HomeಅಂಕಣಗಳುKarnataka against SIR3ನೇ ಹಂತದ 'SIR' ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

- Advertisement -
- Advertisement -

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು ಕೈಬಿಡಲ್ಪಟ್ಟಿವೆ. ಒಟ್ಟು 1.58 ಕೋಟಿಗೂ ಅಧಿಕ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಪರಿಷ್ಕರಣೆಗೂ ಮುನ್ನ ಈ 12 ಭಾಗಗಳಲ್ಲಿ ಒಟ್ಟು 13.77 ಕೋಟಿ ಮತದಾರರಿದ್ದರು. ಆದರೆ ಕರಡು ಪಟ್ಟಿ ಬಿಡುಗಡೆಯಾದ ಬಳಿಕ ಈ ಸಂಖ್ಯೆ 12.18 ಕೋಟಿಗೆ ಕುಸಿದಿದೆ. ಅಂದರೆ ಶೇಕಡಾ 11.51 ರಷ್ಟು ಮತದಾರರನ್ನು ವಿವಿಧ ಕಾರಣಗಳಿಂದ ಮತಪಟ್ಟಿಯಿಂದ ಹೊರಗಿಡಲಾಗಿದೆ.

  • ಆಂಧ್ರಪ್ರದೇಶ: ಪರಿಷ್ಕರಣೆಗೂ ಮುನ್ನ 4.16 ಕೋಟಿಯಷ್ಟಿದ್ದ ಮತದಾರರ ಸಂಖ್ಯೆ 3.71 ಕೋಟಿಗೆ ಇಳಿಕೆಯಾಗಿದ್ದು, ಬರೋಬ್ಬರಿ 44.89 ಲಕ್ಷ (10.78%) ಹೆಸರುಗಳನ್ನು ಕೈಬಿಡಲಾಗಿದೆ.
  • ಜಾರ್ಖಂಡ್: 2.64 ಕೋಟಿಯಿಂದ 2.21 ಕೋಟಿಗೆ ಕುಸಿದಿದ್ದು, 43.61 ಲಕ್ಷ (16.48%) ಮತದಾರರ ಹೆಸರುಗಳು ಡಿಲೀಟ್ ಆಗಿವೆ.
  • ಹರ್ಯಾಣ: 2.06 ಕೋಟಿಯಿಂದ 1.72 ಕೋಟಿಗೆ ಇಳಿಕೆಯಾಗಿದ್ದು, 33.83 ಲಕ್ಷ (16.38%) ಹೆಸರುಗಳನ್ನು ತೆರವುಗೊಳಿಸಲಾಗಿದೆ.
  • ಒಡಿಶಾ: 3.33 ಕೋಟಿಯಿಂದ 3.13 ಕೋಟಿಗೆ ತಗ್ಗಿದ್ದು, 20.12 ಲಕ್ಷ (6.02%) ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿದೆ.
  • ಉತ್ತರಾಖಂಡ: 79.6 ಲಕ್ಷದಿಂದ 71.33 ಲಕ್ಷಕ್ಕೆ ಇಳಿಕೆಯಾಗಿದ್ದು, 8.26 ಲಕ್ಷ (10.39%) ಹೆಸರುಗಳು ಗಾಯಬ್ ಆಗಿವೆ.

ಇತರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು: ಮೇಘಾಲಯದಲ್ಲಿ 1.80 ಲಕ್ಷ (7.67%), ಅರುಣಾಚಲ ಪ್ರದೇಶದಲ್ಲಿ 1.69 ಲಕ್ಷ (19.09%), ಮಣಿಪುರದಲ್ಲಿ 1.58 ಲಕ್ಷ (7.5%), ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಾಮನ್-ದಿಯುನಲ್ಲಿ 1.26 ಲಕ್ಷ (29.64%), ಚಂಡೀಗಢದಲ್ಲಿ 66,181 (12.8%), ಮಿಝೋರಾಂನಲ್ಲಿ 46,162 (5.2%) ಹಾಗೂ ಸಿಕ್ಕಿಂನಲ್ಲಿ 37,724 (8%) ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳ ಪಟ್ಟಿ ಬಿಡುಗಡೆ ಬಾಕಿ

ಅನೇಕ ರಾಜ್ಯಗಳ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಉಳಿದ ಪ್ರಮುಖ ರಾಜ್ಯಗಳ ಪಟ್ಟಿಗಳು ಮುಂದಿನ ದಿನಗಳಲ್ಲಿ ಪ್ರಕಟಗೊಳ್ಳಲಿವೆ:

  • ಪಂಜಾಬ್: ಆಗಸ್ಟ್ 13
  • ತೆಲಂಗಾಣ: ಆಗಸ್ಟ್ 17
  • ಕರ್ನಾಟಕ, ದೆಹಲಿ ಮತ್ತು ಮಹಾರಾಷ್ಟ್ರ: ಆಗಸ್ಟ್ 24
  • ನಾಗಾಲ್ಯಾಂಡ್: ಸೆಪ್ಟೆಂಬರ್ 20
  • ತ್ರಿಪುರಾ: ಅಕ್ಟೋಬರ್ 21
ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ

ಈಗ ಬಿಡುಗಡೆಯಾಗಿರುವುದು ಕೇವಲ ಕರಡು ಮತದಾರರ ಪಟ್ಟಿಯಾಗಿದ್ದು (Draft Electoral Roll), ಹೆಸರು ಬಿಟ್ಟುಹೋದವರು ಹಾಗೂ ಹೊಸ ಮತದಾರರು ತಮ್ಮ ಆಕ್ಷೇಪಣೆ ಸಲ್ಲಿಸಲು ಮತ್ತು ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಹೀಗಾಗಿ ಅಂತಿಮ ಪಟ್ಟಿ ಪ್ರಕಟವಾಗುವ ವೇಳೆ ಮತದಾರರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....

SIR ಅಕ್ರಮದ ವಿರುದ್ಧ ಅನಿರ್ದಿಷ್ಟಾವಧಿ ಹೋರಾಟದ ಎಚ್ಚರಿಕೆ: ಆ.15ಕ್ಕೆ ‘ಮತದಾರರ ಹಕ್ಕು ಪ್ರತಿಪಾದನಾ ದಿನ’

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಲಕ್ಷಾಂತರ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ‘SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟ’...

ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸಿಎಂ, ಗೃಹ ಸಚಿವರಿಗೆ ಪತ್ರ, ಅಗ್ನಿವೀರನ ಬೆನ್ನಿಗೆ ನಿಂತ ಭಾರತೀಯ ಸೇನೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ...

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...