Homeಕರ್ನಾಟಕಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನೆರೆ ಬಂದು 6 ತಿಂಗಳು ಕಳೆದಿದ್ದರೂ ಹಾನಿಗೀಡಾದ 7,777 ಶಾಲೆಗಳ ದುರಸ್ತಿಯಾಗಿಲ್ಲ. ಮಕ್ಕಳು ಶಾಲೆ ಇಲ್ಲದೆ ಜಗಲಿ, ಮರದ ಕೆಳಗೆ, ಶೆಡ್ ನಲ್ಲಿ ಪಾಠ ಕೇಳುವಂತಾಗಿದೆ.‌ ಹೀಗಾದರೆ ಮಕ್ಕಳ ಭವಿಷ್ಯದ ಗತಿಯೇನು?‌” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

“ಸಚಿವ ಸುರೇಶ್ ಕುಮಾರ್ ದುಡ್ಡಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿ ಜಾರಿಕೊಂಡಿದ್ದಾರೆ. ಹುಣಸೂರಿನಲ್ಲಿ 3500 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮಸ್ಥರೇ ಶೆಡ್ ಹಾಕಿ ಶಾಲೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಒಂದು ಗ್ರಾಮದ ಶಾಲೆ ಇದುವರೆಗೂ ತೆರೆದೇ ಇಲ್ಲ. ಸುರೇಶ್ ಕುಮಾರ್ ಅವರೇ ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದು ಹೇಳಿದ್ದಾರೆ.

“ಪ್ರವಾಹದಿಂದ ಮೀನುಗಾರರ ದೋಣಿಗೆ ಮತ್ತು ಬಲೆಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಅವರಿಗೆ ಪರಿಹಾರ ಕೊಡಲು ಅವಕಾಶವಿದ್ದರೂ ಅಧಿಕಾರಿಗಳು ಲೈಸೆನ್ಸ್ ಇಲ್ಲ ಎಂಬ ಕಾರಣ ನೀಡಿ ಪರಿಹಾರ ನಿರಾಕರಿಸಿರುವುದು ಸರಿಯಲ್ಲ, ಅವರಿಗೆ ತಕ್ಷಣ ಪರಿಹಾರ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಕೃಷಿ ಭೂಮಿ ಕಳೆದುಕೊಂಡವರಿಗೆ ರೂ.1129 ಕೋಟಿ ಪರಿಹಾರ ನೀಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಅದು ಯಾವ ರೈತರಿಗೂ ತಲುಪಿಲ್ಲ ಎಂದರಲ್ಲದೆ ಇದಕ್ಕಾಗಿ ನಿತ್ಯ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದರು. ರಾಮದುರ್ಗದ 32 ಗ್ರಾಮ, 8 ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಪರಿಹಾರ ಸಿಗಲಿಲ್ಲ ಎಂದು ಅಸಿಸ್ಟಂಟ್ ಕಮಿಷನರ್‌ಗೆ ಜನರು ದಿಗ್ಭಂದನ ಹಾಕಿದ್ದರು” ಎಂದರು.

“ಪ್ರವಾಹದಲ್ಲಿ ಹಾನಿಗೊಳಗಾದ 1.24 ಲಕ್ಷ ಮನೆಗಳಿಗೆ ಪರಿಹಾರದ ರೂಪದಲ್ಲಿ ರೂ.800 ಕೋಟಿ ನೀಡಿದ್ದೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಹೇಳಿದೆ. ಆದರೆ ಇದೇ ಸರ್ಕಾರ ಹಿಂದೆ ನೀಡಿದ್ದ ಜಾಹಿರಾತಿನಲ್ಲಿ 2 ಲಕ್ಷದ 57 ಸಾವಿರ ಮನೆಗಳು ಹಾನಿಗೊಳಗಾಗಿವೆ ಎಂದು ಹೇಳಿತ್ತು. ಹಾಗಾದರೆ ಉಳಿದ ಮನೆಗಳಿಗೆ ಏಕೆ ಪರಿಹಾರ ನೀಡಿಲ್ಲ? ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಪ್ರವಾಹ ಬಂದು ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ನಾಶವಾಯಿತು, ಸಾವಿರಾರು ಮನೆಗಳು ನೆಲಕ್ಕುರುಳಿದವು, ಜನ ಜಾನುವಾರುಗಳ ಜೀವ ಹಾನಿಯಾಯಿತು. ಇದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಯಾಕೆ ನೀಡಿಲ್ಲ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿಸರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವೂ ದೆಹಲಿ, ಮಹಾರಾಷ್ಟ್ರದ ನಂತರ 3ನೇ ಸ್ಥಾನದಲ್ಲಿದೆ. ಕೇಂದ್ರ ಬಜೆಟ್‌‌ನಲ್ಲಿ ನೀಡಬೇಕಾಗಿದ್ದ ಅನುದಾನದಲ್ಲಿ ರೂ.17000 ಕೋಟಿ ಕಡಿಮೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಜಿಎಸ್‌ಟಿ ಪಾಲು, ಪ್ರವಾಹ ಪರಿಹಾರ ನಿಧಿ ಸಮರ್ಪಕವಾಗಿ ಬಂದಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಆಗುವುದು ಹೇಗೆ? ಬಿಜೆಪಿ ಸರ್ಕಾರ ಬಂದು 7 ತಿಂಗಳಾಗಿದೆ. ಯಾವುದಾದರೂ ಒಂದು ಹೊಸ ಜನಪರ ಯೋಜನೆ ಆರಂಭಿಸಿದೆಯೇ? ಅರಣ್ಯ ಹೆಚ್ಚಳ ತಮ್ಮ ಸಾಧನೆ ಎಂದು ಸಚಿವರೊಬ್ಬರು ತಮ್ಮ ಭಾಷಣದಲ್ಲಿ ಹೇಳಿದ್ದರು, ಬರೀ ಏಳೇ ತಿಂಗಳಲ್ಲೇ ಇವರು ಅರಣ್ಯ ಬೆಳೆಸಿದರೇ? ಹಾಲು ಉತ್ಪಾದನೆ ಹೆಚ್ಚಳ, ಬಂಡವಾಳ ಹೂಡಿಕೆ ಇವೆಲ್ಲ ಹಿಂದಿನ ನಮ್ಮ ಸರ್ಕಾರದ ಸಾಧನೆಗಳು” ಎಂದರು.

“ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ನೀಡುವ ಯೋಜನೆ ‘ಕ್ಷೀರಧಾರೆ’ ಪ್ರಾರಂಭಿಸಿದ್ದು ನಾವು. ಒಂದು ದಿನಕ್ಕೆ‌ ರೂ.4 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕಾರಣದಿಂದ ಇಂದು ನಿತ್ಯ 80 ಲಕ್ಷ ಲೀಟರ್ ಗೂ ಅಧಿಕ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರೋತ್ಸಾಹಧನ ನೀಡುವ ಮುನ್ನ ನಿತ್ಯ 55 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆಯಾಗುತ್ತಿತ್ತು. ಈಗ ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ತಲುಪಿದೆ ಎಂದರೆ ಅದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರವೇ ಹೊರತು ಈಗಿನ ಬಿಜೆಪಿ ಸರ್ಕಾರವಲ್ಲ” ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕರಕ್ಕೆ ನೆನಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...