Homeಕರ್ನಾಟಕಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸದನದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪ್ರವಾಹ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

“ರಾಜ್ಯದಲ್ಲಿ ನೆರೆ ಬಂದು 6 ತಿಂಗಳು ಕಳೆದಿದ್ದರೂ ಹಾನಿಗೀಡಾದ 7,777 ಶಾಲೆಗಳ ದುರಸ್ತಿಯಾಗಿಲ್ಲ. ಮಕ್ಕಳು ಶಾಲೆ ಇಲ್ಲದೆ ಜಗಲಿ, ಮರದ ಕೆಳಗೆ, ಶೆಡ್ ನಲ್ಲಿ ಪಾಠ ಕೇಳುವಂತಾಗಿದೆ.‌ ಹೀಗಾದರೆ ಮಕ್ಕಳ ಭವಿಷ್ಯದ ಗತಿಯೇನು?‌” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

“ಸಚಿವ ಸುರೇಶ್ ಕುಮಾರ್ ದುಡ್ಡಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿ ಜಾರಿಕೊಂಡಿದ್ದಾರೆ. ಹುಣಸೂರಿನಲ್ಲಿ 3500 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿದ್ದಾರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮಸ್ಥರೇ ಶೆಡ್ ಹಾಕಿ ಶಾಲೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಒಂದು ಗ್ರಾಮದ ಶಾಲೆ ಇದುವರೆಗೂ ತೆರೆದೇ ಇಲ್ಲ. ಸುರೇಶ್ ಕುಮಾರ್ ಅವರೇ ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದು ಹೇಳಿದ್ದಾರೆ.

“ಪ್ರವಾಹದಿಂದ ಮೀನುಗಾರರ ದೋಣಿಗೆ ಮತ್ತು ಬಲೆಗೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಅವರಿಗೆ ಪರಿಹಾರ ಕೊಡಲು ಅವಕಾಶವಿದ್ದರೂ ಅಧಿಕಾರಿಗಳು ಲೈಸೆನ್ಸ್ ಇಲ್ಲ ಎಂಬ ಕಾರಣ ನೀಡಿ ಪರಿಹಾರ ನಿರಾಕರಿಸಿರುವುದು ಸರಿಯಲ್ಲ, ಅವರಿಗೆ ತಕ್ಷಣ ಪರಿಹಾರ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

“ಕೃಷಿ ಭೂಮಿ ಕಳೆದುಕೊಂಡವರಿಗೆ ರೂ.1129 ಕೋಟಿ ಪರಿಹಾರ ನೀಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಅದು ಯಾವ ರೈತರಿಗೂ ತಲುಪಿಲ್ಲ ಎಂದರಲ್ಲದೆ ಇದಕ್ಕಾಗಿ ನಿತ್ಯ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎಂದರು. ರಾಮದುರ್ಗದ 32 ಗ್ರಾಮ, 8 ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಪರಿಹಾರ ಸಿಗಲಿಲ್ಲ ಎಂದು ಅಸಿಸ್ಟಂಟ್ ಕಮಿಷನರ್‌ಗೆ ಜನರು ದಿಗ್ಭಂದನ ಹಾಕಿದ್ದರು” ಎಂದರು.

“ಪ್ರವಾಹದಲ್ಲಿ ಹಾನಿಗೊಳಗಾದ 1.24 ಲಕ್ಷ ಮನೆಗಳಿಗೆ ಪರಿಹಾರದ ರೂಪದಲ್ಲಿ ರೂ.800 ಕೋಟಿ ನೀಡಿದ್ದೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಹೇಳಿದೆ. ಆದರೆ ಇದೇ ಸರ್ಕಾರ ಹಿಂದೆ ನೀಡಿದ್ದ ಜಾಹಿರಾತಿನಲ್ಲಿ 2 ಲಕ್ಷದ 57 ಸಾವಿರ ಮನೆಗಳು ಹಾನಿಗೊಳಗಾಗಿವೆ ಎಂದು ಹೇಳಿತ್ತು. ಹಾಗಾದರೆ ಉಳಿದ ಮನೆಗಳಿಗೆ ಏಕೆ ಪರಿಹಾರ ನೀಡಿಲ್ಲ? ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಪ್ರವಾಹ ಬಂದು ಸುಮಾರು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ನಾಶವಾಯಿತು, ಸಾವಿರಾರು ಮನೆಗಳು ನೆಲಕ್ಕುರುಳಿದವು, ಜನ ಜಾನುವಾರುಗಳ ಜೀವ ಹಾನಿಯಾಯಿತು. ಇದಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಯಾಕೆ ನೀಡಿಲ್ಲ?” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿಸರು.

“ತೆರಿಗೆ ಸಂಗ್ರಹದಲ್ಲಿ ಕರ್ನಾಟಕವೂ ದೆಹಲಿ, ಮಹಾರಾಷ್ಟ್ರದ ನಂತರ 3ನೇ ಸ್ಥಾನದಲ್ಲಿದೆ. ಕೇಂದ್ರ ಬಜೆಟ್‌‌ನಲ್ಲಿ ನೀಡಬೇಕಾಗಿದ್ದ ಅನುದಾನದಲ್ಲಿ ರೂ.17000 ಕೋಟಿ ಕಡಿಮೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಜಿಎಸ್‌ಟಿ ಪಾಲು, ಪ್ರವಾಹ ಪರಿಹಾರ ನಿಧಿ ಸಮರ್ಪಕವಾಗಿ ಬಂದಿಲ್ಲ. ಹೀಗಾದರೆ ರಾಜ್ಯದ ಅಭಿವೃದ್ಧಿ ಆಗುವುದು ಹೇಗೆ? ಬಿಜೆಪಿ ಸರ್ಕಾರ ಬಂದು 7 ತಿಂಗಳಾಗಿದೆ. ಯಾವುದಾದರೂ ಒಂದು ಹೊಸ ಜನಪರ ಯೋಜನೆ ಆರಂಭಿಸಿದೆಯೇ? ಅರಣ್ಯ ಹೆಚ್ಚಳ ತಮ್ಮ ಸಾಧನೆ ಎಂದು ಸಚಿವರೊಬ್ಬರು ತಮ್ಮ ಭಾಷಣದಲ್ಲಿ ಹೇಳಿದ್ದರು, ಬರೀ ಏಳೇ ತಿಂಗಳಲ್ಲೇ ಇವರು ಅರಣ್ಯ ಬೆಳೆಸಿದರೇ? ಹಾಲು ಉತ್ಪಾದನೆ ಹೆಚ್ಚಳ, ಬಂಡವಾಳ ಹೂಡಿಕೆ ಇವೆಲ್ಲ ಹಿಂದಿನ ನಮ್ಮ ಸರ್ಕಾರದ ಸಾಧನೆಗಳು” ಎಂದರು.

“ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ನೀಡುವ ಯೋಜನೆ ‘ಕ್ಷೀರಧಾರೆ’ ಪ್ರಾರಂಭಿಸಿದ್ದು ನಾವು. ಒಂದು ದಿನಕ್ಕೆ‌ ರೂ.4 ಕೋಟಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಕಾರಣದಿಂದ ಇಂದು ನಿತ್ಯ 80 ಲಕ್ಷ ಲೀಟರ್ ಗೂ ಅಧಿಕ ಹಾಲು ಉತ್ಪಾದನೆ ಆಗುತ್ತಿದೆ. ನಮ್ಮ ಸರ್ಕಾರ ಪ್ರೋತ್ಸಾಹಧನ ನೀಡುವ ಮುನ್ನ ನಿತ್ಯ 55 ಲಕ್ಷ ಲೀಟರ್ ಹಾಲು ಮಾತ್ರ ಉತ್ಪಾದನೆಯಾಗುತ್ತಿತ್ತು. ಈಗ ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನ ತಲುಪಿದೆ ಎಂದರೆ ಅದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರವೇ ಹೊರತು ಈಗಿನ ಬಿಜೆಪಿ ಸರ್ಕಾರವಲ್ಲ” ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕರಕ್ಕೆ ನೆನಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...