Homeಕರ್ನಾಟಕಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನೆರೆ ಬಂದು 6 ತಿಂಗಳು ಕಳೆದಿದ್ದರೂ ಹಾನಿಗೀಡಾದ 7,777 ಶಾಲೆಗಳ ದುರಸ್ತಿಯಾಗಿಲ್ಲ. ಮಕ್ಕಳು ಶಾಲೆ ಇಲ್ಲದೆ ಜಗಲಿ, ಮರದ ಕೆಳಗೆ, ಶೆಡ್ ನಲ್ಲಿ ಪಾಠ ಕೇಳುವಂತಾಗಿದೆ.‌ ಹೀಗಾದರೆ ಮಕ್ಕಳ ಭವಿಷ್ಯದ ಗತಿಯೇನು?‌” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

“ಸಚಿವ ಸುರೇಶ್ ಕುಮಾರ್ ದುಡ್ಡಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿ ಜಾರಿಕೊಂಡಿದ್ದಾರೆ. ಹುಣಸೂರಿನಲ್ಲಿ 3500 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮಸ್ಥರೇ ಶೆಡ್ ಹಾಕಿ ಶಾಲೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಒಂದು ಗ್ರಾಮದ ಶಾಲೆ ಇದುವರೆಗೂ ತೆರೆದೇ ಇಲ್ಲ. ಸುರೇಶ್ ಕುಮಾರ್ ಅವರೇ ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದು ಹೇಳಿದ್ದಾರೆ.

“ಪ್ರವಾಹದಿಂದ ಮೀನುಗಾರರ ದೋಣಿಗೆ ಮತ್ತು ಬಲೆಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಅವರಿಗೆ ಪರಿಹಾರ ಕೊಡಲು ಅವಕಾಶವಿದ್ದರೂ ಅಧಿಕಾರಿಗಳು ಲೈಸೆನ್ಸ್ ಇಲ್ಲ ಎಂಬ ಕಾರಣ ನೀಡಿ ಪರಿಹಾರ ನಿರಾಕರಿಸಿರುವುದು ಸರಿಯಲ್ಲ, ಅವರಿಗೆ ತಕ್ಷಣ ಪರಿಹಾರ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಕೃಷಿ ಭೂಮಿ ಕಳೆದುಕೊಂಡವರಿಗೆ ರೂ.1129 ಕೋಟಿ ಪರಿಹಾರ ನೀಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಅದು ಯಾವ ರೈತರಿಗೂ ತಲುಪಿಲ್ಲ ಎಂದರಲ್ಲದೆ ಇದಕ್ಕಾಗಿ ನಿತ್ಯ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದರು. ರಾಮದುರ್ಗದ 32 ಗ್ರಾಮ, 8 ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಪರಿಹಾರ ಸಿಗಲಿಲ್ಲ ಎಂದು ಅಸಿಸ್ಟಂಟ್ ಕಮಿಷನರ್‌ಗೆ ಜನರು ದಿಗ್ಭಂದನ ಹಾಕಿದ್ದರು” ಎಂದರು.

“ಪ್ರವಾಹದಲ್ಲಿ ಹಾನಿಗೊಳಗಾದ 1.24 ಲಕ್ಷ ಮನೆಗಳಿಗೆ ಪರಿಹಾರದ ರೂಪದಲ್ಲಿ ರೂ.800 ಕೋಟಿ ನೀಡಿದ್ದೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಹೇಳಿದೆ. ಆದರೆ ಇದೇ ಸರ್ಕಾರ ಹಿಂದೆ ನೀಡಿದ್ದ ಜಾಹಿರಾತಿನಲ್ಲಿ 2 ಲಕ್ಷದ 57 ಸಾವಿರ ಮನೆಗಳು ಹಾನಿಗೊಳಗಾಗಿವೆ ಎಂದು ಹೇಳಿತ್ತು. ಹಾಗಾದರೆ ಉಳಿದ ಮನೆಗಳಿಗೆ ಏಕೆ ಪರಿಹಾರ ನೀಡಿಲ್ಲ? ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಪ್ರವಾಹ ಬಂದು ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ನಾಶವಾಯಿತು, ಸಾವಿರಾರು ಮನೆಗಳು ನೆಲಕ್ಕುರುಳಿದವು, ಜನ ಜಾನುವಾರುಗಳ ಜೀವ ಹಾನಿಯಾಯಿತು. ಇದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಯಾಕೆ ನೀಡಿಲ್ಲ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿಸರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವೂ ದೆಹಲಿ, ಮಹಾರಾಷ್ಟ್ರದ ನಂತರ 3ನೇ ಸ್ಥಾನದಲ್ಲಿದೆ. ಕೇಂದ್ರ ಬಜೆಟ್‌‌ನಲ್ಲಿ ನೀಡಬೇಕಾಗಿದ್ದ ಅನುದಾನದಲ್ಲಿ ರೂ.17000 ಕೋಟಿ ಕಡಿಮೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಜಿಎಸ್‌ಟಿ ಪಾಲು, ಪ್ರವಾಹ ಪರಿಹಾರ ನಿಧಿ ಸಮರ್ಪಕವಾಗಿ ಬಂದಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಆಗುವುದು ಹೇಗೆ? ಬಿಜೆಪಿ ಸರ್ಕಾರ ಬಂದು 7 ತಿಂಗಳಾಗಿದೆ. ಯಾವುದಾದರೂ ಒಂದು ಹೊಸ ಜನಪರ ಯೋಜನೆ ಆರಂಭಿಸಿದೆಯೇ? ಅರಣ್ಯ ಹೆಚ್ಚಳ ತಮ್ಮ ಸಾಧನೆ ಎಂದು ಸಚಿವರೊಬ್ಬರು ತಮ್ಮ ಭಾಷಣದಲ್ಲಿ ಹೇಳಿದ್ದರು, ಬರೀ ಏಳೇ ತಿಂಗಳಲ್ಲೇ ಇವರು ಅರಣ್ಯ ಬೆಳೆಸಿದರೇ? ಹಾಲು ಉತ್ಪಾದನೆ ಹೆಚ್ಚಳ, ಬಂಡವಾಳ ಹೂಡಿಕೆ ಇವೆಲ್ಲ ಹಿಂದಿನ ನಮ್ಮ ಸರ್ಕಾರದ ಸಾಧನೆಗಳು” ಎಂದರು.

“ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ನೀಡುವ ಯೋಜನೆ ‘ಕ್ಷೀರಧಾರೆ’ ಪ್ರಾರಂಭಿಸಿದ್ದು ನಾವು. ಒಂದು ದಿನಕ್ಕೆ‌ ರೂ.4 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕಾರಣದಿಂದ ಇಂದು ನಿತ್ಯ 80 ಲಕ್ಷ ಲೀಟರ್ ಗೂ ಅಧಿಕ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರೋತ್ಸಾಹಧನ ನೀಡುವ ಮುನ್ನ ನಿತ್ಯ 55 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆಯಾಗುತ್ತಿತ್ತು. ಈಗ ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ತಲುಪಿದೆ ಎಂದರೆ ಅದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರವೇ ಹೊರತು ಈಗಿನ ಬಿಜೆಪಿ ಸರ್ಕಾರವಲ್ಲ” ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕರಕ್ಕೆ ನೆನಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...