HomeUncategorizedಪಕ್ಷದ ಜಾಹೀರಾತಿಗೆ ವ್ಯಯಿಸಿದ 164 ಕೋಟಿ ರೂ. ಪಾವತಿಸಿ: ಕೇಜ್ರಿವಾಲ್ ಸರ್ಕಾರಕ್ಕೆ ನೋಟಿಸ್

ಪಕ್ಷದ ಜಾಹೀರಾತಿಗೆ ವ್ಯಯಿಸಿದ 164 ಕೋಟಿ ರೂ. ಪಾವತಿಸಿ: ಕೇಜ್ರಿವಾಲ್ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಅರವಿಂದ್‌ ಕೇಜ್ರಿವಾಲ್‌ ಅವರ ಸರಕಾರವು ಆಮ್‌ ಆದ್ಮಿ ಪಕ್ಷದ ರಾಜಕೀಯ ಜಾಹೀರಾತಿಗೆ  ₹ 163.62 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ ಎಂದು ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (ಡಿಐಪಿ) ನೋಟಿಸ್‌ ನೀಡಿದೆ. 10 ದಿನಗಳೊಳಗೆ ಆ ಹಣವನ್ನು ಎಎಪಿ ಪಾವತಿಸಬೇಕು, ಎಂದು ಸೂಚನೆಯಲ್ಲಿ ಎಚ್ಚರಿಸಿದೆ. ವಸೂಲಿಯಾಗದೇ ಇದ್ದಲ್ಲಿ ಪಕ್ಷದ ಕಚೇರಿಗೆ ಬೀಗ ಜಡಿಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

“ಒಟ್ಟು ₹ 163,61,88,265/- ಮೊತ್ತವನ್ನು ಮರುಪಾವತಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ. ಈ ನೋಟಿಸ್ ಜಾರಿ ಮಾಡಿದ 10 ದಿನಗಳೊಳಗೆ ಕೆಳಗೆ ನೀಡಲಾದ ಖಾತೆಗೆ ಹಣ ಠೇವಣಿ ಮಾಡಬೇಕು. ಒಂದು ವೇಳೆ ನೀಡಿದ ಕಾಲಾವಕಾಶದಲ್ಲಿ ಹಣ ಮರುಪಾವತಿ ಮಾಡದಿದ್ದಲ್ಲಿ ಕಾನೂನಿನ ಪ್ರಕಾರ ಮುಂದಿನ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ,” ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

2017ರ ಮಾರ್ಚ್ 31ರವರೆಗೆ ಪಕ್ಷದ ಜಾಹೀರಾತಿಗಾಗಿ ಒಟ್ಟು ₹ 99,31,10,053 (ರೂ. 99.31 ಕೋಟಿ) ವ್ಯಯಿಸಲಾಗಿದೆ. ಇನ್ನು ಉಳಿದ ₹ 64,30,78,212 (ರೂ. 64.31 ಕೋಟಿ) ಮೊತ್ತ ದಂಡದ ಬಡ್ಡಿಯಾಗಿದೆ ಎಂದು ಹಣದ ಬಗ್ಗೆ ನೋಟಿಸ್ ನಲ್ಲಿ ವಿವರಿಸಲಾಗಿದೆ.

ಇನ್ನು ಈ ನೋಟಿಸ್‌ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ‘ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ಬಿಜೆಪಿ ಚುನಾಯಿತ ಸಚಿವರು ಮತ್ತು ಆಡಳಿತಾರೂಢ ಸರ್ಕಾರ ಎಎಪಿಯನ್ನು ಗುರಿಯಾಗಿಸಿಕೊಂಡು ಈ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿದರು.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಸರ್ಕಾರಿ ಜಾಹೀರಾತಿನ ಸೋಗಿನಲ್ಲಿ ರಾಜಕೀಯ ಜಾಹೀರಾತುಗಳನ್ನು ನಡೆಸುತ್ತಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಆರೋಪಿಸಿದ್ದರು. ಇದಾದ ಸುಮಾರು ಒಂದು ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಡಿಸೆಂಬರ್ 20 ರಂದು ಲೆಫ್ಟಿನೆಂಟ್ ಗವರ್ನರ್ ಅವರು ಎಎಪಿಯಿಂದ ₹ 97 ಕೋಟಿ ವಸೂಲಿ ಮಾಡುವಂತೆ ಆದೇಶ ಹೊರಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಎಪಿ, ಅಂತಹ ಆದೇಶಗಳನ್ನು ರವಾನಿಸಲು ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿತ್ತು.

ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು, ಲೆಫ್ಟಿನೆಂಟ್ ಗವರ್ನರ್ ಕಳುಹಿಸಿದ ಆದೇಶವನ್ನು “ಹೊಸ ಪ್ರೇಮ ಪತ್ರ” ಎಂದು ವ್ಯಂಗ್ಯವಾಡಿದ್ದರು. “ನಮ್ಮದು ಈಗ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದೆ. ಅಷ್ಟೇ ಅಲ್ಲದೇ ಎಂಸಿಡಿಯಲ್ಲಿ ಅಧಿಕಾರವನ್ನು ಕಿತ್ತುಕೊಂಡಿದ್ದೇವೆ ಹಾಗಾಗಿ ಬಿಜೆಪಿ ಗಲಿಬಿಲಿಗೊಂಡಿದೆ. ಎಲ್‌ಜಿ ಸಾಹಬ್ ಅವರು ಬಿಜೆಪಿಯ ನಿರ್ದೇಶನದಂತೆ ಎಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಇದು ದೆಹಲಿಯ ಜನರನ್ನು ತೊಂದರೆಗೊಳಿಸುತ್ತಿದೆ. ಲೆಫ್ಟಿನೆಂಟ್ ಗವರ್ನರ್ ನಿರ್ದೇಶನಗಳಿಗೆ ಕಾನೂನಿನ ದೃಷ್ಟಿಯಲ್ಲಿ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...