Homeಮುಖಪುಟಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

- Advertisement -
- Advertisement -

ಹೊಸದಿಲ್ಲಿ: ಅಖಿಲ ಭಾರತ ಇಮಾಮ್ ಅಸೋಸಿಯೇಷನ್ ​​ಸೋಮವಾರ ಬಾಕಿ ವೇತನ ಬಿಡುಗಡೆಗಾಗಿ ಒತ್ತಾಯಿಸಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಇಮಾಮ್‌ಗಳ ಗುಂಪು ಜಮಾಯಿಸಿ ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿತು.

ಮಾಧ್ಯಮಗಳೊಂದಿಗೆ ಮಾತನಾಡಿದ ಮೌಲಾನಾ ಮಹ್ಫೂಜ್ ರೆಹಮಾನ್, “ನಾವು ಗುರುವಾರ ಬಂದಿದ್ದೇವು ಮತ್ತು ಶನಿವಾರದಂದು ಕೇಜ್ರಿವಾಲ್ ಅವರನ್ನು ಭೇಟಿಯಾಗಬಹುದೆಂದು ಭರವಸೆ ನೀಡಲಾಗಿತ್ತು. ಆದರೆ ಆ ಭೇಟಿ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಇದು ಈಗ ನಮ್ಮ ಮೂರನೇ ಪ್ರಯತ್ನ. ಇಂದು ಅವರನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡದಿದ್ದರೆ, ನಾವು ಧರಣಿ ನಡೆಸುತ್ತೇವೆ ಮತ್ತು ಕಳೆದ 17 ತಿಂಗಳಿನಿಂದ ಬಾಕಿಯಿರುವ ನಮ್ಮ ಸಂಬಳ ಬಿಡುಗಡೆಯಾಗುವವರೆಗೆ ಬಿಡುವುದಿಲ್ಲ ಎಂದಿದ್ದಾರೆ.

ಇಮಾಮ್‌ಗಳು ತಮ್ಮ ಎರಡು ಪ್ರಮುಖ ಸಮಸ್ಯೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಅದರಲ್ಲಿ ವಕ್ಫ್ ಬೋರ್ಡ್‌ನಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಯನ್ನು ಭರ್ತಿ ಮಾಡುವುದು ಒಂದು ಬೇಡಿಕೆಯಾಗಿದೆ. ನಮ್ಮ ಬೇಡಿಕೆ ಕುರಿತು ಕೇಜ್ರಿವಾಲ್ ಅಥವಾ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಾವು ರಾಜಕೀಯಕ್ಕಾಗಿ ಈ ಬೇಡಿಕೆಯನ್ನು ಇಡುತ್ತಿಲ್ಲ, ನಮಗೆ ನಿಜವಾದ ಕಾಳಜಿ ಇದೆ. ಸಿಇಒ ಇಲ್ಲದೆ ಇರುವ ಕಾರಣ ಹಣ ಬಿಡುಗಡೆಯಾದರೂ ನಮಗೆ ಸಂಬಳ ಸಿಗುವುದಿಲ್ಲ. ಸಿಇಒ ಅವರನ್ನು ತಕ್ಷಣವೇ ನೇಮಕಾತಿ ಮಾಡಬೇಕೆಂದು ಮೌಲಾನಾ ಮಹಫೂಜ್ ರೆಹಮಾನ್ ಹೇಳಿದ್ದಾರೆ.

ಮತ್ತೊಬ್ಬ ಮೌಲಾನಾ ಗಯ್ಯೂರ್ ಹಸನ್ ಮಾತನಾಡಿ, ಕಳೆದ 17 ತಿಂಗಳಿಂದ ನಮಗೆ ವೇತನ ನೀಡಿಲ್ಲ. ಹಲವು ಬಾರಿ ಭೇಟಿ ನೀಡಿ ಮನವಿ ಮಾಡಿದರೂ ಯಾವುದೇ ಪರಿಹಾರ ಸಿಕ್ಕಿಲ್ಲ. ನಾವು ಈಗ ಪ್ರತಿಭಟನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

1988ರಿಂದ ದೆಹಲಿ ವಕ್ಫ್ ಬೋರ್ಡ್ ಅಡಿಯಲ್ಲಿ ಇಮಾಮ್ ಆಗಿ ಸೇವೆ ಸಲ್ಲಿಸಿದ ಮುಫ್ತಿ ನರಜುಲ್ ಹಕ್ ಕಾಸ್ಮಿ ಮಾತನಾಡಿ, “ನಮ್ಮ ಬೇಡಿಕೆಗಳನ್ನು ಈಗ ಪರಿಹರಿಸದಿದ್ದರೆ, ಚುನಾವಣಾ ಅಧಿಸೂಚನೆ ಹೊರಡಿಸಿದ ನಂತರ ಪರಿಹಾರಕ್ಕೆ ಅವಕಾಶವಿಲ್ಲ. ಬಿಡುಗಡೆಯಾದ ಹಣವಿದ್ದರೂ ಕಾರ್ಯನಿರ್ವಹಣಾ ಸಿಇಒ ಇಲ್ಲದೆ ವೇತನ ನೀಡಲು ಸಾಧ್ಯವಿಲ್ಲ. ಸಿಇಒ ನೇಮಕ ಕಡ್ಡಾಯವಾಗಿದೆ ಎಂದಿದ್ದಾರೆ.

ತಮ್ಮ ಸಂಬಳ ತೀರಾ ಕಡಿಮೆ, ಕೇವಲ 18,000 ರೂ. ಮತ್ತು ಅದು ಕೂಡ 17 ತಿಂಗಳಿಂದ ಪಾವತಿಸಿಲ್ಲ ಹಲವಾರು ಇಮಾಮ್‌ಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು, ಇಮಾಮ್ ಗಳ ತಂಡವು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಚರ್ಚಿಸಿತ್ತು. ಆದರೆ ಅವರಿಂದ ಯಾವುದೇ ನಿರ್ದಿಷ್ಟ ಪರಿಹಾರಗಳನ್ನು ನೀಡಲಾಗಿಲ್ಲ ಎಂದು ದೂರಿದ್ದಾರೆ.

ತಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಿದ್ಧ ಎಂದು ಇಮಾಮ್‌ಗಳು ಸ್ಪಷ್ಟಪಡಿಸಿದ್ದಾರೆ.

ರೈತ ಮುಖಂಡ ದಲ್ಲೆವಾಲ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....