Homeಕರ್ನಾಟಕಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಆರ್‌ಟಿಐ ವರದಿ ಆಧಾರಿಸಿ ‘ಡೆಕ್ಕನ್‌ ಹೆರಾಲ್ಡ್‌’ ವಿಶೇಷ ವರದಿ ಮಾಡಿದ್ದು, ಹಲವು ಆತಂಕಕಾರಿ ಸಂಗತಿಗಳನ್ನು ಹೊರಗೆಡವಿದೆ.

- Advertisement -
- Advertisement -

“ಹಿಜಾಬ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ನಿರಾಕರಿಸುವ ವಿದ್ಯಾರ್ಥಿಗಳಿಗೆ ಟಿಸಿ (ವರ್ಗಾವಣೆ ಪ್ರಮಾಣಪತ್ರ) ನೀಡಲಾಗುವುದು” ಎಂದು ಕಳೆದ ಮೇ ತಿಂಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡ್ಪಾಡಿತ್ತಾಯ ಘೋಷಣೆ ಮಾಡಿದರ. ಆನಂತರದಲ್ಲಿ ಶೇ. 16ಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಮಂಗಳೂರು ವಿವಿಗೆ ಸೇರಿದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳನ್ನು ತೊರೆದಿದ್ದಾರೆ. ಎರಡನೇ, ಮೂರನೇ, ನಾಲ್ಕನೇ ಮತ್ತು ಐದನೇ ಸೆಮಿಸ್ಟರ್‌ಗಳಲ್ಲಿರುವ ವಿದ್ಯಾರ್ಥಿನಿಯರು ಟಿಸಿಗಳನ್ನು ವಾಪಸ್ ಪಡೆದಿದ್ದಾರೆ.

‘ಡೆಕ್ಕನ್‌ ಹೆರಾಲ್ಡ್’ ಪತ್ರಿಕೆ ಆರ್‌ಐಐ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ವರದಿ ಮಾಡಿದೆ. “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳೂರು ವಿವಿಗೆ ಸೇರಿದ ಕಾಲೇಜುಗಳಿಗೆ 2020-21 ಮತ್ತು 2021-22ರಲ್ಲಿ ವಿವಿಧ ಕೋರ್ಸ್‌ಗಳಿಗೆ ದಾಖಲಾದ ಒಟ್ಟು 900 ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ 145 ವಿದ್ಯಾರ್ಥಿಗಳು ತಮ್ಮ ವರ್ಗಾವಣೆ ಪತ್ರಗಳನ್ನು ಪಡೆದುಕೊಂಡಿದ್ದಾರೆ” ಎಂದು ಆರ್‌ಟಿಐ ಮಾಹಿತಿಯಿಂದ ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರ್ಗಾವಣೆ ಪಡೆದ ಕೆಲವರು ಹಿಜಾಬ್‌ಗೆ ಅವಕಾಶವಿರುವ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದರೆ, ಇನ್ನು ಕೆಲವರು ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣದಿಂದ ಕಾಲೇಜು ಬಿಟ್ಟಿದ್ದಾರೆ. ಆದರೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ 113 ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಕಾಲೇಜುಗಳಲ್ಲಿ ಓದುವುದನ್ನು ಮುಂದುವರೆಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಂಗಳೂರು ವಿವಿಗೆ ಸೇರಿದ 10 ಸರ್ಕಾರಿ, ಅನುದಾನಿತ ಅಂಗಸಂಸ್ಥೆಗಳಿವೆ.

ಅನುದಾನಿತ ಕಾಲೇಜುಗಳಿಗೆ (8%) ಹೋಲಿಸಿದರೆ ಸರ್ಕಾರಿ ಕಾಲೇಜುಗಳಲ್ಲಿ (34%) ವರ್ಗಾವಣೆ ಪತ್ರ ಪಡೆಯುವ ಮುಸ್ಲಿಂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39 ಸರಕಾರಿ, 36 ಅನುದಾನಿತ ಕಾಲೇಜುಗಳಿವೆ. ಉಡುಪಿ ಜಿಲ್ಲೆಯಲ್ಲಿ (14%) ವರ್ಗಾವಣೆ ಬಯಸಿದ ವಿದ್ಯಾರ್ಥಿಗಳ ಸಂಖ್ಯೆ, ದಕ್ಷಿಣ ಕನ್ನಡ ಜಿಲ್ಲೆಗಿಂತ (13%) ಹೆಚ್ಚಾಗಿದೆ.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ದಕ್ಷಿಣ ಕನ್ನಡದ ಸರ್ಕಾರಿ ಕಾಲೇಜುಗಳ ಪೈಕಿ ಇಲ್ಲಿನ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪೈ- ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಟಿ.ಸಿ. ಪಡೆದಿದ್ದಾರೆ. 51 ಮುಸ್ಲಿಂ ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ತಮ್ಮ ಟಿಸಿ ಪಡೆದುಕೊಂಡಿದ್ದಾರೆ.

ಹಳೇಅಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ, ತೃತೀಯ ಮತ್ತು ನಾಲ್ಕನೇ ಸೆಮಿಸ್ಟರ್‌ ತರಗತಿಗಳಿಗೆ ಹಾಜರಾಗಿದ್ದ 20 ವಿದ್ಯಾರ್ಥಿನಿಯರು ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್‌ನಲ್ಲಿದ್ದಾಗ ಟಿಸಿ ಪಡೆಯಲು ಬಯಸಿದ್ದಾರೆ. ಕಾಲೇಜು ಪ್ರಾಂಶುಪಾಲ ಶ್ರೀಧರ್ ಅವರು ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯೆ ನೀಡಿದ್ದು, “ತರಗತಿಗಳಿಗೆ ಹಾಜರಾಗುವಂತೆ ಮಾಡಿದ ಮನವಿಯನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸಿದ್ದಾರೆ. ಅವರು ಟಿಸಿಗಳನ್ನು ಸಹ ಸಂಗ್ರಹಿಸಲಿಲ್ಲ” ಎಂದಿದ್ದಾರೆ.

ಹಿಜಾಬ್ ವಿವಾದದ ಕೇಂದ್ರಬಿಂದುವಾಗಿರುವ ಉಡುಪಿಯ ಅಜ್ಜರಕಾಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂಬತ್ತು ವಿದ್ಯಾರ್ಥಿಗಳು ಟಿಸಿ ಪಡೆದಿದ್ದಾರೆ. ಆ ಮೂಲಕ ಇಡೀ ಜಿಲ್ಲೆಯಲ್ಲಿ ಹೆಚ್ಚು ಟಿ.ಸಿ.ಪಡೆದ ಕಾಲೇಜಾಗಿ ಇದು ಗುರುತಿಸಿಕೊಂಡಿದೆ.

ಟಿಸಿ ನಂತರ ಮುಂದೇನು?

ಅನುದಾನಿತ ಕಾಲೇಜುಗಳ ಪೈಕಿ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ (11) ಮತ್ತು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ (13) ಅತಿ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಸಂಗ್ರಹಿಸಿದ್ದಾರೆ. ಹಾಗಾದರೆ ಈ ವಿದ್ಯಾರ್ಥಿಗಳು ಟಿಸಿ ಸಂಗ್ರಹಿಸಿದ ನಂತರ ಏನು ಮಾಡುತ್ತಿದ್ದಾರೆ?

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬಾಲಕಿಯರ ಸಮಾವೇಶದಲ್ಲಿ ಹಿಬಾ ಶೇಖ್ ಎಂಬ ವಿದ್ಯಾರ್ಥಿನಿ ಮಾತನಾಡಿ, “ಬೇರೆ ಕಾಲೇಜಿನಲ್ಲಿ ಪ್ರವೇಶ ಪಡೆಯುವ ನಿರೀಕ್ಷೆಯಲ್ಲಿದ್ದೇನೆ” ಎಂದಿದ್ದಾರೆ. ಕಾರ್‌ಸ್ಟ್ರೀಟ್‌ನಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಹಿಬಾ, ಟಿಸಿ ವಾಪಸ್‌ ಪಡೆಯಲು ನಿರ್ಧರಿಸಿದ್ದರು.

ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ ಮುಗಿಸಿದ್ದ ಗೌಸಿಯಾ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. “ಆದರೆ ಅವರ ಆರನೇ ಸೆಮಿಸ್ಟರ್ ಮಾರ್ಚ್ 2023 ರಲ್ಲಿ ಪ್ರಾರಂಭವಾಗಬಹುದು” ಎಂದು ಮಂಗಳೂರು ವಿವಿ ಮೂಲಗಳು ತಿಳಿಸಿವೆ.

ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ಮಾತನಾಡಿ, “ಅನೇಕ ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಕಾಂಬಿನೇಷನ್ ಇರುವ ಕಾಲೇಜುಗಳಿಗೆ ಪ್ರವೇಶ ಪಡೆಯಲು ಸಹಾಯ ಕೋರಿ ಭೇಟಿ ಮಾಡಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಕಾರಣ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವನ್ನು (ಕೆಎಸ್‌ಒಯು) ಸಂಪರ್ಕಿಸಲು ನಾನು ಅವರಿಗೆ ಸೂಚಿಸಿದ್ದೇನೆ” ಎಂದಿದ್ದಾರೆ.

“ಧರ್ಮಕ್ಕಿಂತ ಶಿಕ್ಷಣ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದೆ” ಎಂದು ಹೇಳಿದ್ದಾರೆ.

ಬೆಂಗಳೂರು ಮೂಲದ ಮನಶ್ಶಾಸ್ತ್ರಜ್ಞರು ಹಾಗೂ ಸಾಮಾಜಿಕ ಕಾರ್ಯಕರ್ತೆ ರುಕ್ಸಾನಾ ಹಾಸನ್ ಮಾತನಾಡಿ, “ಮುಸ್ಲಿಂ ವಿದ್ಯಾರ್ಥಿನಿಯರು ಭಾವನಾತ್ಮಕವಾಗದೆ ತಮ್ಮ ಶಿಕ್ಷಣವನ್ನು ಮುಂದುವರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ (ಟಿಆರ್‌ಎಫ್) ಅಧ್ಯಕ್ಷ ರಿಯಾಜ್ ಅಹಮದ್ ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯದ ಸಹಾಯದಿಂದ ಅನೇಕ ಹೆಣ್ಣುಮಕ್ಕಳು ಖಾಸಗಿ ಕಾಲೇಜುಗಳಿಗೆ ದಾಖಲಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

‘ಈ ಪ್ರಮಾಣ ಹೆಚ್ಚಿರಬಹುದು’

ಹಿಜಾಬ್ ವಿಷಯದಲ್ಲಿ ಘರ್ಷಣೆಗೆ ಸಾಕ್ಷಿಯಾದ ಉಪ್ಪಿನಂಗಡಿಯ ಪ್ರಥಮ ದರ್ಜೆ ಸರ್ಕಾರಿ ಕಾಲೇಜು ಮಾಹಿತಿ ನೀಡುವಾಗ, “ಯಾವುದೇ ವಿದ್ಯಾರ್ಥಿಗಳು ಕಾಲೇಜು ಬಿಟ್ಟಿಲ್ಲ” ಎಂದು ತಿಳಿಸಿತ್ತು. ಆದರೆ ಮರುಪರಿಶೀಲನೆ ಮಾಡಿದಾಗ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಪ್ರೊ.ಶೇಖರ್ ಒಪ್ಪಿಕೊಂಡಿದ್ದಾರೆ.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಜಿಲ್ಲಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಪ್ರತಿಕ್ರಿಯಿಸಿ, “ಸಂಗ್ರಹ ಅಂಕಿಅಂಶಗಳಿಗಿಂತ ಕಾಲೇಜು ತೊರೆದ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿರಬಹುದು” ಎಂದಿದ್ದಾರೆ.

ವರದಿ ಕೃಪೆ: ಡೆಕ್ಕನ್‌ ಹೆರಾಲ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...