Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...