Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...