Homeಮುಖಪುಟ'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

- Advertisement -
- Advertisement -

‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಧ್ಯ ಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪೊಲೀಸರು ಶುಕ್ರವಾರ (ಡಿ.6) ಬಂಧಿಸಿದ್ದಾರೆ.

ರತ್ಲಂ ಜಿಲ್ಲೆಯ ಮನಕ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತ ಸಾಗರ್ ತಲಾಬ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

“ದೌರ್ಜನ್ಯದ ವಿಡಿಯೋ ಸೋರಿಕೆ ಮಾಡಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ವಿಡಿಯೋದಲ್ಲಿ ಮಕ್ಕಳಿಗೆ ಥಳಿಸಿರುವ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ನಮ್ಮ ತಂಡ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬಿಎನ್‌ಎಸ್ ಸೆಕ್ಷನ್‌ಗಳಾದ 296, 115(2), 126(2), 351(2), 196, ಮತ್ತು 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಅಪ್ರಾಪ್ತ ಎಂದು ಮನಕ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಸುರೇಂದ್ರ ಸಿಂಗ್ ಗಾರ್ಡಿಯಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮೂವರು ಮಕ್ಕಳು 7, 11 ಮತ್ತು 13 ವರ್ಷ ವಯಸ್ಸಿನವರು. ಅವರು ಕ್ರಮವಾಗಿ 2, 5 ಮತ್ತು 6 ನೇ ತರಗತಿಗಳ ವಿದ್ಯಾರ್ಥಿಗಳು. ಹಲ್ಲೆ ನಡೆಸಿ ಬಂಧಿತನಾಗಿರುವ ಆರೋಪಿಗೆ 17 ವರ್ಷ ವಯಸ್ಸು ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.

“ನಾನು, ನನ್ನ ಇಬ್ಬರು ಸ್ನೇಹಿತರ ಜೊತೆ ಸುಮಾರು ಒಂದೂವರೆ ತಿಂಗಳ ಹಿಂದೆ ಅಮೃತ್ ಸಾಗರ್ ತಲಾಬ್ ಬಳಿ ವಾಯು ವಿಹಾರಕ್ಕೆ ಹೋಗಿದ್ದೆ. ನಾವು ಅಲ್ಲಿ ಕುಳಿತಿದ್ದಾಗ ನಮ್ಮ ಬಳಿ ಇಬ್ಬರು ಬಂದು ಹೆಸರು ಕೇಳಿದರು. ನಂತರ ಅವರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಹಲ್ಲೆ ನಡೆಸಿದರು. ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿದರು. ಅವರಲ್ಲಿ ಒಬ್ಬ ನಮ್ಮ ಮೇಲೆ ಹಲ್ಲೆ ನಡೆಸುತ್ತಿರುವಾಗ, ಇನ್ನೋರ್ವ ವಿಡಿಯೋ ಮಾಡಿದ್ದಾರೆ. ನಂತರ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ 13 ವರ್ಷದ ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾನೆ.

ವರದಿಗಳ ಪ್ರಕಾರ, ಒಂದು ಸುಮಾರು ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಗುರುವಾರ (ಡಿ.5) ವಿಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಇಮ್ರಾನ್ ಖೋಖರ್ ಎಂಬ ಸಾಮಾಜಿಕ ಕಾರ್ಯಕರ್ತ ಮಕ್ಕಳ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಇಮ್ರಾನ್, “ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಕುಡಿದ ಮತ್ತಿನಲ್ಲಿ ಮನೋರಂಜನೆಗಾಗಿ ತನ್ನ ಮೊಬೈಲ್‌ನಲ್ಲಿದ್ದ ವಿಡಿಯೋ ಸೋರಿಕೆ ಮಾಡಿದ್ದಾನೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಮಕ್ಕಳು ಭಯಬೀತರಾಗಿದ್ದಾರೆ. ಆದ್ದರಿಂದ ಅವರು ಯಾರಲ್ಲೂ ಅ ವಿಷಯ ಹೇಳಿರಲಿಲ್ಲ” ಎಂದು ತಿಳಿಸಿದ್ದಾರೆ.

“ಹಲ್ಲೆಗೊಳಗಾದ ಮೂವರ ಪೈಕಿ 7 ವರ್ಷದ ಬಾಲಕ 10 ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾನೆ. ಆತ ತನ್ನ ಅಜ್ಜಿ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾನೆ. ಹಲ್ಲೆಯ ವಿಡಿಯೋ ಸೋರಿಕೆಯಾದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿ ಕುಳಿತಿದ್ದ. ನಾವು ಪೊಲೀಸರ ಸಹಾಯದಿಂದ ಬಾಗಿಲು ಒಡೆದು ಆತನನ್ನು ರಕ್ಷಿಸಿದ್ದೇವೆ” ಎಂದು ಇಮ್ರಾನ್ ಹೇಳಿದ್ದಾರೆ.

ಹಲ್ಲೆಗೊಳಗಾದ ಇನ್ನಿಬ್ಬರು ಮಕ್ಕಳ ಪೋಷಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಮ್ಮ ಮಕ್ಕಳು ಕಳೆದ ಒಂದು ತಿಂಗಳಿನಿಂದ ವಿಭಿನ್ನವಾಗಿ ವರ್ತಿಸುತ್ತಿದ್ದರು. ಶಾಲೆಗೆ ಹೋಗುತ್ತಿರಲಿಲ್ಲ. ಹೊರಗಡೆ ಆಟವಾಡಲೂ ಹೋಗುತ್ತಿರಲಿಲ್ಲ. ಯಾರೊಂದಿಗೂ ಸೇರುತ್ತಿರಲಿಲ್ಲ. ಮಾತನಾಡಲು ಭಯಪಡುತ್ತಿದ್ದರು. ಆದರೆ, ನಮಗೆ ಅವರ ಮೇಲೆ ಹಲ್ಲೆ ನಡೆದಿರುವುದು ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಮಗೆ ಆಘಾತವಾಯಿತು, ಸಹಿಸಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...