Homeಮುಖಪುಟಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

ಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

- Advertisement -
- Advertisement -

ಉತ್ತರಾಖಂಡದ ಹರಿದ್ವಾರದ ಕುಂಭಮೇಳದಲ್ಲಿ ಏಪ್ರಿಲ್ 10 ರಿಂದ 14 ರವರೆಗೆ ಭಾಗವಹಿಸಿದ್ದ 1,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಆರ್‌ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ವರದಿಗಳು ಐದು ದಿನಗಳ ಅವಧಿಯಲ್ಲಿ (ಏಪ್ರಿಲ್ 10 ರಿಂದ 14ರ ವರೆಗೆ) ಹರಿದ್ವಾರದಿಂದ ದೇವಪ್ರಯಾಗ್‌ವರೆಗೆ ನಡೆಯುತ್ತಿರುವ ಕುಂಭಮೇಳದಲ್ಲಿ ಮಾಡಲಾಗಿದೆ ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಶಂಭು ಕುಮಾರ್ ಝಾ ಗುರುವಾರ ತಿಳಿಸಿದ್ದಾರೆ.

ಈಗ 1,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಹೆಚ್ಚಿನ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಲಾಗಿದೆ. ಜೊತೆಗೆ ಕುಂಭಮೇಳ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ 2,000ಕ್ಕೆ ಏರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೊರೊನಾ ನಡುವೆಯೂ ಕುಂಭಮೇಳ ಮುಂದುವರಿಯುತ್ತದೆ- ಅಧಿಕಾರಿಗಳ ಹೇಳಿಕೆ

Naga Sadhus (Hindu holy men) take a holy dip in the waters of the Ganges River on the day of Shahi Snan (royal bath) during the ongoing religious Kumbh Mela festival, in Haridwar on April 12, 2021. (Photo by Money SHARMA / AFP) (Photo by MONEY SHARMA/AFP via Getty Images)
PC: MONEY SHARMA 

ಕುಂಭಮೇಳ ಪ್ರದೇಶವು 670 ಹೆಕ್ಟೇರ್ ಪ್ರದೇಶದಲ್ಲಿ ಹರಿದ್ವಾರ, ಟೆಹ್ರಿ ಮತ್ತು ಡೆಹ್ರಾಡೂನ್ ಜಿಲ್ಲೆಗಳು ಮತ್ತು ಋಷಿಕೇಶ್ ಪ್ರದೇಶಗಳನ್ನು ಆವರಿಸಿದೆ.

ಏಪ್ರಿಲ್ 12 ರಂದು ಮತ್ತು ಏಪ್ರಿಲ್ 14 ರಂದು ನಡೆದ ಎರಡು ಶಾಹಿ ಸ್ನಾನಗಳಲ್ಲಿ ಭಾಗವಹಿಸಿದ 48.51 ಲಕ್ಷ ಜನರಲ್ಲಿ ಬಹುಪಾಲು ಜನರು ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ.

ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದರೂ, ಈಗ ನಡೆಯುತ್ತಿರುವ ಕುಂಭಮೇಳವು ಏಪ್ರಿಲ್ 30 ರವರೆಗೆ ಮುಂದುವರಿಯುತ್ತದೆ. ಕೊರೊನಾ ಸೋಂಕುಗಳು ಹೆಚ್ಚುತ್ತಿರುವ ಕಾರಣ ಅದನ್ನು ಬೇಗನೆ ನಿಲ್ಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PC: PTI

ಇದನ್ನೂ ಓದಿ: ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಬುಧವಾರ ಸಂಜೆ ವೇಳೆಗೆ ಉತ್ತರಾಖಂಡ ಸರ್ಕಾರ ಮತ್ತು ಧಾರ್ಮಿಕ ಮುಖಂಡರ ನಡುವೆ ಈ ಕಾರ್ಯಕ್ರಮವನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ನಡೆದು, ಎರಡು ವಾರಗಳ ಮುಂಚೆಯೇ ಕುಂಭಮೇಳವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ವರದಿಗಳು ಬಂದಿದ್ದವು. ಆದರೆ ಇದನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ಈ ವರ್ಷ ಕೊರೊನಾ ಸಾಂಕ್ರಾಮಿಕದ ಮಧ್ಯೆ ಧಾರ್ಮಿಕ ಕಾರ್ಯಕ್ರಮವನ್ನು ನಿಲ್ಲಿಸದಿರುವ ನಿರ್ಧಾರದ ಬಗ್ಗೆ ರಾಷ್ಟ್ರವ್ಯಾಪಿ ಟೀಕೆಗಳು ಬಂದಿವೆ. ಕುಂಭಮೇಳದಲ್ಲಿ ಸಾಮಾನ್ಯವಾಗಿ ಗರಿಷ್ಠ ಜನಸಂದಣಿಯನ್ನು ಸೇರುತ್ತಿದೆ ಇದು ಕೊರೊನಾ ಹಾಟ್‌ಸ್ಪಾಟ್ ಆಗಲಿದೆ ಮತ್ತು ಇಲ್ಲಿ ಭಾಗವಹಿಸಿದವರು ಸೂಪರ್-ಸ್ಪ್ರೆಡರ್  ಆಗಬಹುದು ಎಂದು ವಿಮರ್ಶಕರು ಅಂದಾಜಿಸಿದ್ದಾರೆ.


ಇದನ್ನೂ ಓದಿ: ಎರಡು ದಿನಗಳ ಹಿಂದೆ ಕುಂಭಮೇಳಕ್ಕೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್‌ಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...