Homeಅಂತರಾಷ್ಟ್ರೀಯಪೊಲೀಸರಿಂದ 17 ವರ್ಷದ ಬಾಲಕನ ಹತ್ಯೆ: ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಗಳು

ಪೊಲೀಸರಿಂದ 17 ವರ್ಷದ ಬಾಲಕನ ಹತ್ಯೆ: ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆಗಳು

- Advertisement -
- Advertisement -

ಫ್ರಾನ್ಸ್‌ನ ಪ್ಯಾರಿಸ್ ನಗರದಲ್ಲಿ 17 ವರ್ಷದ ವಾಹನ ಚಾಲಕನನ್ನು ಟ್ರಾಫಿಕ್ ಪೊಲೀಸರು ಹತ್ಯೆಗೈದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಇದುವರೆಗೂ ಸುಮಾರು 667ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, 200ಕ್ಕೂ ಅಧಿಕ ಪೊಲೀಸರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ನಹೆಲ್ ಎಂಬ 17 ವರ್ಷದ ಬಾಲಕನು ಓದುತ್ತಿರುವಾಗಲೇ ಆಹಾರ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಮಂಗಳವಾರ ಟ್ರಾಫಿಕ್ ಪೊಲೀಸರು ನಾಂತೇರ್‌ನಲ್ಲಿ ವಾಹನ ತಪಾಸಣೆ ವೇಳೆ ವಿನಾಕಾರಣ ಗುಂಡು ಹಾರಿಸಿ ಆತನನ್ನು ಕೊಲೆಗೈಯಲಾಗಿದೆ ಎಂದು ಆರೋಪಿಸಿ ದೊಡ್ಡ ಪ್ರತಿಭಟನೆಗಳು ದಾಖಲಾಗಿವೆ. ಪೊಲೀಸರು ಮತ್ತು ಪೊಲೀಸ್ ಕಚೇರಿಗಳ ಮೇಲೆ ಪಟಾಕಿಗಳನ್ನು ಹಚ್ಚಿ ಎಸೆಯಲಾಗಿದೆ. ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪ್ರತಿಯಾಗಿ ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ.

ಪ್ರತಿಭಟನೆಯನ್ನು ಹತ್ತಿಕ್ಕಲು ಸುಮಾರು 40,000 ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತರುವಂತೆ ಮನವಿ ಮಾಡಿದ್ದಾರೆ. “17 ವರ್ಷದ ಬಾಲಕನ ಹತ್ಯೆ ಅನರೀಕ್ಷಿತ ಮತ್ತು ಅಕ್ಷಮ್ಯವಾದುದು. ಪೊಲೀಸರ ಈ ವರ್ತನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಆದರೆ ಪ್ರತಿಯಾಗಿ ನಾಗರೀಕರು ಶಾಂತಿ ಧಕ್ಕೆ ತರಬಾರದು” ಎಂದಿದ್ದಾರೆ.

ಫ್ರಾನ್ಸ್ ತನ್ನ ಪೋಲಿಸ್‌ನಲ್ಲಿ ಜನಾಂಗೀಯ ತಾರತಮ್ಯದ ಆಳವಾದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ವಿಶ್ವಸಂಸ್ಥೆ ಹೇಳಿದೆ, “ಉತ್ತರ ಆಫ್ರಿಕಾದ ಮೂಲದ 17 ವರ್ಷದ ಯುವಕನನ್ನು ಫ್ರಾನ್ಸ್‌ನಲ್ಲಿ ಪೊಲೀಸರು ಕೊಂದಿದ್ದರಿಂದ ನಾವು ಕಳವಳಗೊಂಡಿದ್ದೇವೆ … ಕಾನೂನು ಜಾರಿಯಲ್ಲಿನ ವರ್ಣಭೇದ ನೀತಿ ಮತ್ತು ಜನಾಂಗೀಯ ತಾರತಮ್ಯದ ಆಳವಾದ ಸಮಸ್ಯೆಗಳನ್ನು ದೇಶವು ಗಂಭೀರವಾಗಿ ಪರಿಹರಿಸಲು ಇದು ಸರಿಯಾದ ಸಂದರ್ಭವಾಗಿದೆ” ಎಂದು ವಿಶ್ವಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಶಾಂತಿ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಆದ್ಯತೆಯಾಗಿದೆ. ಅದಕ್ಕಾಗಿ ದೇಶದ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕರೆದ ತುರ್ತು ಕ್ಯಾಬಿನೆಟ್ ಸಭೆಯು ಎಲ್ಲಾ ಆಯ್ಕೆಗಳನ್ನು ಪರಿಶೀಲಿಸುವ ಗುರಿಯನ್ನು ಹೊಂದಿದೆ ಎಂದು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಹೇಳಿದ್ದಾರೆ.

ಮಧ್ಯ ಪ್ಯಾರಿಸ್‌ನಿಂದ ಸುಮಾರು 15 ಕಿ.ಮೀ ದೂರದಲ್ಲಿರುವ ನಾಂಟೆರ್ರೆಯ ವಿಯುಕ್ಸ್-ಪಾಂಟ್ ನೆರೆಹೊರೆಯಲ್ಲಿ ನಹೆಲ್ ತನ್ನ ತಾಯಿ ಮೌನಿಯಾ ಅವರೊಂದಿಗೆ ವಾಸಿಸುತ್ತಿದ್ದರು. 2021 ರಲ್ಲಿ ಲೈಸಿ ಲೂಯಿಸ್ ಬ್ಲೆರಿಯಟ್‌ನಲ್ಲಿ ಎಲೆಕ್ಟ್ರಿಕ್‌ಗೆ ಸಂಬಂಧಿಸಿದ ಕೋರ್ಸ್‌ಗೆ ಸೇರಿದ್ದರು. ಬಿಡುವಿನ ವೇಳೆಯಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಣಿಪುರ; ರಾಷ್ಟ್ರೀಯ ಏಕತೆಯ ಸವಾಲಿಗೆ ರಾಷ್ಟ್ರೀಯತೆ ಕಣ್‌ಮುಚ್ಚಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...