Homeಮುಖಪುಟಮಹಾರಾಷ್ಟ್ರದ 18 ಶಾಸಕರು ಸಚಿವರಾಗಿ ಪ್ರಮಾಣ ವಚನ; ಆರಂಭದಲ್ಲೆ ಬಿಜೆಪಿ ಉಪಾಧ್ಯಕ್ಷೆ ಅಪಸ್ವರ

ಮಹಾರಾಷ್ಟ್ರದ 18 ಶಾಸಕರು ಸಚಿವರಾಗಿ ಪ್ರಮಾಣ ವಚನ; ಆರಂಭದಲ್ಲೆ ಬಿಜೆಪಿ ಉಪಾಧ್ಯಕ್ಷೆ ಅಪಸ್ವರ

- Advertisement -
- Advertisement -

ಸೋಮವಾರ ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಮತ್ತು ಶಿವಸೇನೆ ಬಣದ ತಲಾ 9 ಶಾಸಕರು ಒಟ್ಟು 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ 40 ದಿನಗಳ ನಂತರ ಶಿಂಧೆ ನೇತೃತ್ವದ ಶಿವಸೇನೆ ಬಣದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಿದೆ.

ಇಂದು ಬೆಳಗ್ಗೆ ಸಮಾರಂಭಕ್ಕೂ ಮುನ್ನ ಮುಖ್ಯಮಂತ್ರಿ ಶಿಂಧೆ ತಮ್ಮ ಪಾಳೆಯದ ಶಾಸಕರನ್ನು ಭೇಟಿ ಮಾಡಿದರು. 55 ಸೇನಾ ಶಾಸಕರ ಪೈಕಿ 40 ಶಾಸಕರು ಅವರನ್ನು ಬೆಂಬಲಿಸಿದ್ದಾರೆ. ಜೂನ್‌ನಲ್ಲಿ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸಂಪುಟ ವಿಸ್ತರಣೆ ವಿಳಂಬವನ್ನು ಪ್ರತಿಪಕ್ಷಗಳು ಟೀಕಿಸುತ್ತಲೆ ಇದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ಯಾಬಿನೆಟ್‌ ವಿಸ್ತರಣೆಗಾಗಿ ಶಿಂಧೆ ಮತ್ತು ಬಿಜೆಪಿ ನಾಯಕತ್ವದ ನಡುವೆ ಸರಣಿ ಸಭೆಗಳು ನಡೆದಿದ್ದವು. ಮುಖ್ಯಮಂತ್ರಿ ಶಿಂಧೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರರೊಂದಿಗೆ ಸಂಭಾವ್ಯರ ಹೆಸರುಗಳನ್ನು ಚರ್ಚಿಸಲು ಹಲವಾರು ಬಾರಿ ದೆಹಲಿಗೆ ತೆರಳಿದ್ದರು.

ಇದನ್ನೂ ಓದಿ: ‘ಗುಜರಾತಿಗಳನ್ನು ಹೊರ ಕಳುಹಿಸಿದರೆ ಮಹಾರಾಷ್ಟ್ರದಲ್ಲಿ ಹಣವೆ ಇರಲ್ಲ’: ಮಹಾರಾಷ್ಟ್ರ ರಾಜ್ಯಪಾಲ ವಿವಾದಾತ್ಮಕ ಹೇಳಿಕೆ

ಅಂತಿಮ ಪಟ್ಟಿಯು ಉದ್ಧವ್ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದಕ್ಕಾಗಿ ಶಿವಸೇನೆ ಶಾಸಕರಿಗೆ ಬಹುಮಾನ ನೀಡುವುದರ ನಡುವೆ ಉತ್ತಮವಾದ ಸಮತೋಲನವನ್ನು ಬಿಜೆಪಿ ಸಾಧಿಸಿದೆ. ಆದರೆ ಸಚಿವ ಸಂಪುಟದಲ್ಲಿ ಯಾವುದೇ ಮಹಿಳೆಯರಿಗೆ ಸ್ಥಾನವನ್ನು ನೀಡಿಲ್ಲ.

ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗಾವಿತ್, ಅತುಲ್ ಸೇವ್, ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್ ಸೇರಿದಂತೆ ಬಿಜೆಪಿ ಶಾಸಕರು ಸಂಪುಟ ಸ್ಥಾನ ಪಡೆದಿದ್ದಾರೆ.

ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂಟಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚವ್ಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗವಿತ್ ಮತ್ತು ಅತುಲ್ ಸೇವ್ ಸೇರಿ ಒಟ್ಟು 8 ಬಿಜೆಪಿ ಶಾಸಕರು ಸಂಪುಟ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಟೋ ಡ್ರೈವರ್‌‌ ಆಗಿದ್ದ ಶಿಂಧೆ ಸಿಎಂ ಕುರ್ಚಿಯವರೆಗೆ…!

ಶಿಂಧೆ ನೇತೃತ್ವದ ಶಿವಸೇನೆಯ ಬಣದಿಂದ ದಾದಾ ಭೂಸೆ, ಸಂದೀಪನ್ ಬುಮ್ರೆ, ಉದಯ್ ಸಮಂತ್, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ಕೇಸರ್ಕರ್, ಗುಲಾಬ್ರಾವ್ ಪಾಟೀಲ್, ಸಂಜಯ್ ರಾಥೋಡ್ ಮತ್ತು ಶಂಭುರಾಜೇ ದೇಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಚಂದ್ರಕಾಂತ್ ಪಾಟೀಲ್ ಅವರು ಮಹಾರಾಷ್ಟ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದು, ಕೊತ್ತೂರು ಶಾಸಕರಾಗಿದ್ದಾರೆ. ಅವರು ಈ ಹಿಂದೆ ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಸುಧೀರ್ ಮುಂಗಂತಿವಾರ್ ಅವರು ರಾಜ್ಯದ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2019ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ವಿಖೆ ಪಾಟೀಲ್ ಅವರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಏಕನಾಥ್ ಶಿಂಧೆ ಕ್ಯಾಬಿನೆಟ್ ಪ್ರವೇಶಿಸಿದ ದಾದಾ ಭೂಸೆ ಅವರು ಈ ಹಿಂದೆ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಏಕನಾಥ್ ಶಿಂಧೆ ಅವರ ಸಹಾಯಕರಾಗಿದ್ದಾರೆ. ಉದಯ್ ಸಮಂತ್ ರತ್ನಗಿರಿಯ ಶಾಸಕರಾಗಿದ್ದು ಎನ್‌ಸಿಪಿ ನಾಯಕರಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಬಿಜೆಪಿ ಹೈಕಮಾಂಡ್ ನಿರ್ದೇಶನದ ನಂತರ ಉಪಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಡಬೇಕಾಗಿದ್ದ ಫಡ್ನವೀಸ್ ಅವರು ಸಂಪುಟದಲ್ಲಿ ಗೃಹ ಖಾತೆಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ನಡುವೆ ಸಂಜಯ್ ರಾಥೋಡ್ ಅವರನ್ನು ಮಹಾರಾಷ್ಟ್ರ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಅವರು ಟಿಕ್‌ಟಾಕ್ ತಾರೆಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷೆ ಚಿತ್ರಾ ವಾಘ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಹಿಂದಿನ ಸರ್ಕಾರ ಇದ್ದಾಗ ರಾಜ್ಯದ ಈಗಿನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕೂಡಾ ಅವರ ವಿರುದ್ಧ ಆರೋಪ ಮಾಡಿದ್ದರು.

“ಮಹಾರಾಷ್ಟ್ರದ ಪುತ್ರಿ ಪೂಜಾ ಚವ್ಹಾಣ್ ಸಾವಿಗೆ ಕಾರಣರಾದ ಸಂಜಯ್ ರಾಥೋಡ್ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ದುರದೃಷ್ಟಕರ… ಅವರ ವಿರುದ್ಧ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ’’ ಎಂದು ಚಿತ್ರಾ ವಾಘ್‌ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

ಉದ್ಧವ್ ಠಾಕ್ರೆ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ರಾಥೋಡ್ ಅವರು ಪ್ರಕರಣದ ಕಾರಣ ರಾಜೀನಾಮೆ ನೀಡಿದ್ದರು. ಆದರೆ ಈಗ ಅವರನ್ನು ಸಂಪುಟದ ಸೇರಿಸಿಕೊಂಡಿದ್ದನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮರ್ಥಿಸಿಕೊಂಡಿದ್ದಾರೆ. “ಹಿಂದಿನ ಸರ್ಕಾರದ ಅವಧಿಯಲ್ಲಿ ತನಿಖೆ ನಡೆಸಿ ಅವರಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಅದಕ್ಕಾಗಿಯೇ ನಾವು ಅವರನ್ನು ಮಂತ್ರಿ ಮಾಡಿದ್ದೇವೆ. ಯಾರೇ ಆಕ್ಷೇಪಿಸಿದರೂ ನಾವು ಮಾತನಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...