017-18, 2018-19ನೇ ಸಾಲಿನಲ್ಲಿ ಶೇ. 0.003ರಷ್ಟು ಮತ್ತು ಶೇ. 0.006 ರಷ್ಟು ನಷ್ಟವಾಗಿದೆ. 2019-20ರಲ್ಲಿ 75.17 ದಶಲಕ್ಷ ಟನ್ ಆಹಾರಧಾನ್ಯ ಖರೀದಿಸಿತ್ತು. ಇದರಲ್ಲಿ 1930 ಟನ್ ನಷ್ಟವಾಗಿದೆ. ಇದು ಒಟ್ಟು ಖರೀದಿಯ ಕೇವಲ ಶೇ.0.002ರಷ್ಟು ಆಗಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...