Homeಅಂತರಾಷ್ಟ್ರೀಯಪೊಲೀಸರಿಂದ 17 ವರ್ಷದ ಬಾಲಕನ ಹತ್ಯೆ: ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಗಳು

ಪೊಲೀಸರಿಂದ 17 ವರ್ಷದ ಬಾಲಕನ ಹತ್ಯೆ: ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಗಳು

- Advertisement -
- Advertisement -

ಫ್ರಾನ್ಸ್‌ನ ಪ್ಯಾರಿಸ್ ನಗರದಲ್ಲಿ 17 ವರ್ಷದ ವಾಹನ ಚಾಲಕನನ್ನು ಟ್ರಾಫಿಕ್ ಪೊಲೀಸರು ಹತ್ಯೆಗೈದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಇದುವರೆಗೂ ಸುಮಾರು 667ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, 200ಕ್ಕೂ ಅಧಿಕ ಪೊಲೀಸರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ನಹೆಲ್ ಎಂಬ 17 ವರ್ಷದ ಬಾಲಕನು ಓದುತ್ತಿರುವಾಗಲೇ ಆಹಾರ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮಂಗಳವಾರ ಟ್ರಾಫಿಕ್ ಪೊಲೀಸರು ನಾಂತೇರ್‌ನಲ್ಲಿ ವಾಹನ ತಪಾಸಣೆ ವೇಳೆ ವಿನಾಕಾರಣ ಗುಂಡು ಹಾರಿಸಿ ಆತನನ್ನು ಕೊಲೆಗೈಯಲಾಗಿದೆ ಎಂದು ಆರೋಪಿಸಿ ದೊಡ್ಡ ಪ್ರತಿಭಟನೆಗಳು ದಾಖಲಾಗಿವೆ. ಪೊಲೀಸರು ಮತ್ತು ಪೊಲೀಸ್ ಕಚೇರಿಗಳ ಮೇಲೆ ಪಟಾಕಿಗಳನ್ನು ಹಚ್ಚಿ ಎಸೆಯಲಾಗಿದೆ. ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಯಾಗಿ ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕಲು ಸುಮಾರು 40,000 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರುವಂತೆ ಮನವಿ ಮಾಡಿದ್ದಾರೆ. “17 ವರ್ಷದ ಬಾಲಕನ ಹತ್ಯೆ ಅನರೀಕ್ಷಿತ ಮತ್ತು ಅಕ್ಷಮ್ಯವಾದುದು. ಪೊಲೀಸರ ಈ ವರ್ತನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಆದರೆ ಪ್ರತಿಯಾಗಿ ನಾಗರೀಕರು ಶಾಂತಿ ಧಕ್ಕೆ ತರಬಾರದು” ಎಂದಿದ್ದಾರೆ.

ಫ್ರಾನ್ಸ್ ತನ್ನ ಪೋಲಿಸ್‌ನಲ್ಲಿ ಜನಾಂಗೀಯ ತಾರತಮ್ಯದ ಆಳವಾದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ವಿಶ್ವಸಂಸ್ಥೆ ಹೇಳಿದೆ, “ಉತ್ತರ ಆಫ್ರಿಕಾದ ಮೂಲದ 17 ವರ್ಷದ ಯುವಕನನ್ನು ಫ್ರಾನ್ಸ್‌ನಲ್ಲಿ ಪೊಲೀಸರು ಕೊಂದಿದ್ದರಿಂದ ನಾವು ಕಳವಳಗೊಂಡಿದ್ದೇವೆ … ಕಾನೂನು ಜಾರಿಯಲ್ಲಿನ ವರ್ಣಭೇದ ನೀತಿ ಮತ್ತು ಜನಾಂಗೀಯ ತಾರತಮ್ಯದ ಆಳವಾದ ಸಮಸ್ಯೆಗಳನ್ನು ದೇಶವು ಗಂಭೀರವಾಗಿ ಪರಿಹರಿಸಲು ಇದು ಸರಿಯಾದ ಸಂದರ್ಭವಾಗಿದೆ” ಎಂದು ವಿಶ್ವಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಶಾಂತಿ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಆದ್ಯತೆಯಾಗಿದೆ. ಅದಕ್ಕಾಗಿ ದೇಶದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕರೆದ ತುರ್ತು ಕ್ಯಾಬಿನೆಟ್ ಸಭೆಯು ಎಲ್ಲಾ ಆಯ್ಕೆಗಳನ್ನು ಪರಿಶೀಲಿಸುವ ಗುರಿಯನ್ನು ಹೊಂದಿದೆ ಎಂದು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಹೇಳಿದ್ದಾರೆ.

ಮಧ್ಯ ಪ್ಯಾರಿಸ್‌ನಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ನಾಂಟೆರ್ರೆಯ ವಿಯುಕ್ಸ್-ಪಾಂಟ್ ನೆರೆಹೊರೆಯಲ್ಲಿ ನಹೆಲ್ ತನ್ನ ತಾಯಿ ಮೌನಿಯಾ ಅವರೊಂದಿಗೆ ವಾಸಿಸುತ್ತಿದ್ದರು. 2021 ರಲ್ಲಿ ಲೈಸಿ ಲೂಯಿಸ್ ಬ್ಲೆರಿಯಟ್‌ನಲ್ಲಿ ಎಲೆಕ್ಟ್ರಿಕ್‌ಗೆ ಸಂಬಂಧಿಸಿದ ಕೋರ್ಸ್‌ಗೆ ಸೇರಿದ್ದರು. ಬಿಡುವಿನ ವೇಳೆಯಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಣಿಪುರ; ರಾಷ್ಟ್ರೀಯ ಏಕತೆಯ ಸವಾಲಿಗೆ ರಾಷ್ಟ್ರೀಯತೆ ಕಣ್‌ಮುಚ್ಚಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...