Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...