Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...