Homeಕರ್ನಾಟಕಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನೆರೆ ಬಂದು 6 ತಿಂಗಳು ಕಳೆದಿದ್ದರೂ ಹಾನಿಗೀಡಾದ 7,777 ಶಾಲೆಗಳ ದುರಸ್ತಿಯಾಗಿಲ್ಲ. ಮಕ್ಕಳು ಶಾಲೆ ಇಲ್ಲದೆ ಜಗಲಿ, ಮರದ ಕೆಳಗೆ, ಶೆಡ್ ನಲ್ಲಿ ಪಾಠ ಕೇಳುವಂತಾಗಿದೆ.‌ ಹೀಗಾದರೆ ಮಕ್ಕಳ ಭವಿಷ್ಯದ ಗತಿಯೇನು?‌” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

“ಸಚಿವ ಸುರೇಶ್ ಕುಮಾರ್ ದುಡ್ಡಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿ ಜಾರಿಕೊಂಡಿದ್ದಾರೆ. ಹುಣಸೂರಿನಲ್ಲಿ 3500 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮಸ್ಥರೇ ಶೆಡ್ ಹಾಕಿ ಶಾಲೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಒಂದು ಗ್ರಾಮದ ಶಾಲೆ ಇದುವರೆಗೂ ತೆರೆದೇ ಇಲ್ಲ. ಸುರೇಶ್ ಕುಮಾರ್ ಅವರೇ ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದು ಹೇಳಿದ್ದಾರೆ.

“ಪ್ರವಾಹದಿಂದ ಮೀನುಗಾರರ ದೋಣಿಗೆ ಮತ್ತು ಬಲೆಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಅವರಿಗೆ ಪರಿಹಾರ ಕೊಡಲು ಅವಕಾಶವಿದ್ದರೂ ಅಧಿಕಾರಿಗಳು ಲೈಸೆನ್ಸ್ ಇಲ್ಲ ಎಂಬ ಕಾರಣ ನೀಡಿ ಪರಿಹಾರ ನಿರಾಕರಿಸಿರುವುದು ಸರಿಯಲ್ಲ, ಅವರಿಗೆ ತಕ್ಷಣ ಪರಿಹಾರ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಕೃಷಿ ಭೂಮಿ ಕಳೆದುಕೊಂಡವರಿಗೆ ರೂ.1129 ಕೋಟಿ ಪರಿಹಾರ ನೀಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಅದು ಯಾವ ರೈತರಿಗೂ ತಲುಪಿಲ್ಲ ಎಂದರಲ್ಲದೆ ಇದಕ್ಕಾಗಿ ನಿತ್ಯ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದರು. ರಾಮದುರ್ಗದ 32 ಗ್ರಾಮ, 8 ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಪರಿಹಾರ ಸಿಗಲಿಲ್ಲ ಎಂದು ಅಸಿಸ್ಟಂಟ್ ಕಮಿಷನರ್‌ಗೆ ಜನರು ದಿಗ್ಭಂದನ ಹಾಕಿದ್ದರು” ಎಂದರು.

“ಪ್ರವಾಹದಲ್ಲಿ ಹಾನಿಗೊಳಗಾದ 1.24 ಲಕ್ಷ ಮನೆಗಳಿಗೆ ಪರಿಹಾರದ ರೂಪದಲ್ಲಿ ರೂ.800 ಕೋಟಿ ನೀಡಿದ್ದೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಹೇಳಿದೆ. ಆದರೆ ಇದೇ ಸರ್ಕಾರ ಹಿಂದೆ ನೀಡಿದ್ದ ಜಾಹಿರಾತಿನಲ್ಲಿ 2 ಲಕ್ಷದ 57 ಸಾವಿರ ಮನೆಗಳು ಹಾನಿಗೊಳಗಾಗಿವೆ ಎಂದು ಹೇಳಿತ್ತು. ಹಾಗಾದರೆ ಉಳಿದ ಮನೆಗಳಿಗೆ ಏಕೆ ಪರಿಹಾರ ನೀಡಿಲ್ಲ? ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಪ್ರವಾಹ ಬಂದು ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ನಾಶವಾಯಿತು, ಸಾವಿರಾರು ಮನೆಗಳು ನೆಲಕ್ಕುರುಳಿದವು, ಜನ ಜಾನುವಾರುಗಳ ಜೀವ ಹಾನಿಯಾಯಿತು. ಇದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಯಾಕೆ ನೀಡಿಲ್ಲ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿಸರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವೂ ದೆಹಲಿ, ಮಹಾರಾಷ್ಟ್ರದ ನಂತರ 3ನೇ ಸ್ಥಾನದಲ್ಲಿದೆ. ಕೇಂದ್ರ ಬಜೆಟ್‌‌ನಲ್ಲಿ ನೀಡಬೇಕಾಗಿದ್ದ ಅನುದಾನದಲ್ಲಿ ರೂ.17000 ಕೋಟಿ ಕಡಿಮೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಜಿಎಸ್‌ಟಿ ಪಾಲು, ಪ್ರವಾಹ ಪರಿಹಾರ ನಿಧಿ ಸಮರ್ಪಕವಾಗಿ ಬಂದಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಆಗುವುದು ಹೇಗೆ? ಬಿಜೆಪಿ ಸರ್ಕಾರ ಬಂದು 7 ತಿಂಗಳಾಗಿದೆ. ಯಾವುದಾದರೂ ಒಂದು ಹೊಸ ಜನಪರ ಯೋಜನೆ ಆರಂಭಿಸಿದೆಯೇ? ಅರಣ್ಯ ಹೆಚ್ಚಳ ತಮ್ಮ ಸಾಧನೆ ಎಂದು ಸಚಿವರೊಬ್ಬರು ತಮ್ಮ ಭಾಷಣದಲ್ಲಿ ಹೇಳಿದ್ದರು, ಬರೀ ಏಳೇ ತಿಂಗಳಲ್ಲೇ ಇವರು ಅರಣ್ಯ ಬೆಳೆಸಿದರೇ? ಹಾಲು ಉತ್ಪಾದನೆ ಹೆಚ್ಚಳ, ಬಂಡವಾಳ ಹೂಡಿಕೆ ಇವೆಲ್ಲ ಹಿಂದಿನ ನಮ್ಮ ಸರ್ಕಾರದ ಸಾಧನೆಗಳು” ಎಂದರು.

“ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ನೀಡುವ ಯೋಜನೆ ‘ಕ್ಷೀರಧಾರೆ’ ಪ್ರಾರಂಭಿಸಿದ್ದು ನಾವು. ಒಂದು ದಿನಕ್ಕೆ‌ ರೂ.4 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕಾರಣದಿಂದ ಇಂದು ನಿತ್ಯ 80 ಲಕ್ಷ ಲೀಟರ್ ಗೂ ಅಧಿಕ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರೋತ್ಸಾಹಧನ ನೀಡುವ ಮುನ್ನ ನಿತ್ಯ 55 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆಯಾಗುತ್ತಿತ್ತು. ಈಗ ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ತಲುಪಿದೆ ಎಂದರೆ ಅದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರವೇ ಹೊರತು ಈಗಿನ ಬಿಜೆಪಿ ಸರ್ಕಾರವಲ್ಲ” ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕರಕ್ಕೆ ನೆನಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....