Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...