Homeಕರ್ನಾಟಕಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ಆರ್‌ಟಿಐ ವರದಿ ಆಧಾರಿಸಿ ‘ಡೆಕ್ಕನ್‌ ಹೆರಾಲ್ಡ್‌’ ವಿಶೇಷ ವರದಿ ಮಾಡಿದ್ದು, ಹಲವು ಆತಂಕಕಾರಿ ಸಂಗತಿಗಳನ್ನು ಹೊರಗೆಡವಿದೆ.

- Advertisement -
- Advertisement -

“ಹಿಜಾಬ್ ಇಲ್ಲದೆ ತರಗತಿಗಳಿಗೆ ಹಾಜರಾಗಲು ನಿರಾಕರಿಸುವ ವಿದ್ಯಾರ್ಥಿಗಳಿಗೆ ಟಿಸಿ (ವರ್ಗಾವಣೆ ಪ್ರಮಾಣಪತ್ರ) ನೀಡಲಾಗುವುದು” ಎಂದು ಕಳೆದ ಮೇ ತಿಂಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡ್ಪಾಡಿತ್ತಾಯ ಘೋಷಣೆ ಮಾಡಿದರ. ಆನಂತರದಲ್ಲಿ ಶೇ. 16ಕ್ಕಿಂತ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಮಂಗಳೂರು ವಿವಿಗೆ ಸೇರಿದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳನ್ನು ತೊರೆದಿದ್ದಾರೆ. ಎರಡನೇ, ಮೂರನೇ, ನಾಲ್ಕನೇ ಮತ್ತು ಐದನೇ ಸೆಮಿಸ್ಟರ್‌ಗಳಲ್ಲಿರುವ ವಿದ್ಯಾರ್ಥಿನಿಯರು ಟಿಸಿಗಳನ್ನು ವಾಪಸ್ ಪಡೆದಿದ್ದಾರೆ.

‘ಡೆಕ್ಕನ್‌ ಹೆರಾಲ್ಡ್’ ಪತ್ರಿಕೆ ಆರ್‌ಐಐ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ವರದಿ ಮಾಡಿದೆ. “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳೂರು ವಿವಿಗೆ ಸೇರಿದ ಕಾಲೇಜುಗಳಿಗೆ 2020-21 ಮತ್ತು 2021-22ರಲ್ಲಿ ವಿವಿಧ ಕೋರ್ಸ್‌ಗಳಿಗೆ ದಾಖಲಾದ ಒಟ್ಟು 900 ಮುಸ್ಲಿಂ ವಿದ್ಯಾರ್ಥಿನಿಯರ ಪೈಕಿ 145 ವಿದ್ಯಾರ್ಥಿಗಳು ತಮ್ಮ ವರ್ಗಾವಣೆ ಪತ್ರಗಳನ್ನು ಪಡೆದುಕೊಂಡಿದ್ದಾರೆ” ಎಂದು ಆರ್‌ಟಿಐ ಮಾಹಿತಿಯಿಂದ ತಿಳಿದುಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರ್ಗಾವಣೆ ಪಡೆದ ಕೆಲವರು ಹಿಜಾಬ್‌ಗೆ ಅವಕಾಶವಿರುವ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದರೆ, ಇನ್ನು ಕೆಲವರು ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣದಿಂದ ಕಾಲೇಜು ಬಿಟ್ಟಿದ್ದಾರೆ. ಆದರೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ 113 ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಕಾಲೇಜುಗಳಲ್ಲಿ ಓದುವುದನ್ನು ಮುಂದುವರೆಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಂಗಳೂರು ವಿವಿಗೆ ಸೇರಿದ 10 ಸರ್ಕಾರಿ, ಅನುದಾನಿತ ಅಂಗಸಂಸ್ಥೆಗಳಿವೆ.

ಅನುದಾನಿತ ಕಾಲೇಜುಗಳಿಗೆ (8%) ಹೋಲಿಸಿದರೆ ಸರ್ಕಾರಿ ಕಾಲೇಜುಗಳಲ್ಲಿ (34%) ವರ್ಗಾವಣೆ ಪತ್ರ ಪಡೆಯುವ ಮುಸ್ಲಿಂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 39 ಸರಕಾರಿ, 36 ಅನುದಾನಿತ ಕಾಲೇಜುಗಳಿವೆ. ಉಡುಪಿ ಜಿಲ್ಲೆಯಲ್ಲಿ (14%) ವರ್ಗಾವಣೆ ಬಯಸಿದ ವಿದ್ಯಾರ್ಥಿಗಳ ಸಂಖ್ಯೆ, ದಕ್ಷಿಣ ಕನ್ನಡ ಜಿಲ್ಲೆಗಿಂತ (13%) ಹೆಚ್ಚಾಗಿದೆ.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ದಕ್ಷಿಣ ಕನ್ನಡದ ಸರ್ಕಾರಿ ಕಾಲೇಜುಗಳ ಪೈಕಿ ಇಲ್ಲಿನ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪೈ- ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಟಿ.ಸಿ. ಪಡೆದಿದ್ದಾರೆ. 51 ಮುಸ್ಲಿಂ ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ತಮ್ಮ ಟಿಸಿ ಪಡೆದುಕೊಂಡಿದ್ದಾರೆ.

ಹಳೇಅಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ, ತೃತೀಯ ಮತ್ತು ನಾಲ್ಕನೇ ಸೆಮಿಸ್ಟರ್‌ ತರಗತಿಗಳಿಗೆ ಹಾಜರಾಗಿದ್ದ 20 ವಿದ್ಯಾರ್ಥಿನಿಯರು ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್‌ನಲ್ಲಿದ್ದಾಗ ಟಿಸಿ ಪಡೆಯಲು ಬಯಸಿದ್ದಾರೆ. ಕಾಲೇಜು ಪ್ರಾಂಶುಪಾಲ ಶ್ರೀಧರ್ ಅವರು ಡೆಕ್ಕನ್‌ ಹೆರಾಲ್ಡ್‌ಗೆ ಪ್ರತಿಕ್ರಿಯೆ ನೀಡಿದ್ದು, “ತರಗತಿಗಳಿಗೆ ಹಾಜರಾಗುವಂತೆ ಮಾಡಿದ ಮನವಿಯನ್ನು ವಿದ್ಯಾರ್ಥಿಗಳು ನಿರ್ಲಕ್ಷಿಸಿದ್ದಾರೆ. ಅವರು ಟಿಸಿಗಳನ್ನು ಸಹ ಸಂಗ್ರಹಿಸಲಿಲ್ಲ” ಎಂದಿದ್ದಾರೆ.

ಹಿಜಾಬ್ ವಿವಾದದ ಕೇಂದ್ರಬಿಂದುವಾಗಿರುವ ಉಡುಪಿಯ ಅಜ್ಜರಕಾಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂಬತ್ತು ವಿದ್ಯಾರ್ಥಿಗಳು ಟಿಸಿ ಪಡೆದಿದ್ದಾರೆ. ಆ ಮೂಲಕ ಇಡೀ ಜಿಲ್ಲೆಯಲ್ಲಿ ಹೆಚ್ಚು ಟಿ.ಸಿ.ಪಡೆದ ಕಾಲೇಜಾಗಿ ಇದು ಗುರುತಿಸಿಕೊಂಡಿದೆ.

ಟಿಸಿ ನಂತರ ಮುಂದೇನು?

ಅನುದಾನಿತ ಕಾಲೇಜುಗಳ ಪೈಕಿ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ (11) ಮತ್ತು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ (13) ಅತಿ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿ ಸಂಗ್ರಹಿಸಿದ್ದಾರೆ. ಹಾಗಾದರೆ ಈ ವಿದ್ಯಾರ್ಥಿಗಳು ಟಿಸಿ ಸಂಗ್ರಹಿಸಿದ ನಂತರ ಏನು ಮಾಡುತ್ತಿದ್ದಾರೆ?

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಬಾಲಕಿಯರ ಸಮಾವೇಶದಲ್ಲಿ ಹಿಬಾ ಶೇಖ್ ಎಂಬ ವಿದ್ಯಾರ್ಥಿನಿ ಮಾತನಾಡಿ, “ಬೇರೆ ಕಾಲೇಜಿನಲ್ಲಿ ಪ್ರವೇಶ ಪಡೆಯುವ ನಿರೀಕ್ಷೆಯಲ್ಲಿದ್ದೇನೆ” ಎಂದಿದ್ದಾರೆ. ಕಾರ್‌ಸ್ಟ್ರೀಟ್‌ನಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ಹಿಬಾ, ಟಿಸಿ ವಾಪಸ್‌ ಪಡೆಯಲು ನಿರ್ಧರಿಸಿದ್ದರು.

ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ ಮುಗಿಸಿದ್ದ ಗೌಸಿಯಾ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. “ಆದರೆ ಅವರ ಆರನೇ ಸೆಮಿಸ್ಟರ್ ಮಾರ್ಚ್ 2023 ರಲ್ಲಿ ಪ್ರಾರಂಭವಾಗಬಹುದು” ಎಂದು ಮಂಗಳೂರು ವಿವಿ ಮೂಲಗಳು ತಿಳಿಸಿವೆ.

ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ಮಾತನಾಡಿ, “ಅನೇಕ ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಕಾಂಬಿನೇಷನ್ ಇರುವ ಕಾಲೇಜುಗಳಿಗೆ ಪ್ರವೇಶ ಪಡೆಯಲು ಸಹಾಯ ಕೋರಿ ಭೇಟಿ ಮಾಡಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಕಾರಣ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವನ್ನು (ಕೆಎಸ್‌ಒಯು) ಸಂಪರ್ಕಿಸಲು ನಾನು ಅವರಿಗೆ ಸೂಚಿಸಿದ್ದೇನೆ” ಎಂದಿದ್ದಾರೆ.

“ಧರ್ಮಕ್ಕಿಂತ ಶಿಕ್ಷಣ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದೆ” ಎಂದು ಹೇಳಿದ್ದಾರೆ.

ಬೆಂಗಳೂರು ಮೂಲದ ಮನಶ್ಶಾಸ್ತ್ರಜ್ಞರು ಹಾಗೂ ಸಾಮಾಜಿಕ ಕಾರ್ಯಕರ್ತೆ ರುಕ್ಸಾನಾ ಹಾಸನ್ ಮಾತನಾಡಿ, “ಮುಸ್ಲಿಂ ವಿದ್ಯಾರ್ಥಿನಿಯರು ಭಾವನಾತ್ಮಕವಾಗದೆ ತಮ್ಮ ಶಿಕ್ಷಣವನ್ನು ಮುಂದುವರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ (ಟಿಆರ್‌ಎಫ್) ಅಧ್ಯಕ್ಷ ರಿಯಾಜ್ ಅಹಮದ್ ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯದ ಸಹಾಯದಿಂದ ಅನೇಕ ಹೆಣ್ಣುಮಕ್ಕಳು ಖಾಸಗಿ ಕಾಲೇಜುಗಳಿಗೆ ದಾಖಲಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

‘ಈ ಪ್ರಮಾಣ ಹೆಚ್ಚಿರಬಹುದು’

ಹಿಜಾಬ್ ವಿಷಯದಲ್ಲಿ ಘರ್ಷಣೆಗೆ ಸಾಕ್ಷಿಯಾದ ಉಪ್ಪಿನಂಗಡಿಯ ಪ್ರಥಮ ದರ್ಜೆ ಸರ್ಕಾರಿ ಕಾಲೇಜು ಮಾಹಿತಿ ನೀಡುವಾಗ, “ಯಾವುದೇ ವಿದ್ಯಾರ್ಥಿಗಳು ಕಾಲೇಜು ಬಿಟ್ಟಿಲ್ಲ” ಎಂದು ತಿಳಿಸಿತ್ತು. ಆದರೆ ಮರುಪರಿಶೀಲನೆ ಮಾಡಿದಾಗ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಪ್ರೊ.ಶೇಖರ್ ಒಪ್ಪಿಕೊಂಡಿದ್ದಾರೆ.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಜಿಲ್ಲಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಪ್ರತಿಕ್ರಿಯಿಸಿ, “ಸಂಗ್ರಹ ಅಂಕಿಅಂಶಗಳಿಗಿಂತ ಕಾಲೇಜು ತೊರೆದ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿರಬಹುದು” ಎಂದಿದ್ದಾರೆ.

ವರದಿ ಕೃಪೆ: ಡೆಕ್ಕನ್‌ ಹೆರಾಲ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...