Homeಮುಖಪುಟಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

ಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

- Advertisement -
- Advertisement -

ಉತ್ತರಾಖಂಡದ ಹರಿದ್ವಾರದ ಕುಂಭಮೇಳದಲ್ಲಿ ಏಪ್ರಿಲ್ 10 ರಿಂದ 14 ರವರೆಗೆ ಭಾಗವಹಿಸಿದ್ದ 1,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಆರ್‌ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ವರದಿಗಳು ಐದು ದಿನಗಳ ಅವಧಿಯಲ್ಲಿ (ಏಪ್ರಿಲ್ 10 ರಿಂದ 14ರ ವರೆಗೆ) ಹರಿದ್ವಾರದಿಂದ ದೇವಪ್ರಯಾಗ್‌ವರೆಗೆ ನಡೆಯುತ್ತಿರುವ ಕುಂಭಮೇಳದಲ್ಲಿ ಮಾಡಲಾಗಿದೆ ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಶಂಭು ಕುಮಾರ್ ಝಾ ಗುರುವಾರ ತಿಳಿಸಿದ್ದಾರೆ.

ಈಗ 1,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಹೆಚ್ಚಿನ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಲಾಗಿದೆ. ಜೊತೆಗೆ ಕುಂಭಮೇಳ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ 2,000ಕ್ಕೆ ಏರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೊರೊನಾ ನಡುವೆಯೂ ಕುಂಭಮೇಳ ಮುಂದುವರಿಯುತ್ತದೆ- ಅಧಿಕಾರಿಗಳ ಹೇಳಿಕೆ

Naga Sadhus (Hindu holy men) take a holy dip in the waters of the Ganges River on the day of Shahi Snan (royal bath) during the ongoing religious Kumbh Mela festival, in Haridwar on April 12, 2021. (Photo by Money SHARMA / AFP) (Photo by MONEY SHARMA/AFP via Getty Images)
PC: MONEY SHARMA 

ಕುಂಭಮೇಳ ಪ್ರದೇಶವು 670 ಹೆಕ್ಟೇರ್ ಪ್ರದೇಶದಲ್ಲಿ ಹರಿದ್ವಾರ, ಟೆಹ್ರಿ ಮತ್ತು ಡೆಹ್ರಾಡೂನ್ ಜಿಲ್ಲೆಗಳು ಮತ್ತು ಋಷಿಕೇಶ್ ಪ್ರದೇಶಗಳನ್ನು ಆವರಿಸಿದೆ.

ಏಪ್ರಿಲ್ 12 ರಂದು ಮತ್ತು ಏಪ್ರಿಲ್ 14 ರಂದು ನಡೆದ ಎರಡು ಶಾಹಿ ಸ್ನಾನಗಳಲ್ಲಿ ಭಾಗವಹಿಸಿದ 48.51 ಲಕ್ಷ ಜನರಲ್ಲಿ ಬಹುಪಾಲು ಜನರು ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ.

ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದರೂ, ಈಗ ನಡೆಯುತ್ತಿರುವ ಕುಂಭಮೇಳವು ಏಪ್ರಿಲ್ 30 ರವರೆಗೆ ಮುಂದುವರಿಯುತ್ತದೆ. ಕೊರೊನಾ ಸೋಂಕುಗಳು ಹೆಚ್ಚುತ್ತಿರುವ ಕಾರಣ ಅದನ್ನು ಬೇಗನೆ ನಿಲ್ಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PC: PTI

ಇದನ್ನೂ ಓದಿ: ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಬುಧವಾರ ಸಂಜೆ ವೇಳೆಗೆ ಉತ್ತರಾಖಂಡ ಸರ್ಕಾರ ಮತ್ತು ಧಾರ್ಮಿಕ ಮುಖಂಡರ ನಡುವೆ ಈ ಕಾರ್ಯಕ್ರಮವನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ನಡೆದು, ಎರಡು ವಾರಗಳ ಮುಂಚೆಯೇ ಕುಂಭಮೇಳವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ವರದಿಗಳು ಬಂದಿದ್ದವು. ಆದರೆ ಇದನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ಈ ವರ್ಷ ಕೊರೊನಾ ಸಾಂಕ್ರಾಮಿಕದ ಮಧ್ಯೆ ಧಾರ್ಮಿಕ ಕಾರ್ಯಕ್ರಮವನ್ನು ನಿಲ್ಲಿಸದಿರುವ ನಿರ್ಧಾರದ ಬಗ್ಗೆ ರಾಷ್ಟ್ರವ್ಯಾಪಿ ಟೀಕೆಗಳು ಬಂದಿವೆ. ಕುಂಭಮೇಳದಲ್ಲಿ ಸಾಮಾನ್ಯವಾಗಿ ಗರಿಷ್ಠ ಜನಸಂದಣಿಯನ್ನು ಸೇರುತ್ತಿದೆ ಇದು ಕೊರೊನಾ ಹಾಟ್‌ಸ್ಪಾಟ್ ಆಗಲಿದೆ ಮತ್ತು ಇಲ್ಲಿ ಭಾಗವಹಿಸಿದವರು ಸೂಪರ್-ಸ್ಪ್ರೆಡರ್  ಆಗಬಹುದು ಎಂದು ವಿಮರ್ಶಕರು ಅಂದಾಜಿಸಿದ್ದಾರೆ.


ಇದನ್ನೂ ಓದಿ: ಎರಡು ದಿನಗಳ ಹಿಂದೆ ಕುಂಭಮೇಳಕ್ಕೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್‌ಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...