Homeಮುಖಪುಟ'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

- Advertisement -
- Advertisement -

‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಧ್ಯ ಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪೊಲೀಸರು ಶುಕ್ರವಾರ (ಡಿ.6) ಬಂಧಿಸಿದ್ದಾರೆ.

ರತ್ಲಂ ಜಿಲ್ಲೆಯ ಮನಕ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತ ಸಾಗರ್ ತಲಾಬ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

“ದೌರ್ಜನ್ಯದ ವಿಡಿಯೋ ಸೋರಿಕೆ ಮಾಡಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ವಿಡಿಯೋದಲ್ಲಿ ಮಕ್ಕಳಿಗೆ ಥಳಿಸಿರುವ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ನಮ್ಮ ತಂಡ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬಿಎನ್‌ಎಸ್ ಸೆಕ್ಷನ್‌ಗಳಾದ 296, 115(2), 126(2), 351(2), 196, ಮತ್ತು 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಅಪ್ರಾಪ್ತ ಎಂದು ಮನಕ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಸುರೇಂದ್ರ ಸಿಂಗ್ ಗಾರ್ಡಿಯಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮೂವರು ಮಕ್ಕಳು 7, 11 ಮತ್ತು 13 ವರ್ಷ ವಯಸ್ಸಿನವರು. ಅವರು ಕ್ರಮವಾಗಿ 2, 5 ಮತ್ತು 6 ನೇ ತರಗತಿಗಳ ವಿದ್ಯಾರ್ಥಿಗಳು. ಹಲ್ಲೆ ನಡೆಸಿ ಬಂಧಿತನಾಗಿರುವ ಆರೋಪಿಗೆ 17 ವರ್ಷ ವಯಸ್ಸು ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.

“ನಾನು, ನನ್ನ ಇಬ್ಬರು ಸ್ನೇಹಿತರ ಜೊತೆ ಸುಮಾರು ಒಂದೂವರೆ ತಿಂಗಳ ಹಿಂದೆ ಅಮೃತ್ ಸಾಗರ್ ತಲಾಬ್ ಬಳಿ ವಾಯು ವಿಹಾರಕ್ಕೆ ಹೋಗಿದ್ದೆ. ನಾವು ಅಲ್ಲಿ ಕುಳಿತಿದ್ದಾಗ ನಮ್ಮ ಬಳಿ ಇಬ್ಬರು ಬಂದು ಹೆಸರು ಕೇಳಿದರು. ನಂತರ ಅವರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಹಲ್ಲೆ ನಡೆಸಿದರು. ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿದರು. ಅವರಲ್ಲಿ ಒಬ್ಬ ನಮ್ಮ ಮೇಲೆ ಹಲ್ಲೆ ನಡೆಸುತ್ತಿರುವಾಗ, ಇನ್ನೋರ್ವ ವಿಡಿಯೋ ಮಾಡಿದ್ದಾರೆ. ನಂತರ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ 13 ವರ್ಷದ ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾನೆ.

ವರದಿಗಳ ಪ್ರಕಾರ, ಒಂದು ಸುಮಾರು ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಗುರುವಾರ (ಡಿ.5) ವಿಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಇಮ್ರಾನ್ ಖೋಖರ್ ಎಂಬ ಸಾಮಾಜಿಕ ಕಾರ್ಯಕರ್ತ ಮಕ್ಕಳ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಇಮ್ರಾನ್, “ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಕುಡಿದ ಮತ್ತಿನಲ್ಲಿ ಮನೋರಂಜನೆಗಾಗಿ ತನ್ನ ಮೊಬೈಲ್‌ನಲ್ಲಿದ್ದ ವಿಡಿಯೋ ಸೋರಿಕೆ ಮಾಡಿದ್ದಾನೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಮಕ್ಕಳು ಭಯಬೀತರಾಗಿದ್ದಾರೆ. ಆದ್ದರಿಂದ ಅವರು ಯಾರಲ್ಲೂ ಅ ವಿಷಯ ಹೇಳಿರಲಿಲ್ಲ” ಎಂದು ತಿಳಿಸಿದ್ದಾರೆ.

“ಹಲ್ಲೆಗೊಳಗಾದ ಮೂವರ ಪೈಕಿ 7 ವರ್ಷದ ಬಾಲಕ 10 ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾನೆ. ಆತ ತನ್ನ ಅಜ್ಜಿ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾನೆ. ಹಲ್ಲೆಯ ವಿಡಿಯೋ ಸೋರಿಕೆಯಾದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿ ಕುಳಿತಿದ್ದ. ನಾವು ಪೊಲೀಸರ ಸಹಾಯದಿಂದ ಬಾಗಿಲು ಒಡೆದು ಆತನನ್ನು ರಕ್ಷಿಸಿದ್ದೇವೆ” ಎಂದು ಇಮ್ರಾನ್ ಹೇಳಿದ್ದಾರೆ.

ಹಲ್ಲೆಗೊಳಗಾದ ಇನ್ನಿಬ್ಬರು ಮಕ್ಕಳ ಪೋಷಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಮ್ಮ ಮಕ್ಕಳು ಕಳೆದ ಒಂದು ತಿಂಗಳಿನಿಂದ ವಿಭಿನ್ನವಾಗಿ ವರ್ತಿಸುತ್ತಿದ್ದರು. ಶಾಲೆಗೆ ಹೋಗುತ್ತಿರಲಿಲ್ಲ. ಹೊರಗಡೆ ಆಟವಾಡಲೂ ಹೋಗುತ್ತಿರಲಿಲ್ಲ. ಯಾರೊಂದಿಗೂ ಸೇರುತ್ತಿರಲಿಲ್ಲ. ಮಾತನಾಡಲು ಭಯಪಡುತ್ತಿದ್ದರು. ಆದರೆ, ನಮಗೆ ಅವರ ಮೇಲೆ ಹಲ್ಲೆ ನಡೆದಿರುವುದು ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಮಗೆ ಆಘಾತವಾಯಿತು, ಸಹಿಸಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...