Homeಮುಖಪುಟಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

- Advertisement -
- Advertisement -

ಹೊಸದಿಲ್ಲಿ: ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ​​ಸೋಮವಾರ ಬಾಕಿ ವೇತನ ಬಿಡುಗಡೆಗಾಗಿ ಒತ್ತಾಯಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಇಮಾಮ್‌ಗಳ ಗುಂಪು ಜಮಾಯಿಸಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿತು.

ಮಾಧ್ಯಮಗಳೊಂದಿಗೆ ಮಾತನಾಡಿದ ಮೌಲಾನಾ ಮಹ್ಫೂಜ್ ರೆಹಮಾನ್, “ನಾವು ಗುರುವಾರ ಬಂದಿದ್ದೇವು ಮತ್ತು ಶನಿವಾರದಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಬಹುದೆಂದು ಭರವಸೆ ನೀಡಲಾಗಿತ್ತು. ಆದರೆ ಆ ಭೇಟಿ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದು ಈಗ ನಮ್ಮ ಮೂರನೇ ಪ್ರಯತ್ನ. ಇಂದು ಅವರನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡದಿದ್ದರೆ, ನಾವು ಧರಣಿ ನಡೆಸುತ್ತೇವೆ ಮತ್ತು ಕಳೆದ 17 ತಿಂಗಳಿನಿಂದ ಬಾಕಿಯಿರುವ ನಮ್ಮ ಸಂಬಳ ಬಿಡುಗಡೆಯಾಗುವವರೆಗೆ ಬಿಡುವುದಿಲ್ಲ ಎಂದಿದ್ದಾರೆ.

ಇಮಾಮ್‌ಗಳು ತಮ್ಮ ಎರಡು ಪ್ರಮುಖ ಸಮಸ್ಯೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಅದರಲ್ಲಿ ವಕ್ಫ್ ಬೋರ್ಡ್‌ನಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಯನ್ನು ಭರ್ತಿ ಮಾಡುವುದು ಒಂದು ಬೇಡಿಕೆಯಾಗಿದೆ. ನಮ್ಮ ಬೇಡಿಕೆ ಕುರಿತು ಕೇಜ್ರಿವಾಲ್ ಅಥವಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾವು ರಾಜಕೀಯಕ್ಕಾಗಿ ಈ ಬೇಡಿಕೆಯನ್ನು ಇಡುತ್ತಿಲ್ಲ, ನಮಗೆ ನಿಜವಾದ ಕಾಳಜಿ ಇದೆ. ಸಿಇಒ ಇಲ್ಲದೆ ಇರುವ ಕಾರಣ ಹಣ ಬಿಡುಗಡೆಯಾದರೂ ನಮಗೆ ಸಂಬಳ ಸಿಗುವುದಿಲ್ಲ. ಸಿಇಒ ಅವರನ್ನು ತಕ್ಷಣವೇ ನೇಮಕಾತಿ ಮಾಡಬೇಕೆಂದು ಮೌಲಾನಾ ಮಹಫೂಜ್ ರೆಹಮಾನ್ ಹೇಳಿದ್ದಾರೆ.

ಮತ್ತೊಬ್ಬ ಮೌಲಾನಾ ಗಯ್ಯೂರ್ ಹಸನ್ ಮಾತನಾಡಿ, ಕಳೆದ 17 ತಿಂಗಳಿಂದ ನಮಗೆ ವೇತನ ನೀಡಿಲ್ಲ. ಹಲವು ಬಾರಿ ಭೇಟಿ ನೀಡಿ ಮನವಿ ಮಾಡಿದರೂ ಯಾವುದೇ ಪರಿಹಾರ ಸಿಕ್ಕಿಲ್ಲ. ನಾವು ಈಗ ಪ್ರತಿಭಟನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

1988ರಿಂದ ದೆಹಲಿ ವಕ್ಫ್ ಬೋರ್ಡ್ ಅಡಿಯಲ್ಲಿ ಇಮಾಮ್ ಆಗಿ ಸೇವೆ ಸಲ್ಲಿಸಿದ ಮುಫ್ತಿ ನರಜುಲ್ ಹಕ್ ಕಾಸ್ಮಿ ಮಾತನಾಡಿ, “ನಮ್ಮ ಬೇಡಿಕೆಗಳನ್ನು ಈಗ ಪರಿಹರಿಸದಿದ್ದರೆ, ಚುನಾವಣಾ ಅಧಿಸೂಚನೆ ಹೊರಡಿಸಿದ ನಂತರ ಪರಿಹಾರಕ್ಕೆ ಅವಕಾಶವಿಲ್ಲ. ಬಿಡುಗಡೆಯಾದ ಹಣವಿದ್ದರೂ ಕಾರ್ಯನಿರ್ವಹಣಾ ಸಿಇಒ ಇಲ್ಲದೆ ವೇತನ ನೀಡಲು ಸಾಧ್ಯವಿಲ್ಲ. ಸಿಇಒ ನೇಮಕ ಕಡ್ಡಾಯವಾಗಿದೆ ಎಂದಿದ್ದಾರೆ.

ತಮ್ಮ ಸಂಬಳ ತೀರಾ ಕಡಿಮೆ, ಕೇವಲ 18,000 ರೂ. ಮತ್ತು ಅದು ಕೂಡ 17 ತಿಂಗಳಿಂದ ಪಾವತಿಸಿಲ್ಲ ಹಲವಾರು ಇಮಾಮ್‌ಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು, ಇಮಾಮ್ ಗಳ ತಂಡವು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಿತ್ತು. ಆದರೆ ಅವರಿಂದ ಯಾವುದೇ ನಿರ್ದಿಷ್ಟ ಪರಿಹಾರಗಳನ್ನು ನೀಡಲಾಗಿಲ್ಲ ಎಂದು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಿದ್ಧ ಎಂದು ಇಮಾಮ್‌ಗಳು ಸ್ಪಷ್ಟಪಡಿಸಿದ್ದಾರೆ.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...