Homeಮುಖಪುಟ2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

- Advertisement -
- Advertisement -

2010ರಿಂದ ಇಲ್ಲಿಯವರೆಗೆ ದೇಶದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ 1967ರ ಯುಎಪಿಎ ಅಡಿಯಲ್ಲಿ 16 ಪತ್ರಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಈ ರೀತಿ ಕಠೋರ ಕಾನೂನುಗಳ ಅಡಿಯಲ್ಲಿ ಪತ್ರಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಭಾರತದಲ್ಲಿ ವಾಕ್ ಸ್ವಾತಂತ್ರ್ಯದ ಅಪಾಯಕಾರಿ ಸ್ಥಿತಿಯಲ್ಲಿರುವುದನ್ನು ಸೂಚಿಸುತ್ತದೆ.

ಸಮಾಜದಲ್ಲಿನ ಕೆಲ ನ್ಯೂನ್ಯತೆಗಳ, ಸಮಸ್ಯೆಗಳ ಕುರಿತು ತನಿಖೆ ಮಾಡಲು ಮತ್ತು ವರದಿ ಮಾಡಲು ಬಯಸುವ ಪತ್ರಕರ್ತರ ವಿರುದ್ಧ UAPA ಕಾಯ್ದೆಯನ್ನು ಬಳಸಿದಾಗ, ಅದು ಅವರ ಕಾನೂನುಬದ್ಧ ಕೆಲಸವನ್ನು ಅಪರಾಧೀಕರಿಸಲು ಮತ್ತು ಅವರನ್ನು “ಭಯೋತ್ಪಾದಕರು” ಎಂದು ಕಳಂಕಗೊಳಿಸುವ ಕೆಲಸ ಮಾಡುತ್ತದೆ.  ಇದಲ್ಲದೆ ಅವರ ಘನತೆಗೆ ಚ್ಯುತಿ ತರುವ ಮತ್ತು ಅವರನ್ನು ವಿನಾಃಕಾರಣ ಕಾನೂನು ಪ್ರಕ್ರಿಯೆಗಳ ಹಿಂದೆ ಅಲೆದಾಡಿಸಲು ಪ್ರಯತ್ನಿಸುತ್ತದೆ. ಇದು ಅವರ ವೃತ್ತಿಪರ ಕೆಲಸದ ಮೇಲೆ ಅಗಾಧ ಪ್ರಭಾವವನ್ನು ಬೀರುತ್ತದೆ.

ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಯುಎಪಿಎ ಕಾಯ್ದೆ ಜಾರಿಗೆ ತರಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಆಪಾದಿತ ದೇಶವಿರೋಧಿ ಚಟುವಟಿಕೆಗಳನ್ನು ಕೂಡ ಯುಎಪಿಎಯಡಿ ಸೇರಿಸಲಾಗಿದೆ. ಭಾರತದಲ್ಲಿ ಉಗ್ರ ಚಟುವಟಿಕೆ ನಿಗ್ರಹಕ್ಕೆ ಸಂಬಂಧಿಸಿದಂತೆ ಟಾಡಾ(TADA) ಮತ್ತು ಪೋಟಾ (POTA) ಕಾಯ್ದೆಗಳು ಅಸ್ತಿತ್ವದಲ್ಲಿದ್ದವು. ಆದರೆ, 1995ರಲ್ಲಿ ಟಾಡಾ ಕಾಯ್ದೆಯನ್ನು ಹಿಂಪಡೆಯಲಾಯಿತು. ಬಳಿಕ 2004ರಲ್ಲಿ ಪೋಟಾ ಕಾಯ್ದೆಯನ್ನು ಕೈ ಬಿಡಲಾಯಿತು. 1967ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಜಾರಿಗೆ ತಂದಿದ್ದ ಯುಎಪಿಎ ಕಾಯ್ದೆಯನ್ನು ಬಲಪಡಿಸಲಾಯಿತು. ಇದಕ್ಕಾಗಿ 2004, 2008, 2013 ಮತ್ತು 2019ರಲ್ಲಿ ತಿದ್ದುಪಡಿಗಳನ್ನು ತರುವ ಮೂಲಕ ಮತ್ತಷ್ಟು ಅಧಿಕಾರಗಳನ್ನು ನೀಡಲಾಯಿತು

ಇತ್ತೀಚಿನ ಬೆಳವಣಿಗೆಯಲ್ಲಿ ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರ  ಮೇಲೆ ಯುಎಪಿಎಯಡಿ ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿದೆ. ಪುರ್ಕಾಯಸ್ಥ ಮತ್ತು ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಹೆಚ್‌ಆರ್‌ ಅಮಿತ್ ಚಕ್ರವರ್ತಿ ವಿರುದ್ಧದ ಎಫ್‌ಐಆರ್‌ನಲ್ಲಿ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳು), 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು), 18 (ಪಿತೂರಿ) ಮತ್ತು ಯುಎಪಿಎ ಜೊತೆಗೆ ಐಪಿಸಿ ಸೆಕ್ಷನ್ 153ಎ (ವಿವಿಧ ಗುಂಪಿನ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 120 ಬಿ (ಅಪರಾಧ ಪಿತೂರಿ) ಆರೋಪವನ್ನು ಹೊರಿಸಲಾಗಿದೆ.

ಇದಲ್ಲದೆ ಮಾಧ್ಯಮದ ವಿರುದ್ಧ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯನ್ನು ನೇಹಾ ದೀಕ್ಷಿತ್ ಮತ್ತು ಪರಂಜಾಯ್ ಗುಹಾ ಠಾಕುರ್ತಾ ಸೇರಿದಂತೆ ಹಲವಾರು ಪತ್ರಕರ್ತರ ವಿರುದ್ಧ ಕೂಡ ಬಳಸಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಕಳೆದ ಕೆಲವು ವರ್ಷಗಳಿಂದ ಯುಎಪಿಎಯನ್ನು ನಿರ್ದಾಕ್ಷಿಣ್ಯವಾಗಿ ಬಳಸಿರುವುದು ಕಂಡು ಬಂದಿದೆ. ಇದಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸಾರ್ವಜನಿಕ ಸುರಕ್ಷತಾ ಕಾಯಿದೆ ಮತ್ತು ಛತ್ತೀಸ್‌ಗಢ ಜನ್ ಸುರಕ್ಷಾ ಅಧಿನಿಯಮ್, ರಾಷ್ಟ್ರೀಯ ಭದ್ರತಾ ಕಾಯ್ದೆ ಮತ್ತು ನಿಬಂಧನೆಗಳಂತಹ ಇತರ ಕಠೋರ ನಿಯಮಗಳನ್ನು  ಕೂಡ ಪತ್ರಕರ್ತರ ಮೇಲೆ ವಿಧಿಸಲಾಗಿದೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ 2010-20ರವರೆಗೆ ಭಾರತದಲ್ಲಿ 154 ಪತ್ರಕರ್ತರನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಪಡಿಸಲಾಗಿದೆ ಅಥವಾ ಅವರ ವೃತ್ತಿಪರ ಕೆಲಸಕ್ಕಾಗಿ ಅವರಿಗೆ ಶೋಕಾಸ್ ನೋಟಿಸ್‌ಗಳನ್ನು ನೀಡಲಾಗಿದೆ. ಇದರಲ್ಲಿ 40 ಪ್ರತಿಶತ 2020ರಲ್ಲಿ ನಡೆದಿದೆ ಎಂದು ತಿಳಿಸಿದೆ. ಇದಲ್ಲದೆ 9 ವಿದೇಶಿ ಪತ್ರಕರ್ತರು ಗಡೀಪಾರು, ಬಂಧನ, ಭಾರತಕ್ಕೆ ಪ್ರವೇಶವನ್ನು ನಿರಾಕರಣೆ ತೊಡಕುಗಳನ್ನು ಎದುರಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪತ್ರಕರ್ತರು ಸುದ್ದಿ ಮತ್ತು ಮಾಹಿತಿಯ ಸಂದೇಶವಾಹಕರು. ಅವರನ್ನು ಮೌನಗೊಳಿಸುವುದು ಅವರ ವರದಿಗಾರಿಕೆಯನ್ನು ಮೌನಗೊಳಿಸಿದಂತೆ. ಇದರಿಂದ ಯಾವುದೇ ಭಯವಿಲ್ಲದೆ ಮಾಹಿತಿಯನ್ನು ಪಡೆಯುವ ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕಿಗೆ ಧಕ್ಕೆಯಾಗುತ್ತದೆ.

ಭಾರತದಲ್ಲಿ UAPA ಅಡಿಯಲ್ಲಿ ಪತ್ರಕರ್ತರ ಮೇಲೆ ದಾಖಲಾದ ಪ್ರಕರಣಗಳು 

ಪತ್ರಕರ್ತರ ಮೇಲೆ ಪ್ರಸ್ತುತ UAPA ಅಡಿಯಲ್ಲಿ ದಾಖಲಾಗಿರುವ ಪ್ರಕರಣ :16
ಯುಎಪಿಎಯಡಿ ಬಂಧಿತ ಪತ್ರಕರ್ತರು:07
ಯುಎಪಿಎಯಡಿ ಜಾಮೀನಿನ ಮೇಲೆ ಇರುವ ಪತ್ರಕರ್ತರು:08
ಯುಎಪಿಎಯಡಿ ಆರೋಪಿತ ಬಂಧನವಾಗದ ಪತ್ರಕರ್ತರ  ಸಂಖ್ಯೆ:01
ಯುಎಪಿಎಯಡಿ ಖುಲಾಸೆಗೊಂಡ ಪತ್ರಕರ್ತರು:01
ಯುಎಪಿಎಯಿಂದ ಮುಕ್ತಗೊಂಡ ಪತ್ರಕರ್ತರು:01

ಬಂಧಿತ, ಪೊಲೀಸ್ ಕಸ್ಟಡಿಯಲ್ಲಿ ಇರುವವರು
1. ಪ್ರಬೀರ್ ಪುರ್ಕಾಯಸ್ಥ, ಸಂಪಾದಕ, ನ್ಯೂಸ್‌ಕ್ಲಿಕ್ – 03.10.2023, ನವದೆಹಲಿ

ಜೈಲಿನಲ್ಲಿರುವವರು
1. ಆಸಿಫ್ ಸುಲ್ತಾನ್, ವರದಿಗಾರರು ಕಾಶ್ಮೀರ – 27.08.2018ರಿಂದ ಜೈಲಿನಲ್ಲಿದ್ದಾರೆ.
2. ಫಹಾದ್ ಶಾ, ಸಂಪಾದಕರು, ಕಾಶ್ಮೀರವಾಲಾ – 04.02.2022ರಲ್ಲಿ ಬಂಧನವಾಗಿದೆ. ಇವರು  ಪುಲ್ವಾಮಾದವರು. 
3. ಸಜ್ಜದ್ ಗುಲ್, ‘ದಿ ಕಾಶ್ಮೀರ್ ವಾಲಾ’ದ ಟ್ರೈನಿ ವರದಿಗಾರರು 

4. ರೂಪೇಶ್ ಕುಮಾರ್ ಪತ್ರಕರ್ತರು ರಾಮಗಢ ಜಿಲ್ಲೆ, ಜಾರ್ಖಂಡ್
5. ಇರ್ಫಾನ್ ಮೆಹ್ರಾಜ್, ಸಂಪಾದಕ, ವಂದೇ ಮ್ಯಾಗಜೀನ್ ಶ್ರೀನಗರ, ಜಮ್ಮು ಮತ್ತು ಕಾಶ್ಮೀರ

ಗೃಹ ಬಂಧನದಲ್ಲಿರುವವರು

1. ಗೌತಮ್ ನವ್ಲಾಖಾ, ಬರಹಗಾರರು, ಸಲಹಾ ಸಂಪಾದಕರು

ಜಾಮೀನಿನ ಮೇಲೆ ಇರುವವರು (ಬಂಧನ ದಿನಾಂಕದ ಆದೇಶದ ಪ್ರಕಾರ)

1. ಸೀಮಾ ಆಜಾದ್: ಇವರು ‘ದಸ್ತಕ್‌’ನ  ಸಂಪಾದಕರು  ಉತ್ತರ ಪ್ರದೇಶದ ಪ್ರಯಾಗ್ರಾಜ್‌ನವರು ಇವರನ್ನು  ಫೆಬ್ರವರಿ 2010ರಲ್ಲಿ ಬಂಧಿಸಲಾಗಿತ್ತು. ಆಗಸ್ಟ್ 2012 ರಲ್ಲಿ ಜಾಮೀನು ನೀಡಲಾಯಿತು.

2. ವಿಶ್ವ ವಿಜಯ್: ದಸ್ತಕ್‌ ಸಂಪಾದಕರು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 2010 ಬಂಧಿಸಲಾಯಿತು ಮತ್ತು ಆಗಸ್ಟ್ 2012ರಲ್ಲಿ ಜಾಮೀನು ನೀಡಲಾಯಿತು.

3. ಕೆ ಕೆ ಶಾಹಿನಾ: ಔಟ್‌ಲುಕ್ ಪತ್ರಕರ್ತೆ, ಡಿಸೆಂಬರ್ 2010 ರಲ್ಲಿ ದಾಖಲಾದ ಪ್ರಕರಣ. ಜುಲೈ 2011 ರಲ್ಲಿ ನಿರೀಕ್ಷಣಾ ಜಾಮೀನು ಮಂಜೂರು.

4. ಸಿದ್ದಿಕ್ ಕಪ್ಪನ್; ಪತ್ರಕರ್ತ, ದೆಹಲಿಯಲ್ಲಿ 05.10.2020 ರಂದು ಬಂಧಿಸಲಾಯಿತು, 09.09.2023 ರಂದು UAPA ಪ್ರಕರಣದಲ್ಲಿ ಮತ್ತು 23.12.2022 ರಂದು PMLA ಪ್ರಕರಣದಲ್ಲಿ ಜಾಮೀನು ನೀಡಲಾಯಿತು.

5. ಪಾವೊಜೆಲ್ ಚಾವೊಬಾ; ದಿ ಫ್ರಾಂಟಿಯರ್ ಮಣಿಪುರದ ಕಾರ್ಯನಿರ್ವಾಹಕ ಸಂಪಾದಕ, ಇಂಫಾಲ್‌ನಲ್ಲಿ 17.01.2021 ಬಂಧಿಸಲಾಯಿತು, 18.01.2021 ಜಾಮೀನು ಮಂಜೂರು ಮಾಡಲಾಯಿತು.

6. ದಿ ಫ್ರಾಂಟಿಯರ್ ಮಣಿಪುರ ಇಂಫಾಲ್‌ನ ಸಂಪಾದಕರಾದ ಧೀರೇನ್ ಸದೋಕ್‌ಪಂ ಅವರನ್ನು 17.01.2021 ಬಂಧನ ಮಾಡಲಾಗಿತ್ತು. ಮತ್ತು 18.01.2021ರಲ್ಲಿ ಜಾಮೀನು ನೀಡಲಾಗಿತ್ತು.

7. ಶ್ಯಾಮ್ ಮೀರಾ ಸಿಂಗ್:  ಪತ್ರಕರ್ತ, ನವದೆಹಲಿಯಲ್ಲಿ 10.11. 2021ರಲ್ಲಿ ಬಂಧನ  18.11.2021 ರಂದು ನಿರೀಕ್ಷಣಾ ಜಾಮೀನು ಪಡೆದರು.

8. ಮನನ್ ದಾರ್: ಶ್ರೀನಗರದ ಫೋಟೋ ಜರ್ನಲಿಸ್ಟ್,  22.10.2021ರಂದು ಇವರ ಬಂಧನ ನಡೆದಿದ್ದು, 04.01.2023 ರಂದು ಜಾಮೀನಿನ ಮೂಲಕ ಬಿಡುಗಡೆ

 ಯುಎಪಿಯಡಿ ಪ್ರಕರಣ ದಾಖಲಾಗಿ ಬಂಧನವಾಗದೆ ಇರುವವರು

  1. ಶ್ರೀನಗರದ ಫೋಟೋ ಜರ್ನಲಿಸ್ಟ್ ಮಸರತ್ ಜಹ್ರಾ ಅವರ ಮೇಲೆ 18.04.2020 ರಂದು ಪ್ರಕರಣ ದಾಖಲಿಸಲಾಗಿದೆ. ಆದರೆ ಬಂಧನ ನಡೆದಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...