Homeಮುಖಪುಟ'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

- Advertisement -
- Advertisement -

‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಧ್ಯ ಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪೊಲೀಸರು ಶುಕ್ರವಾರ (ಡಿ.6) ಬಂಧಿಸಿದ್ದಾರೆ.

ರತ್ಲಂ ಜಿಲ್ಲೆಯ ಮನಕ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತ ಸಾಗರ್ ತಲಾಬ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

“ದೌರ್ಜನ್ಯದ ವಿಡಿಯೋ ಸೋರಿಕೆ ಮಾಡಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ವಿಡಿಯೋದಲ್ಲಿ ಮಕ್ಕಳಿಗೆ ಥಳಿಸಿರುವ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ನಮ್ಮ ತಂಡ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬಿಎನ್‌ಎಸ್ ಸೆಕ್ಷನ್‌ಗಳಾದ 296, 115(2), 126(2), 351(2), 196, ಮತ್ತು 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಅಪ್ರಾಪ್ತ ಎಂದು ಮನಕ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಸುರೇಂದ್ರ ಸಿಂಗ್ ಗಾರ್ಡಿಯಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮೂವರು ಮಕ್ಕಳು 7, 11 ಮತ್ತು 13 ವರ್ಷ ವಯಸ್ಸಿನವರು. ಅವರು ಕ್ರಮವಾಗಿ 2, 5 ಮತ್ತು 6 ನೇ ತರಗತಿಗಳ ವಿದ್ಯಾರ್ಥಿಗಳು. ಹಲ್ಲೆ ನಡೆಸಿ ಬಂಧಿತನಾಗಿರುವ ಆರೋಪಿಗೆ 17 ವರ್ಷ ವಯಸ್ಸು ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.

“ನಾನು, ನನ್ನ ಇಬ್ಬರು ಸ್ನೇಹಿತರ ಜೊತೆ ಸುಮಾರು ಒಂದೂವರೆ ತಿಂಗಳ ಹಿಂದೆ ಅಮೃತ್ ಸಾಗರ್ ತಲಾಬ್ ಬಳಿ ವಾಯು ವಿಹಾರಕ್ಕೆ ಹೋಗಿದ್ದೆ. ನಾವು ಅಲ್ಲಿ ಕುಳಿತಿದ್ದಾಗ ನಮ್ಮ ಬಳಿ ಇಬ್ಬರು ಬಂದು ಹೆಸರು ಕೇಳಿದರು. ನಂತರ ಅವರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಹಲ್ಲೆ ನಡೆಸಿದರು. ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿದರು. ಅವರಲ್ಲಿ ಒಬ್ಬ ನಮ್ಮ ಮೇಲೆ ಹಲ್ಲೆ ನಡೆಸುತ್ತಿರುವಾಗ, ಇನ್ನೋರ್ವ ವಿಡಿಯೋ ಮಾಡಿದ್ದಾರೆ. ನಂತರ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ 13 ವರ್ಷದ ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾನೆ.

ವರದಿಗಳ ಪ್ರಕಾರ, ಒಂದು ಸುಮಾರು ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಗುರುವಾರ (ಡಿ.5) ವಿಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಇಮ್ರಾನ್ ಖೋಖರ್ ಎಂಬ ಸಾಮಾಜಿಕ ಕಾರ್ಯಕರ್ತ ಮಕ್ಕಳ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಇಮ್ರಾನ್, “ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಕುಡಿದ ಮತ್ತಿನಲ್ಲಿ ಮನೋರಂಜನೆಗಾಗಿ ತನ್ನ ಮೊಬೈಲ್‌ನಲ್ಲಿದ್ದ ವಿಡಿಯೋ ಸೋರಿಕೆ ಮಾಡಿದ್ದಾನೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಮಕ್ಕಳು ಭಯಬೀತರಾಗಿದ್ದಾರೆ. ಆದ್ದರಿಂದ ಅವರು ಯಾರಲ್ಲೂ ಅ ವಿಷಯ ಹೇಳಿರಲಿಲ್ಲ” ಎಂದು ತಿಳಿಸಿದ್ದಾರೆ.

“ಹಲ್ಲೆಗೊಳಗಾದ ಮೂವರ ಪೈಕಿ 7 ವರ್ಷದ ಬಾಲಕ 10 ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾನೆ. ಆತ ತನ್ನ ಅಜ್ಜಿ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾನೆ. ಹಲ್ಲೆಯ ವಿಡಿಯೋ ಸೋರಿಕೆಯಾದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿ ಕುಳಿತಿದ್ದ. ನಾವು ಪೊಲೀಸರ ಸಹಾಯದಿಂದ ಬಾಗಿಲು ಒಡೆದು ಆತನನ್ನು ರಕ್ಷಿಸಿದ್ದೇವೆ” ಎಂದು ಇಮ್ರಾನ್ ಹೇಳಿದ್ದಾರೆ.

ಹಲ್ಲೆಗೊಳಗಾದ ಇನ್ನಿಬ್ಬರು ಮಕ್ಕಳ ಪೋಷಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಮ್ಮ ಮಕ್ಕಳು ಕಳೆದ ಒಂದು ತಿಂಗಳಿನಿಂದ ವಿಭಿನ್ನವಾಗಿ ವರ್ತಿಸುತ್ತಿದ್ದರು. ಶಾಲೆಗೆ ಹೋಗುತ್ತಿರಲಿಲ್ಲ. ಹೊರಗಡೆ ಆಟವಾಡಲೂ ಹೋಗುತ್ತಿರಲಿಲ್ಲ. ಯಾರೊಂದಿಗೂ ಸೇರುತ್ತಿರಲಿಲ್ಲ. ಮಾತನಾಡಲು ಭಯಪಡುತ್ತಿದ್ದರು. ಆದರೆ, ನಮಗೆ ಅವರ ಮೇಲೆ ಹಲ್ಲೆ ನಡೆದಿರುವುದು ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಮಗೆ ಆಘಾತವಾಯಿತು, ಸಹಿಸಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...