Homeಕರ್ನಾಟಕಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನೆರೆ ಬಂದು 6 ತಿಂಗಳು ಕಳೆದಿದ್ದರೂ ಹಾನಿಗೀಡಾದ 7,777 ಶಾಲೆಗಳ ದುರಸ್ತಿಯಾಗಿಲ್ಲ. ಮಕ್ಕಳು ಶಾಲೆ ಇಲ್ಲದೆ ಜಗಲಿ, ಮರದ ಕೆಳಗೆ, ಶೆಡ್ ನಲ್ಲಿ ಪಾಠ ಕೇಳುವಂತಾಗಿದೆ.‌ ಹೀಗಾದರೆ ಮಕ್ಕಳ ಭವಿಷ್ಯದ ಗತಿಯೇನು?‌” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

“ಸಚಿವ ಸುರೇಶ್ ಕುಮಾರ್ ದುಡ್ಡಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿ ಜಾರಿಕೊಂಡಿದ್ದಾರೆ. ಹುಣಸೂರಿನಲ್ಲಿ 3500 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮಸ್ಥರೇ ಶೆಡ್ ಹಾಕಿ ಶಾಲೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಒಂದು ಗ್ರಾಮದ ಶಾಲೆ ಇದುವರೆಗೂ ತೆರೆದೇ ಇಲ್ಲ. ಸುರೇಶ್ ಕುಮಾರ್ ಅವರೇ ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದು ಹೇಳಿದ್ದಾರೆ.

“ಪ್ರವಾಹದಿಂದ ಮೀನುಗಾರರ ದೋಣಿಗೆ ಮತ್ತು ಬಲೆಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಅವರಿಗೆ ಪರಿಹಾರ ಕೊಡಲು ಅವಕಾಶವಿದ್ದರೂ ಅಧಿಕಾರಿಗಳು ಲೈಸೆನ್ಸ್ ಇಲ್ಲ ಎಂಬ ಕಾರಣ ನೀಡಿ ಪರಿಹಾರ ನಿರಾಕರಿಸಿರುವುದು ಸರಿಯಲ್ಲ, ಅವರಿಗೆ ತಕ್ಷಣ ಪರಿಹಾರ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಕೃಷಿ ಭೂಮಿ ಕಳೆದುಕೊಂಡವರಿಗೆ ರೂ.1129 ಕೋಟಿ ಪರಿಹಾರ ನೀಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಅದು ಯಾವ ರೈತರಿಗೂ ತಲುಪಿಲ್ಲ ಎಂದರಲ್ಲದೆ ಇದಕ್ಕಾಗಿ ನಿತ್ಯ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದರು. ರಾಮದುರ್ಗದ 32 ಗ್ರಾಮ, 8 ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಪರಿಹಾರ ಸಿಗಲಿಲ್ಲ ಎಂದು ಅಸಿಸ್ಟಂಟ್ ಕಮಿಷನರ್‌ಗೆ ಜನರು ದಿಗ್ಭಂದನ ಹಾಕಿದ್ದರು” ಎಂದರು.

“ಪ್ರವಾಹದಲ್ಲಿ ಹಾನಿಗೊಳಗಾದ 1.24 ಲಕ್ಷ ಮನೆಗಳಿಗೆ ಪರಿಹಾರದ ರೂಪದಲ್ಲಿ ರೂ.800 ಕೋಟಿ ನೀಡಿದ್ದೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಹೇಳಿದೆ. ಆದರೆ ಇದೇ ಸರ್ಕಾರ ಹಿಂದೆ ನೀಡಿದ್ದ ಜಾಹಿರಾತಿನಲ್ಲಿ 2 ಲಕ್ಷದ 57 ಸಾವಿರ ಮನೆಗಳು ಹಾನಿಗೊಳಗಾಗಿವೆ ಎಂದು ಹೇಳಿತ್ತು. ಹಾಗಾದರೆ ಉಳಿದ ಮನೆಗಳಿಗೆ ಏಕೆ ಪರಿಹಾರ ನೀಡಿಲ್ಲ? ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಪ್ರವಾಹ ಬಂದು ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ನಾಶವಾಯಿತು, ಸಾವಿರಾರು ಮನೆಗಳು ನೆಲಕ್ಕುರುಳಿದವು, ಜನ ಜಾನುವಾರುಗಳ ಜೀವ ಹಾನಿಯಾಯಿತು. ಇದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಯಾಕೆ ನೀಡಿಲ್ಲ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿಸರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವೂ ದೆಹಲಿ, ಮಹಾರಾಷ್ಟ್ರದ ನಂತರ 3ನೇ ಸ್ಥಾನದಲ್ಲಿದೆ. ಕೇಂದ್ರ ಬಜೆಟ್‌‌ನಲ್ಲಿ ನೀಡಬೇಕಾಗಿದ್ದ ಅನುದಾನದಲ್ಲಿ ರೂ.17000 ಕೋಟಿ ಕಡಿಮೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಜಿಎಸ್‌ಟಿ ಪಾಲು, ಪ್ರವಾಹ ಪರಿಹಾರ ನಿಧಿ ಸಮರ್ಪಕವಾಗಿ ಬಂದಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಆಗುವುದು ಹೇಗೆ? ಬಿಜೆಪಿ ಸರ್ಕಾರ ಬಂದು 7 ತಿಂಗಳಾಗಿದೆ. ಯಾವುದಾದರೂ ಒಂದು ಹೊಸ ಜನಪರ ಯೋಜನೆ ಆರಂಭಿಸಿದೆಯೇ? ಅರಣ್ಯ ಹೆಚ್ಚಳ ತಮ್ಮ ಸಾಧನೆ ಎಂದು ಸಚಿವರೊಬ್ಬರು ತಮ್ಮ ಭಾಷಣದಲ್ಲಿ ಹೇಳಿದ್ದರು, ಬರೀ ಏಳೇ ತಿಂಗಳಲ್ಲೇ ಇವರು ಅರಣ್ಯ ಬೆಳೆಸಿದರೇ? ಹಾಲು ಉತ್ಪಾದನೆ ಹೆಚ್ಚಳ, ಬಂಡವಾಳ ಹೂಡಿಕೆ ಇವೆಲ್ಲ ಹಿಂದಿನ ನಮ್ಮ ಸರ್ಕಾರದ ಸಾಧನೆಗಳು” ಎಂದರು.

“ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ನೀಡುವ ಯೋಜನೆ ‘ಕ್ಷೀರಧಾರೆ’ ಪ್ರಾರಂಭಿಸಿದ್ದು ನಾವು. ಒಂದು ದಿನಕ್ಕೆ‌ ರೂ.4 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕಾರಣದಿಂದ ಇಂದು ನಿತ್ಯ 80 ಲಕ್ಷ ಲೀಟರ್ ಗೂ ಅಧಿಕ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರೋತ್ಸಾಹಧನ ನೀಡುವ ಮುನ್ನ ನಿತ್ಯ 55 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆಯಾಗುತ್ತಿತ್ತು. ಈಗ ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ತಲುಪಿದೆ ಎಂದರೆ ಅದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರವೇ ಹೊರತು ಈಗಿನ ಬಿಜೆಪಿ ಸರ್ಕಾರವಲ್ಲ” ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕರಕ್ಕೆ ನೆನಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...