Homeಮುಖಪುಟ'ಜೈ ಶ್ರೀರಾಮ್' ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಿಂದ ಥಳಿತ : ಓರ್ವನ ಬಂಧನ

- Advertisement -
- Advertisement -

‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ಮೂವರು ಮುಸ್ಲಿಂ ಮಕ್ಕಳಿಗೆ ಚಪ್ಪಲಿಯಲ್ಲಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಧ್ಯ ಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಪೊಲೀಸರು ಶುಕ್ರವಾರ (ಡಿ.6) ಬಂಧಿಸಿದ್ದಾರೆ.

ರತ್ಲಂ ಜಿಲ್ಲೆಯ ಮನಕ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತ ಸಾಗರ್ ತಲಾಬ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ಹೇಳಿವೆ.

“ದೌರ್ಜನ್ಯದ ವಿಡಿಯೋ ಸೋರಿಕೆ ಮಾಡಿರುವ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ವಿಡಿಯೋದಲ್ಲಿ ಮಕ್ಕಳಿಗೆ ಥಳಿಸಿರುವ ಆರೋಪಿಯನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಹೋಮ್‌ಗೆ ಕಳುಹಿಸಲಾಗಿದೆ. ನಮ್ಮ ತಂಡ ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲಿ ಅವರನ್ನು ಬಂಧಿಸುತ್ತೇವೆ. ಘಟನೆ ಸಂಬಂಧ ಆರೋಪಿಗಳ ವಿರುದ್ದ ಬಿಎನ್‌ಎಸ್ ಸೆಕ್ಷನ್‌ಗಳಾದ 296, 115(2), 126(2), 351(2), 196, ಮತ್ತು 3(5)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿ ಅಪ್ರಾಪ್ತ ಎಂದು ಮನಕ್ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಸುರೇಂದ್ರ ಸಿಂಗ್ ಗಾರ್ಡಿಯಾ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಮೂವರು ಮಕ್ಕಳು 7, 11 ಮತ್ತು 13 ವರ್ಷ ವಯಸ್ಸಿನವರು. ಅವರು ಕ್ರಮವಾಗಿ 2, 5 ಮತ್ತು 6 ನೇ ತರಗತಿಗಳ ವಿದ್ಯಾರ್ಥಿಗಳು. ಹಲ್ಲೆ ನಡೆಸಿ ಬಂಧಿತನಾಗಿರುವ ಆರೋಪಿಗೆ 17 ವರ್ಷ ವಯಸ್ಸು ಎಂದು ಎಸ್‌ಹೆಚ್‌ಒ ಹೇಳಿದ್ದಾರೆ.

“ನಾನು, ನನ್ನ ಇಬ್ಬರು ಸ್ನೇಹಿತರ ಜೊತೆ ಸುಮಾರು ಒಂದೂವರೆ ತಿಂಗಳ ಹಿಂದೆ ಅಮೃತ್ ಸಾಗರ್ ತಲಾಬ್ ಬಳಿ ವಾಯು ವಿಹಾರಕ್ಕೆ ಹೋಗಿದ್ದೆ. ನಾವು ಅಲ್ಲಿ ಕುಳಿತಿದ್ದಾಗ ನಮ್ಮ ಬಳಿ ಇಬ್ಬರು ಬಂದು ಹೆಸರು ಕೇಳಿದರು. ನಂತರ ಅವರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಹಲ್ಲೆ ನಡೆಸಿದರು. ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯಿಸಿದರು. ಅವರಲ್ಲಿ ಒಬ್ಬ ನಮ್ಮ ಮೇಲೆ ಹಲ್ಲೆ ನಡೆಸುತ್ತಿರುವಾಗ, ಇನ್ನೋರ್ವ ವಿಡಿಯೋ ಮಾಡಿದ್ದಾರೆ. ನಂತರ ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ನಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ 13 ವರ್ಷದ ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾನೆ.

ವರದಿಗಳ ಪ್ರಕಾರ, ಒಂದು ಸುಮಾರು ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಗುರುವಾರ (ಡಿ.5) ವಿಡಿಯೋ ವೈರಲ್ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಘಟನೆ ಸಂಬಂಧ ದೂರು ದಾಖಲಿಸಲು ಇಮ್ರಾನ್ ಖೋಖರ್ ಎಂಬ ಸಾಮಾಜಿಕ ಕಾರ್ಯಕರ್ತ ಮಕ್ಕಳ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಇಮ್ರಾನ್, “ಒಂದೂವರೆ ತಿಂಗಳ ಹಿಂದೆ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಕುಡಿದ ಮತ್ತಿನಲ್ಲಿ ಮನೋರಂಜನೆಗಾಗಿ ತನ್ನ ಮೊಬೈಲ್‌ನಲ್ಲಿದ್ದ ವಿಡಿಯೋ ಸೋರಿಕೆ ಮಾಡಿದ್ದಾನೆ. ಇದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಹಲ್ಲೆಯಿಂದ ಮಕ್ಕಳು ಭಯಬೀತರಾಗಿದ್ದಾರೆ. ಆದ್ದರಿಂದ ಅವರು ಯಾರಲ್ಲೂ ಅ ವಿಷಯ ಹೇಳಿರಲಿಲ್ಲ” ಎಂದು ತಿಳಿಸಿದ್ದಾರೆ.

“ಹಲ್ಲೆಗೊಳಗಾದ ಮೂವರ ಪೈಕಿ 7 ವರ್ಷದ ಬಾಲಕ 10 ತಿಂಗಳ ಹಿಂದೆಯಷ್ಟೇ ಅಪಘಾತದಲ್ಲಿ ತನ್ನ ತಂದೆ-ತಾಯಿಯನ್ನು ಕಳೆದುಕೊಂಡಿದ್ದಾನೆ. ಆತ ತನ್ನ ಅಜ್ಜಿ ಮತ್ತು ಚಿಕ್ಕಮ್ಮನ ಆಶ್ರಯದಲ್ಲಿದ್ದಾನೆ. ಹಲ್ಲೆಯ ವಿಡಿಯೋ ಸೋರಿಕೆಯಾದ ಬಳಿಕ ಬಾಲಕ ಮನೆಯ ಕೊಠಡಿಯಲ್ಲಿ ಬಾಗಿಲು ಹಾಕಿ ಕುಳಿತಿದ್ದ. ನಾವು ಪೊಲೀಸರ ಸಹಾಯದಿಂದ ಬಾಗಿಲು ಒಡೆದು ಆತನನ್ನು ರಕ್ಷಿಸಿದ್ದೇವೆ” ಎಂದು ಇಮ್ರಾನ್ ಹೇಳಿದ್ದಾರೆ.

ಹಲ್ಲೆಗೊಳಗಾದ ಇನ್ನಿಬ್ಬರು ಮಕ್ಕಳ ಪೋಷಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ನಮ್ಮ ಮಕ್ಕಳು ಕಳೆದ ಒಂದು ತಿಂಗಳಿನಿಂದ ವಿಭಿನ್ನವಾಗಿ ವರ್ತಿಸುತ್ತಿದ್ದರು. ಶಾಲೆಗೆ ಹೋಗುತ್ತಿರಲಿಲ್ಲ. ಹೊರಗಡೆ ಆಟವಾಡಲೂ ಹೋಗುತ್ತಿರಲಿಲ್ಲ. ಯಾರೊಂದಿಗೂ ಸೇರುತ್ತಿರಲಿಲ್ಲ. ಮಾತನಾಡಲು ಭಯಪಡುತ್ತಿದ್ದರು. ಆದರೆ, ನಮಗೆ ಅವರ ಮೇಲೆ ಹಲ್ಲೆ ನಡೆದಿರುವುದು ಗೊತ್ತಿರಲಿಲ್ಲ. ವಿಡಿಯೋ ನೋಡಿದ ಮೇಲೆ ನಮಗೆ ಆಘಾತವಾಯಿತು, ಸಹಿಸಲು ಆಗಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...