Homeಕರ್ನಾಟಕಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನೆರೆ ಬಂದು 6 ತಿಂಗಳು ಕಳೆದಿದ್ದರೂ ಹಾನಿಗೀಡಾದ 7,777 ಶಾಲೆಗಳ ದುರಸ್ತಿಯಾಗಿಲ್ಲ. ಮಕ್ಕಳು ಶಾಲೆ ಇಲ್ಲದೆ ಜಗಲಿ, ಮರದ ಕೆಳಗೆ, ಶೆಡ್ ನಲ್ಲಿ ಪಾಠ ಕೇಳುವಂತಾಗಿದೆ.‌ ಹೀಗಾದರೆ ಮಕ್ಕಳ ಭವಿಷ್ಯದ ಗತಿಯೇನು?‌” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

“ಸಚಿವ ಸುರೇಶ್ ಕುಮಾರ್ ದುಡ್ಡಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿ ಜಾರಿಕೊಂಡಿದ್ದಾರೆ. ಹುಣಸೂರಿನಲ್ಲಿ 3500 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮಸ್ಥರೇ ಶೆಡ್ ಹಾಕಿ ಶಾಲೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಒಂದು ಗ್ರಾಮದ ಶಾಲೆ ಇದುವರೆಗೂ ತೆರೆದೇ ಇಲ್ಲ. ಸುರೇಶ್ ಕುಮಾರ್ ಅವರೇ ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದು ಹೇಳಿದ್ದಾರೆ.

“ಪ್ರವಾಹದಿಂದ ಮೀನುಗಾರರ ದೋಣಿಗೆ ಮತ್ತು ಬಲೆಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಅವರಿಗೆ ಪರಿಹಾರ ಕೊಡಲು ಅವಕಾಶವಿದ್ದರೂ ಅಧಿಕಾರಿಗಳು ಲೈಸೆನ್ಸ್ ಇಲ್ಲ ಎಂಬ ಕಾರಣ ನೀಡಿ ಪರಿಹಾರ ನಿರಾಕರಿಸಿರುವುದು ಸರಿಯಲ್ಲ, ಅವರಿಗೆ ತಕ್ಷಣ ಪರಿಹಾರ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಕೃಷಿ ಭೂಮಿ ಕಳೆದುಕೊಂಡವರಿಗೆ ರೂ.1129 ಕೋಟಿ ಪರಿಹಾರ ನೀಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಅದು ಯಾವ ರೈತರಿಗೂ ತಲುಪಿಲ್ಲ ಎಂದರಲ್ಲದೆ ಇದಕ್ಕಾಗಿ ನಿತ್ಯ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದರು. ರಾಮದುರ್ಗದ 32 ಗ್ರಾಮ, 8 ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಪರಿಹಾರ ಸಿಗಲಿಲ್ಲ ಎಂದು ಅಸಿಸ್ಟಂಟ್ ಕಮಿಷನರ್‌ಗೆ ಜನರು ದಿಗ್ಭಂದನ ಹಾಕಿದ್ದರು” ಎಂದರು.

“ಪ್ರವಾಹದಲ್ಲಿ ಹಾನಿಗೊಳಗಾದ 1.24 ಲಕ್ಷ ಮನೆಗಳಿಗೆ ಪರಿಹಾರದ ರೂಪದಲ್ಲಿ ರೂ.800 ಕೋಟಿ ನೀಡಿದ್ದೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಹೇಳಿದೆ. ಆದರೆ ಇದೇ ಸರ್ಕಾರ ಹಿಂದೆ ನೀಡಿದ್ದ ಜಾಹಿರಾತಿನಲ್ಲಿ 2 ಲಕ್ಷದ 57 ಸಾವಿರ ಮನೆಗಳು ಹಾನಿಗೊಳಗಾಗಿವೆ ಎಂದು ಹೇಳಿತ್ತು. ಹಾಗಾದರೆ ಉಳಿದ ಮನೆಗಳಿಗೆ ಏಕೆ ಪರಿಹಾರ ನೀಡಿಲ್ಲ? ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಪ್ರವಾಹ ಬಂದು ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ನಾಶವಾಯಿತು, ಸಾವಿರಾರು ಮನೆಗಳು ನೆಲಕ್ಕುರುಳಿದವು, ಜನ ಜಾನುವಾರುಗಳ ಜೀವ ಹಾನಿಯಾಯಿತು. ಇದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಯಾಕೆ ನೀಡಿಲ್ಲ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿಸರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವೂ ದೆಹಲಿ, ಮಹಾರಾಷ್ಟ್ರದ ನಂತರ 3ನೇ ಸ್ಥಾನದಲ್ಲಿದೆ. ಕೇಂದ್ರ ಬಜೆಟ್‌‌ನಲ್ಲಿ ನೀಡಬೇಕಾಗಿದ್ದ ಅನುದಾನದಲ್ಲಿ ರೂ.17000 ಕೋಟಿ ಕಡಿಮೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಜಿಎಸ್‌ಟಿ ಪಾಲು, ಪ್ರವಾಹ ಪರಿಹಾರ ನಿಧಿ ಸಮರ್ಪಕವಾಗಿ ಬಂದಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಆಗುವುದು ಹೇಗೆ? ಬಿಜೆಪಿ ಸರ್ಕಾರ ಬಂದು 7 ತಿಂಗಳಾಗಿದೆ. ಯಾವುದಾದರೂ ಒಂದು ಹೊಸ ಜನಪರ ಯೋಜನೆ ಆರಂಭಿಸಿದೆಯೇ? ಅರಣ್ಯ ಹೆಚ್ಚಳ ತಮ್ಮ ಸಾಧನೆ ಎಂದು ಸಚಿವರೊಬ್ಬರು ತಮ್ಮ ಭಾಷಣದಲ್ಲಿ ಹೇಳಿದ್ದರು, ಬರೀ ಏಳೇ ತಿಂಗಳಲ್ಲೇ ಇವರು ಅರಣ್ಯ ಬೆಳೆಸಿದರೇ? ಹಾಲು ಉತ್ಪಾದನೆ ಹೆಚ್ಚಳ, ಬಂಡವಾಳ ಹೂಡಿಕೆ ಇವೆಲ್ಲ ಹಿಂದಿನ ನಮ್ಮ ಸರ್ಕಾರದ ಸಾಧನೆಗಳು” ಎಂದರು.

“ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ನೀಡುವ ಯೋಜನೆ ‘ಕ್ಷೀರಧಾರೆ’ ಪ್ರಾರಂಭಿಸಿದ್ದು ನಾವು. ಒಂದು ದಿನಕ್ಕೆ‌ ರೂ.4 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕಾರಣದಿಂದ ಇಂದು ನಿತ್ಯ 80 ಲಕ್ಷ ಲೀಟರ್ ಗೂ ಅಧಿಕ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರೋತ್ಸಾಹಧನ ನೀಡುವ ಮುನ್ನ ನಿತ್ಯ 55 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆಯಾಗುತ್ತಿತ್ತು. ಈಗ ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ತಲುಪಿದೆ ಎಂದರೆ ಅದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರವೇ ಹೊರತು ಈಗಿನ ಬಿಜೆಪಿ ಸರ್ಕಾರವಲ್ಲ” ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕರಕ್ಕೆ ನೆನಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...