Homeಮುಖಪುಟ2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

- Advertisement -
- Advertisement -

2010ರಿಂದ ಇಲ್ಲಿಯವರೆಗೆ ದೇಶದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ 1967ರ ಯುಎಪಿಎ ಅಡಿಯಲ್ಲಿ 16 ಪತ್ರಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಈ ರೀತಿ ಕಠೋರ ಕಾನೂನುಗಳ ಅಡಿಯಲ್ಲಿ ಪತ್ರಕರ್ತರ ಮೇಲೆ ಪ್ರಕರಣ ದಾಖಲಿಸಿರುವುದು ಭಾರತದಲ್ಲಿ ವಾಕ್ ಸ್ವಾತಂತ್ರ್ಯದ ಅಪಾಯಕಾರಿ ಸ್ಥಿತಿಯಲ್ಲಿರುವುದನ್ನು ಸೂಚಿಸುತ್ತದೆ.

ಸಮಾಜದಲ್ಲಿನ ಕೆಲ ನ್ಯೂನ್ಯತೆಗಳ, ಸಮಸ್ಯೆಗಳ ಕುರಿತು ತನಿಖೆ ಮಾಡಲು ಮತ್ತು ವರದಿ ಮಾಡಲು ಬಯಸುವ ಪತ್ರಕರ್ತರ ವಿರುದ್ಧ UAPA ಕಾಯ್ದೆಯನ್ನು ಬಳಸಿದಾಗ, ಅದು ಅವರ ಕಾನೂನುಬದ್ಧ ಕೆಲಸವನ್ನು ಅಪರಾಧೀಕರಿಸಲು ಮತ್ತು ಅವರನ್ನು “ಭಯೋತ್ಪಾದಕರು” ಎಂದು ಕಳಂಕಗೊಳಿಸುವ ಕೆಲಸ ಮಾಡುತ್ತದೆ.  ಇದಲ್ಲದೆ ಅವರ ಘನತೆಗೆ ಚ್ಯುತಿ ತರುವ ಮತ್ತು ಅವರನ್ನು ವಿನಾಃಕಾರಣ ಕಾನೂನು ಪ್ರಕ್ರಿಯೆಗಳ ಹಿಂದೆ ಅಲೆದಾಡಿಸಲು ಪ್ರಯತ್ನಿಸುತ್ತದೆ. ಇದು ಅವರ ವೃತ್ತಿಪರ ಕೆಲಸದ ಮೇಲೆ ಅಗಾಧ ಪ್ರಭಾವವನ್ನು ಬೀರುತ್ತದೆ.

ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಯುಎಪಿಎ ಕಾಯ್ದೆ ಜಾರಿಗೆ ತರಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಆಪಾದಿತ ದೇಶವಿರೋಧಿ ಚಟುವಟಿಕೆಗಳನ್ನು ಕೂಡ ಯುಎಪಿಎಯಡಿ ಸೇರಿಸಲಾಗಿದೆ. ಭಾರತದಲ್ಲಿ ಉಗ್ರ ಚಟುವಟಿಕೆ ನಿಗ್ರಹಕ್ಕೆ ಸಂಬಂಧಿಸಿದಂತೆ ಟಾಡಾ(TADA) ಮತ್ತು ಪೋಟಾ (POTA) ಕಾಯ್ದೆಗಳು ಅಸ್ತಿತ್ವದಲ್ಲಿದ್ದವು. ಆದರೆ, 1995ರಲ್ಲಿ ಟಾಡಾ ಕಾಯ್ದೆಯನ್ನು ಹಿಂಪಡೆಯಲಾಯಿತು. ಬಳಿಕ 2004ರಲ್ಲಿ ಪೋಟಾ ಕಾಯ್ದೆಯನ್ನು ಕೈ ಬಿಡಲಾಯಿತು. 1967ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಜಾರಿಗೆ ತಂದಿದ್ದ ಯುಎಪಿಎ ಕಾಯ್ದೆಯನ್ನು ಬಲಪಡಿಸಲಾಯಿತು. ಇದಕ್ಕಾಗಿ 2004, 2008, 2013 ಮತ್ತು 2019ರಲ್ಲಿ ತಿದ್ದುಪಡಿಗಳನ್ನು ತರುವ ಮೂಲಕ ಮತ್ತಷ್ಟು ಅಧಿಕಾರಗಳನ್ನು ನೀಡಲಾಯಿತು

ಇತ್ತೀಚಿನ ಬೆಳವಣಿಗೆಯಲ್ಲಿ ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರ  ಮೇಲೆ ಯುಎಪಿಎಯಡಿ ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿದೆ. ಪುರ್ಕಾಯಸ್ಥ ಮತ್ತು ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಹೆಚ್‌ಆರ್‌ ಅಮಿತ್ ಚಕ್ರವರ್ತಿ ವಿರುದ್ಧದ ಎಫ್‌ಐಆರ್‌ನಲ್ಲಿ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳು), 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು), 18 (ಪಿತೂರಿ) ಮತ್ತು ಯುಎಪಿಎ ಜೊತೆಗೆ ಐಪಿಸಿ ಸೆಕ್ಷನ್ 153ಎ (ವಿವಿಧ ಗುಂಪಿನ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 120 ಬಿ (ಅಪರಾಧ ಪಿತೂರಿ) ಆರೋಪವನ್ನು ಹೊರಿಸಲಾಗಿದೆ.

ಇದಲ್ಲದೆ ಮಾಧ್ಯಮದ ವಿರುದ್ಧ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯನ್ನು ನೇಹಾ ದೀಕ್ಷಿತ್ ಮತ್ತು ಪರಂಜಾಯ್ ಗುಹಾ ಠಾಕುರ್ತಾ ಸೇರಿದಂತೆ ಹಲವಾರು ಪತ್ರಕರ್ತರ ವಿರುದ್ಧ ಕೂಡ ಬಳಸಲಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಕಳೆದ ಕೆಲವು ವರ್ಷಗಳಿಂದ ಯುಎಪಿಎಯನ್ನು ನಿರ್ದಾಕ್ಷಿಣ್ಯವಾಗಿ ಬಳಸಿರುವುದು ಕಂಡು ಬಂದಿದೆ. ಇದಲ್ಲದೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸಾರ್ವಜನಿಕ ಸುರಕ್ಷತಾ ಕಾಯಿದೆ ಮತ್ತು ಛತ್ತೀಸ್‌ಗಢ ಜನ್ ಸುರಕ್ಷಾ ಅಧಿನಿಯಮ್, ರಾಷ್ಟ್ರೀಯ ಭದ್ರತಾ ಕಾಯ್ದೆ ಮತ್ತು ನಿಬಂಧನೆಗಳಂತಹ ಇತರ ಕಠೋರ ನಿಯಮಗಳನ್ನು  ಕೂಡ ಪತ್ರಕರ್ತರ ಮೇಲೆ ವಿಧಿಸಲಾಗಿದೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ 2010-20ರವರೆಗೆ ಭಾರತದಲ್ಲಿ 154 ಪತ್ರಕರ್ತರನ್ನು ಬಂಧಿಸಲಾಗಿದೆ. ವಿಚಾರಣೆಗೆ ಒಳಪಡಿಸಲಾಗಿದೆ ಅಥವಾ ಅವರ ವೃತ್ತಿಪರ ಕೆಲಸಕ್ಕಾಗಿ ಅವರಿಗೆ ಶೋಕಾಸ್ ನೋಟಿಸ್‌ಗಳನ್ನು ನೀಡಲಾಗಿದೆ. ಇದರಲ್ಲಿ 40 ಪ್ರತಿಶತ 2020ರಲ್ಲಿ ನಡೆದಿದೆ ಎಂದು ತಿಳಿಸಿದೆ. ಇದಲ್ಲದೆ 9 ವಿದೇಶಿ ಪತ್ರಕರ್ತರು ಗಡೀಪಾರು, ಬಂಧನ, ಭಾರತಕ್ಕೆ ಪ್ರವೇಶವನ್ನು ನಿರಾಕರಣೆ ತೊಡಕುಗಳನ್ನು ಎದುರಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪತ್ರಕರ್ತರು ಸುದ್ದಿ ಮತ್ತು ಮಾಹಿತಿಯ ಸಂದೇಶವಾಹಕರು. ಅವರನ್ನು ಮೌನಗೊಳಿಸುವುದು ಅವರ ವರದಿಗಾರಿಕೆಯನ್ನು ಮೌನಗೊಳಿಸಿದಂತೆ. ಇದರಿಂದ ಯಾವುದೇ ಭಯವಿಲ್ಲದೆ ಮಾಹಿತಿಯನ್ನು ಪಡೆಯುವ ನಾಗರಿಕರ ಪ್ರಜಾಸತ್ತಾತ್ಮಕ ಹಕ್ಕಿಗೆ ಧಕ್ಕೆಯಾಗುತ್ತದೆ.

ಭಾರತದಲ್ಲಿ UAPA ಅಡಿಯಲ್ಲಿ ಪತ್ರಕರ್ತರ ಮೇಲೆ ದಾಖಲಾದ ಪ್ರಕರಣಗಳು 

ಪತ್ರಕರ್ತರ ಮೇಲೆ ಪ್ರಸ್ತುತ UAPA ಅಡಿಯಲ್ಲಿ ದಾಖಲಾಗಿರುವ ಪ್ರಕರಣ :16
ಯುಎಪಿಎಯಡಿ ಬಂಧಿತ ಪತ್ರಕರ್ತರು:07
ಯುಎಪಿಎಯಡಿ ಜಾಮೀನಿನ ಮೇಲೆ ಇರುವ ಪತ್ರಕರ್ತರು:08
ಯುಎಪಿಎಯಡಿ ಆರೋಪಿತ ಬಂಧನವಾಗದ ಪತ್ರಕರ್ತರ  ಸಂಖ್ಯೆ:01
ಯುಎಪಿಎಯಡಿ ಖುಲಾಸೆಗೊಂಡ ಪತ್ರಕರ್ತರು:01
ಯುಎಪಿಎಯಿಂದ ಮುಕ್ತಗೊಂಡ ಪತ್ರಕರ್ತರು:01

ಬಂಧಿತ, ಪೊಲೀಸ್ ಕಸ್ಟಡಿಯಲ್ಲಿ ಇರುವವರು
1. ಪ್ರಬೀರ್ ಪುರ್ಕಾಯಸ್ಥ, ಸಂಪಾದಕ, ನ್ಯೂಸ್‌ಕ್ಲಿಕ್ – 03.10.2023, ನವದೆಹಲಿ

ಜೈಲಿನಲ್ಲಿರುವವರು
1. ಆಸಿಫ್ ಸುಲ್ತಾನ್, ವರದಿಗಾರರು ಕಾಶ್ಮೀರ – 27.08.2018ರಿಂದ ಜೈಲಿನಲ್ಲಿದ್ದಾರೆ.
2. ಫಹಾದ್ ಶಾ, ಸಂಪಾದಕರು, ಕಾಶ್ಮೀರವಾಲಾ – 04.02.2022ರಲ್ಲಿ ಬಂಧನವಾಗಿದೆ. ಇವರು  ಪುಲ್ವಾಮಾದವರು. 
3. ಸಜ್ಜದ್ ಗುಲ್, ‘ದಿ ಕಾಶ್ಮೀರ್ ವಾಲಾ’ದ ಟ್ರೈನಿ ವರದಿಗಾರರು 

4. ರೂಪೇಶ್ ಕುಮಾರ್ ಪತ್ರಕರ್ತರು ರಾಮಗಢ ಜಿಲ್ಲೆ, ಜಾರ್ಖಂಡ್
5. ಇರ್ಫಾನ್ ಮೆಹ್ರಾಜ್, ಸಂಪಾದಕ, ವಂದೇ ಮ್ಯಾಗಜೀನ್ ಶ್ರೀನಗರ, ಜಮ್ಮು ಮತ್ತು ಕಾಶ್ಮೀರ

ಗೃಹ ಬಂಧನದಲ್ಲಿರುವವರು

1. ಗೌತಮ್ ನವ್ಲಾಖಾ, ಬರಹಗಾರರು, ಸಲಹಾ ಸಂಪಾದಕರು

ಜಾಮೀನಿನ ಮೇಲೆ ಇರುವವರು (ಬಂಧನ ದಿನಾಂಕದ ಆದೇಶದ ಪ್ರಕಾರ)

1. ಸೀಮಾ ಆಜಾದ್: ಇವರು ‘ದಸ್ತಕ್‌’ನ  ಸಂಪಾದಕರು  ಉತ್ತರ ಪ್ರದೇಶದ ಪ್ರಯಾಗ್ರಾಜ್‌ನವರು ಇವರನ್ನು  ಫೆಬ್ರವರಿ 2010ರಲ್ಲಿ ಬಂಧಿಸಲಾಗಿತ್ತು. ಆಗಸ್ಟ್ 2012 ರಲ್ಲಿ ಜಾಮೀನು ನೀಡಲಾಯಿತು.

2. ವಿಶ್ವ ವಿಜಯ್: ದಸ್ತಕ್‌ ಸಂಪಾದಕರು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 2010 ಬಂಧಿಸಲಾಯಿತು ಮತ್ತು ಆಗಸ್ಟ್ 2012ರಲ್ಲಿ ಜಾಮೀನು ನೀಡಲಾಯಿತು.

3. ಕೆ ಕೆ ಶಾಹಿನಾ: ಔಟ್‌ಲುಕ್ ಪತ್ರಕರ್ತೆ, ಡಿಸೆಂಬರ್ 2010 ರಲ್ಲಿ ದಾಖಲಾದ ಪ್ರಕರಣ. ಜುಲೈ 2011 ರಲ್ಲಿ ನಿರೀಕ್ಷಣಾ ಜಾಮೀನು ಮಂಜೂರು.

4. ಸಿದ್ದಿಕ್ ಕಪ್ಪನ್; ಪತ್ರಕರ್ತ, ದೆಹಲಿಯಲ್ಲಿ 05.10.2020 ರಂದು ಬಂಧಿಸಲಾಯಿತು, 09.09.2023 ರಂದು UAPA ಪ್ರಕರಣದಲ್ಲಿ ಮತ್ತು 23.12.2022 ರಂದು PMLA ಪ್ರಕರಣದಲ್ಲಿ ಜಾಮೀನು ನೀಡಲಾಯಿತು.

5. ಪಾವೊಜೆಲ್ ಚಾವೊಬಾ; ದಿ ಫ್ರಾಂಟಿಯರ್ ಮಣಿಪುರದ ಕಾರ್ಯನಿರ್ವಾಹಕ ಸಂಪಾದಕ, ಇಂಫಾಲ್‌ನಲ್ಲಿ 17.01.2021 ಬಂಧಿಸಲಾಯಿತು, 18.01.2021 ಜಾಮೀನು ಮಂಜೂರು ಮಾಡಲಾಯಿತು.

6. ದಿ ಫ್ರಾಂಟಿಯರ್ ಮಣಿಪುರ ಇಂಫಾಲ್‌ನ ಸಂಪಾದಕರಾದ ಧೀರೇನ್ ಸದೋಕ್‌ಪಂ ಅವರನ್ನು 17.01.2021 ಬಂಧನ ಮಾಡಲಾಗಿತ್ತು. ಮತ್ತು 18.01.2021ರಲ್ಲಿ ಜಾಮೀನು ನೀಡಲಾಗಿತ್ತು.

7. ಶ್ಯಾಮ್ ಮೀರಾ ಸಿಂಗ್:  ಪತ್ರಕರ್ತ, ನವದೆಹಲಿಯಲ್ಲಿ 10.11. 2021ರಲ್ಲಿ ಬಂಧನ  18.11.2021 ರಂದು ನಿರೀಕ್ಷಣಾ ಜಾಮೀನು ಪಡೆದರು.

8. ಮನನ್ ದಾರ್: ಶ್ರೀನಗರದ ಫೋಟೋ ಜರ್ನಲಿಸ್ಟ್,  22.10.2021ರಂದು ಇವರ ಬಂಧನ ನಡೆದಿದ್ದು, 04.01.2023 ರಂದು ಜಾಮೀನಿನ ಮೂಲಕ ಬಿಡುಗಡೆ

 ಯುಎಪಿಯಡಿ ಪ್ರಕರಣ ದಾಖಲಾಗಿ ಬಂಧನವಾಗದೆ ಇರುವವರು

  1. ಶ್ರೀನಗರದ ಫೋಟೋ ಜರ್ನಲಿಸ್ಟ್ ಮಸರತ್ ಜಹ್ರಾ ಅವರ ಮೇಲೆ 18.04.2020 ರಂದು ಪ್ರಕರಣ ದಾಖಲಿಸಲಾಗಿದೆ. ಆದರೆ ಬಂಧನ ನಡೆದಿಲ್ಲ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...