Homeಅಂತರಾಷ್ಟ್ರೀಯಪೊಲೀಸರಿಂದ 17 ವರ್ಷದ ಬಾಲಕನ ಹತ್ಯೆ: ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಗಳು

ಪೊಲೀಸರಿಂದ 17 ವರ್ಷದ ಬಾಲಕನ ಹತ್ಯೆ: ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಗಳು

- Advertisement -
- Advertisement -

ಫ್ರಾನ್ಸ್‌ನ ಪ್ಯಾರಿಸ್ ನಗರದಲ್ಲಿ 17 ವರ್ಷದ ವಾಹನ ಚಾಲಕನನ್ನು ಟ್ರಾಫಿಕ್ ಪೊಲೀಸರು ಹತ್ಯೆಗೈದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಇದುವರೆಗೂ ಸುಮಾರು 667ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, 200ಕ್ಕೂ ಅಧಿಕ ಪೊಲೀಸರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ನಹೆಲ್ ಎಂಬ 17 ವರ್ಷದ ಬಾಲಕನು ಓದುತ್ತಿರುವಾಗಲೇ ಆಹಾರ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮಂಗಳವಾರ ಟ್ರಾಫಿಕ್ ಪೊಲೀಸರು ನಾಂತೇರ್‌ನಲ್ಲಿ ವಾಹನ ತಪಾಸಣೆ ವೇಳೆ ವಿನಾಕಾರಣ ಗುಂಡು ಹಾರಿಸಿ ಆತನನ್ನು ಕೊಲೆಗೈಯಲಾಗಿದೆ ಎಂದು ಆರೋಪಿಸಿ ದೊಡ್ಡ ಪ್ರತಿಭಟನೆಗಳು ದಾಖಲಾಗಿವೆ. ಪೊಲೀಸರು ಮತ್ತು ಪೊಲೀಸ್ ಕಚೇರಿಗಳ ಮೇಲೆ ಪಟಾಕಿಗಳನ್ನು ಹಚ್ಚಿ ಎಸೆಯಲಾಗಿದೆ. ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಯಾಗಿ ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕಲು ಸುಮಾರು 40,000 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರುವಂತೆ ಮನವಿ ಮಾಡಿದ್ದಾರೆ. “17 ವರ್ಷದ ಬಾಲಕನ ಹತ್ಯೆ ಅನರೀಕ್ಷಿತ ಮತ್ತು ಅಕ್ಷಮ್ಯವಾದುದು. ಪೊಲೀಸರ ಈ ವರ್ತನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಆದರೆ ಪ್ರತಿಯಾಗಿ ನಾಗರೀಕರು ಶಾಂತಿ ಧಕ್ಕೆ ತರಬಾರದು” ಎಂದಿದ್ದಾರೆ.

ಫ್ರಾನ್ಸ್ ತನ್ನ ಪೋಲಿಸ್‌ನಲ್ಲಿ ಜನಾಂಗೀಯ ತಾರತಮ್ಯದ ಆಳವಾದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ವಿಶ್ವಸಂಸ್ಥೆ ಹೇಳಿದೆ, “ಉತ್ತರ ಆಫ್ರಿಕಾದ ಮೂಲದ 17 ವರ್ಷದ ಯುವಕನನ್ನು ಫ್ರಾನ್ಸ್‌ನಲ್ಲಿ ಪೊಲೀಸರು ಕೊಂದಿದ್ದರಿಂದ ನಾವು ಕಳವಳಗೊಂಡಿದ್ದೇವೆ … ಕಾನೂನು ಜಾರಿಯಲ್ಲಿನ ವರ್ಣಭೇದ ನೀತಿ ಮತ್ತು ಜನಾಂಗೀಯ ತಾರತಮ್ಯದ ಆಳವಾದ ಸಮಸ್ಯೆಗಳನ್ನು ದೇಶವು ಗಂಭೀರವಾಗಿ ಪರಿಹರಿಸಲು ಇದು ಸರಿಯಾದ ಸಂದರ್ಭವಾಗಿದೆ” ಎಂದು ವಿಶ್ವಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಶಾಂತಿ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಆದ್ಯತೆಯಾಗಿದೆ. ಅದಕ್ಕಾಗಿ ದೇಶದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕರೆದ ತುರ್ತು ಕ್ಯಾಬಿನೆಟ್ ಸಭೆಯು ಎಲ್ಲಾ ಆಯ್ಕೆಗಳನ್ನು ಪರಿಶೀಲಿಸುವ ಗುರಿಯನ್ನು ಹೊಂದಿದೆ ಎಂದು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಹೇಳಿದ್ದಾರೆ.

ಮಧ್ಯ ಪ್ಯಾರಿಸ್‌ನಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ನಾಂಟೆರ್ರೆಯ ವಿಯುಕ್ಸ್-ಪಾಂಟ್ ನೆರೆಹೊರೆಯಲ್ಲಿ ನಹೆಲ್ ತನ್ನ ತಾಯಿ ಮೌನಿಯಾ ಅವರೊಂದಿಗೆ ವಾಸಿಸುತ್ತಿದ್ದರು. 2021 ರಲ್ಲಿ ಲೈಸಿ ಲೂಯಿಸ್ ಬ್ಲೆರಿಯಟ್‌ನಲ್ಲಿ ಎಲೆಕ್ಟ್ರಿಕ್‌ಗೆ ಸಂಬಂಧಿಸಿದ ಕೋರ್ಸ್‌ಗೆ ಸೇರಿದ್ದರು. ಬಿಡುವಿನ ವೇಳೆಯಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಣಿಪುರ; ರಾಷ್ಟ್ರೀಯ ಏಕತೆಯ ಸವಾಲಿಗೆ ರಾಷ್ಟ್ರೀಯತೆ ಕಣ್‌ಮುಚ್ಚಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...