Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...