Homeಮುಖಪುಟಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: 'ಹೈ ರಿಸ್ಕ್‌' ಟು 'ಸೇಫ್‌'-19 ಕಂಪೆನಿಗಳ...

ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

- Advertisement -
- Advertisement -

ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡಲು ಚುನಾವಣಾ ಬಾಂಡ್‌ಗಳನ್ನು ಖರೀದಿಸಿರುವ ಕಂಪನಿಗಳ ಪಟ್ಟಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಣಕಾಸು ಸಚಿವಾಲಯದಿಂದ ಕಾನೂನು ಕ್ರಮ ಎದುರಿಸುತ್ತಿರುವ ಕನಿಷ್ಠ 19 ಕಂಪನಿಗಳು ಎಲೆಕ್ಟ್ರಾಲ್‌ ಬಾಂಡ್‌ ಖರೀದಿ ಮಾಡಿರುವುದು ಕಂಡು ಬರುತ್ತಿದೆ. ಈ 19 ಕಂಪನಿಗಳು ಒಟ್ಟಾಗಿ 2,717 ಕೋಟಿ ರೂಪಾಯಿಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ಇವುಗಳಲ್ಲಿ 16 ಕಂಪೆನಿಗಳು ಕೋಲ್ಕತ್ತಾದಲ್ಲಿ ನೋಂದಣಿಯಾಗಿರುವುದು ಕಂಡುಬಂದಿದೆ.

ಹಣಕಾಸು ಸಚಿವಾಲಯದ ಹಣಕಾಸು ಗುಪ್ತಚರ ಘಟಕ (ಎಫ್‌ಐಯು) 2018ರಲ್ಲಿ ಮೊದಲ ಬಾರಿಗೆ 9,491 “ಹೆಚ್ಚಿನ ಅಪಾಯದ ಹಣಕಾಸು ಸಂಸ್ಥೆಗಳ” ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಪಟ್ಟಿಯು, ಈ ಸಂಸ್ಥೆಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಉಲ್ಲಂಘನೆ ಮಾಡುತ್ತಿದೆ ಎಂದು ಕೂಡ ಜಾರಿ ನಿರ್ದೇಶನಾಲಯಕ್ಕೆ ಸುಳಿವು ನೀಡಿತ್ತು.

ಎಫ್‌ಐಯು ಮೂಲಗಳನ್ನು ಉಲ್ಲೇಖಿಸಿ, ಬ್ಯುಸಿನೆಸ್ ಸ್ಟ್ಯಾಂಡರ್ಡ್ ವರದಿಯನ್ನು ಮಾಡಿದ್ದು, ವರದಿಯಲ್ಲಿ ಈ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನವೆಂಬರ್ 2016ರಲ್ಲಿ ನೋಟುಗಳ ಅಮಾನ್ಯೀಕರಣದ ನಂತರ ಎಫ್‌ಐಯು ನಿಗಾ ಇಟ್ಟಿತ್ತು. ಎಫ್‌ಐಯು ‘ಹೆಚ್ಚಿನ ಅಪಾಯದ ಸಂಸ್ಥೆಗಳು’ ಎಂದು ಗುರುತಿಸಿದ ಎಲ್ಲಾ 19 ಕಂಪನಿಗಳು  ಚುನಾವಣಾ ಬಾಂಡ್‌ ಕುರಿತ 2018ರ ಪಟ್ಟಿಯಲ್ಲಿ ಸೇರಿದೆ ಎಂದು ಹೇಳಲಾಗಿದೆ. ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಈ 19 ಕಂಪನಿಗಳಲ್ಲಿ 18 ಕಂಪನಿಗಳು ಕಾಕತಾಳೀಯವಾಗಿ ಎಫ್‌ಐಯುನ ನಂತರದ ‘ಹೆಚ್ಚಿನ ಅಪಾಯದ’ ವಾರ್ಷಿಕ ಪಟ್ಟಿಗಳಲ್ಲಿ ಕಾಣಿಸಿಕೊಂಡಿಲ್ಲ. ಹಾಗಾಗಿ ಬಾಂಡ್‌ಗಳನ್ನು ಖರೀದಿಸಿರುವುದು ಕಂಡುಬಂದಿರುವ ‘ಹೈ ರಿಸ್ಕ್’ ಕಂಪನಿಗಳಲ್ಲಿ ಕೇವಲ ಒಂದು ಮಾತ್ರ ಕಂಡು ಬಂದಿದೆ ಎಂದು ಅವಲೋಕನದ ವೇಳೆ ಬಯಲಾಗಿದ್ದು, ಉಳಿದ ಕಂಪೆನಿಗಳು ಸೇಫ್‌ ಆಗಿದೆ ಎನ್ನಲಾಗಿದೆ.

2018ರ ಪಟ್ಟಿಯನ್ನು FIU ಹೊರತಂದ ವಾರಗಳ ನಂತರ, ಹಣಕಾಸು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿದ PTI ವರದಿಯು, 2018ರ ‘ಹೈ ರಿಸ್ಕ್’ ಪಟ್ಟಿಯಲ್ಲಿ ಹೆಸರಿಸಲಾದ 9,491 ಕಂಪನಿಗಳಲ್ಲಿ 1200ಕ್ಕೂ ಹೆಚ್ಚು ಕಂಪೆನಿಗಳು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ ಎಂದು ಹೇಳಿದೆ.

ರೇಣುಕಾ ಇನ್ವೆಸ್ಟ್ಮೆಂಟ್ ಫೈನಾನ್ಸ್ ಲಿಮಿಟೆಡ್

‘ಹೆಚ್ಚಿನ ಅಪಾಯದ’ ಕಂಪೆನಿಗಳ ಪಟ್ಟಿಗಳಲ್ಲಿ ಕಂಪನಿಯು ರೇಣುಕಾ ಇನ್ವೆಸ್ಟ್‌ಮೆಂಟ್ ಫೈನಾನ್ಸ್ ಲಿಮಿಟೆಡ್ ಕಂಡು ಬಂದಿದೆ. ಉತ್ತರ ಪ್ರದೇಶದ ಸೋನ್‌ಭದ್ರದಲ್ಲಿ ನೋಂದಾಯಿತ ರೇಣುಕಾ ಇನ್ವೆಸ್ಟ್‌ಮೆಂಟ್ ಫೈನಾನ್ಸ್ ಲಿಮಿಟೆಡ್ 2018, 2019, 2021, ಮತ್ತು 2022 ರಲ್ಲಿ FIU ನ ವಾರ್ಷಿಕ ‘ಹೈ-ರಿಸ್ಕ್’ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಏಪ್ರಿಲ್ 12, 2019ರಂದು ಕಂಪನಿಯು ರೂ 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. SBI ಇನ್ನೂ ಖರೀದಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸದಿರುವುದರಿಂದ, ಯಾವ ರಾಜಕೀಯ ಪಕ್ಷವು ಈ ಹಣವನ್ನು ಪಡೆದುಕೊಂಡಿದೆ ಎಂಬುದು ಸ್ಪಷ್ಟವಾಗಿಲ್ಲ.

2018ರ ಹೆಚ್ಚಿನ ಅಪಾಯದ ಪಟ್ಟಿಯಲ್ಲಿದ್ದ ಇತರ ಕಂಪೆನಿಗಳು

ಪಿಎಂಎಲ್‌ಎ ಕಾಯ್ದೆಯನ್ನು ಉಲ್ಲಂಘಿಸಿದ ಕಾರಣಕ್ಕೆ 2018ರ ಎಫ್‌ಐಯುನ ‘ಹೈ ರಿಸ್ಕ್’ ಪಟ್ಟಿಯಲ್ಲಿದ್ದ ಇತರ ಕಂಪೆನಿಗಳು:

ಕಾಮ್ನಾ ಕ್ರೆಡಿಟ್ಸ್ ಮತ್ತು ಪ್ರಮೋಟರ್ಸ್ ಪ್ರೈ. ಲಿ.

2018ರ ಪಟ್ಟಿಯಲ್ಲಿ FIU ಕಾಮ್ನಾ ಕ್ರೆಡಿಟ್ಸ್ ಮತ್ತು ಪ್ರಮೋಟರ್ಸ್ ಪ್ರೈವೇಟ್ ಲಿಮಿಟೆಡ್ PMLA ಮತ್ತು PML ನಿಯಮಗಳನ್ನು ಪಾಲಿಸಿಲ್ಲ ಎಂದು ಕಂಡು ಹಿಡಿದಿತ್ತು. ಕೋಲ್ಕತ್ತಾ ಮೂಲದ ಈ ಕಂಪೆನಿ, ಇದು ಜನವರಿ 4, 2022ರಂದು 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಚುನಾವಣಾ ಆಯೋಗ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ವಿಧಾನಸಭಾ ಚುನಾವಣೆ ಘೋಷಿಸಿದ 4 ದಿನಗಳ ಬಳಿಕ ಈ ಬೆಳವಣಿಗೆ ನಡೆದಿತ್ತು.

ಇನ್ನೋಸೆಂಟ್ ಮರ್ಚಂಡೈಸ್ ಪ್ರೈ. ಲಿ.

PMLA ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 2018ರಲ್ಲಿ ಇನೋಸೆಂಟ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ‘ಹೈ-ರಿಸ್ಕ್’ ಕಂಪನಿಯ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಕೋಲ್ಕತ್ತಾ ಮೂಲದ ಈ ಕಂಪೆನಿಯು ಏಪ್ರಿಲ್ 12, 2019 ರಂದು 25 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ನಂತರ ಒಂದು ದಿನದ ನಂತರ ಈ ಬಾಂಡ್‌ಗಳನ್ನು ಖರೀದಿಸಲಾಗಿದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರಿಯಾಗಿ ಮಾಹಿತಿ ನೀಡದ ಕಾರಣ ಯಾವ ಪಕ್ಷಕ್ಕೆ ನೀಡಲಾಗಿದೆ ಎಂಬುವುದು ಅಸ್ಪಷ್ಟವಾಗಿದೆ.

ಆಲ್ಮೈಟಿ ಫೈನಾನ್ಸ್ ಅಂಡ್ ಇನ್ವೆಸ್ಟ್‌ಮೆಂಟ್ ಪ್ರೈ. ಲಿಮಿಟೆಡ್

ಕೋಲ್ಕತ್ತಾ ಮೂಲದ ಆಲ್ಮೈಟಿ ಫೈನಾನ್ಸ್ ಅಂಡ್ ಇನ್ವೆಸ್ಟ್‌ಮೆಂಟ್ ಪ್ರೈ. ಲಿಮಿಟೆಡ್ ಜುಲೈ 5, 2019ರಂದು  20 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಈ ದೇಣಿಗೆ ಯಾವ ಪಕ್ಷಕ್ಕೆ  ಹೋಗಿದೆ ಎಂಬುದು ತಿಳಿದಿಲ್ಲವಾದರೂ, ಈ ವೇಳೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ಉಪ ಚುನಾವಣೆಗಳು ನಡೆದಿವೆ.

ಅರಿಹಂತ್ ಎಂಟರ್‌ಪ್ರೈಸಸ್ ಲಿ.

ಅರಿಹಂತ್ ಎಂಟರ್‌ಪ್ರೈಸಸ್ ಲಿಮಿಟೆಡ್ ಕೂಡ ಕೋಲ್ಕತ್ತಾ ಮೂಲದ ಕಂಪನಿಯಾಗಿದೆ. 2019 ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತ ಪೂರ್ಣಗೊಂಡ ಒಂದು ದಿನದ ನಂತರ, ಏಪ್ರಿಲ್ 12, 2019ರಂದು 40 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಈ ಕಂಪೆನಿ ಖರೀದಿಸಿತ್ತು. ಇದಲ್ಲದೆ ಜುಲೈ 2019ರಲ್ಲಿ ಮತ್ತೆ 10 ಕೋಟಿ ರೂ. ಬಾಂಡ್‌ಗಳನ್ನು ಖರೀದಿಸಿತ್ತು. ಒಟ್ಟಾರೆಯಾಗಿ ಈ ಕಂಪೆನಿಯು 50 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿತ್ತು.

ಆಶಿಶ್ ಫೈನಾನ್ಸ್ ಪ್ರೈ.ಲಿಮಿಟೆಡ್

ಇದು ಕೂಡ ಕೋಲ್ಕತ್ತಾದಲ್ಲಿ ನೋಂದಾಯಿತ ಕಂಪೆನಿಯಾಗಿದೆ. ಆಶಿಶ್ ಫೈನಾನ್ಸ್ ಪ್ರೈ.ಲಿಮಿಟೆಡ್ ಜನವರಿ 4 ರಂದು 250 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಆಟಮ್ ಇನ್ವೆಸ್ಟ್ಮೆಂಟ್ & ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್

ಆಟಮ್ ಇನ್ವೆಸ್ಟ್ಮೆಂಟ್ & ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮುಂಬೈ-ನೋಂದಾಯಿತ ಕಂಪೆನಿಯಾಗಿದೆ. ಇದು ಏಪ್ರಿಲ್ 7, 2022 ರಂದು 10 ಕೋಟಿ ರೂ.ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ. ಏಪ್ರಿಲ್ 2022ರ ನಂತರ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ಉಪ ಚುನಾವಣೆಗಳು ನಡೆದಿವೆ. ಇದಲ್ಲದೆ ಜನವರಿ 24, 2023ರಂದು ಅದು ಮತ್ತೆ 15 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2022-23ರ ನಡುವೆ ಕಂಪೆನಿಯು ಒಟ್ಟು 25 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಬನ್ಸಾಲ್ ಬಿಸಿನೆಸ್ ಪ್ರೈ. ಲಿಮಿಟೆಡ್

ಬನ್ಸಾಲ್ ಬಿಸಿನೆಸ್ ಪ್ರೈ. ಲಿಮಿಟೆಡ್ ಮತ್ತೊಂದು ಕೋಲ್ಕತ್ತಾ ಮೂಲದ ಕಂಪೆನಿ. ಈ ಕಂಪೆನಿ ಗೋವಾ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಉತ್ತರಪ್ರದೇಶ ರಾಜ್ಯಗಳ ಅಸೆಂಬ್ಲಿ ಚುನಾವಣೆಗೆ ಮುನ್ನ, ಅಂದರೆ ಜನವರಿ 3, 2022ರಂದು 40 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಏಪ್ರಿಲ್ 10, 2023ರಂದು ಅದು ಮತ್ತೆ 50 ಕೋಟಿ ರೂ.ಮೌಲ್ಯದ ಚುನಾವಣೆ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟು ಈ ಸಂಸ್ಥೆ 90 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಕ್ಲಿಕ್ಸ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್

ಕ್ಲಿಕ್ಸ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್ ಕೋಲ್ಕತ್ತಾ-ನೋಂದಾಯಿತ ಕಂಪೆನಿ. ಇದು ಜನವರಿ 3, 2022ರಂದು 35 ಕೋಟಿ ರೂ. ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಕ್ರೋಚೆಟ್ ಟ್ರೇಡ್ ಅಂಡ್ ಇನ್ವೆಸ್ಟ್ಮೆಂಟ್ ಲಿ.

ಕೋಲ್ಕತ್ತಾದ ಲಾಲ್ ಬಜಾರ್ ಪ್ರದೇಶದಲ್ಲಿ ನೋಂದಾಯಿತ ಕ್ರೋಚೆಟ್ ಟ್ರೇಡ್ ಅಂಡ್ ಇನ್ವೆಸ್ಟ್‌ಮೆಂಟ್ ಲಿಮಿಟೆಡ್ ಗಮನಾರ್ಹವಾಗಿ ಅಕ್ಟೋಬರ್ 8, 2021 ರಂದು 200 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಜುಲೈ 7, 2023 ರಂದು ಮತ್ತೆ 150 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟಾರೆಯಾಗಿ ಕಂಪೆನಿಯು 350 ಕೋಟಿ.ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಜುಪಿಟರ್ ಮರ್ಚಂಟೈಲ್ ಪ್ರೈ. ಲಿಮಿಟೆಡ್

ಕೋಲ್ಕತ್ತಾ ಮೂಲದ ಜುಪಿಟರ್ ಮರ್ಚಂಟೈಲ್ ಪ್ರೈ. ಲಿಮಿಟೆಡ್ ಕಂಪೆನಿ ಏಪ್ರಿಲ್ 17, 2019ರಂದು 25 ಕೋಟಿ ರೂ.ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಲೈಫ್‌ಲೈನ್ ಮಾರ್ಕೆಟಿಂಗ್ ಪ್ರೈ. ಲಿಮಿಟೆಡ್

ಲೈಫ್‌ಲೈನ್ ಮಾರ್ಕೆಟಿಂಗ್ ಪ್ರೈ.ಲಿಮಿಟೆಡ್ ಕೋಲ್ಕತ್ತಾ ಮೂಲದ ಕಂಪೆನಿ, ಇದು ಅಕ್ಟೋಬರ್ 7, 2021ರಂದು 200ಕೋಟಿ ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಮನು ವ್ಯಾಪಾರ್ ಪ್ರೈ. ಲಿಮಿಟೆಡ್

ಮನು ವ್ಯಾಪಾರ್ ಪ್ರೈ.ಲಿಮಿಟೆಡ್ ಕೋಲ್ಕತ್ತಾದಲ್ಲಿ ನೋಂದಾಯಿಸಲಾದ ಕಂಪೆನಿಯಾಗಿದೆ, ಈ ಕಂಪೆನಿಯು ಚುನಾವಣಾ ಬಾಂಡ್‌ಗಳನ್ನು ಜನವರಿ 24, 2023ರಂದು 300 ಕೋಟಿ ರೂ. ಮತ್ತು  ಜನವರಿ 11, 2024 ರಂದು 200 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಅಂದರೆ ಒಟ್ಟಾರೆ 500 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಪ್ಲುಟೊ ಫೈನಾನ್ಸ್ ಪ್ರೈ. ಲಿಮಿಟೆಡ್

ಪ್ಲುಟೊ ಫೈನಾನ್ಸ್ ಪ್ರೈ. ಲಿಮಿಟೆಡ್ ಕೂಡ ಕೋಲ್ಕತ್ತಾ ಮೂಲದ ಕಂಪನಿ. ಜುಲೈ 6, 2021ರಂದು 22 ಕೋಟಿ ರೂ.ಮೌಲ್ಯದ ಬಾಂಡ್‌ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್‌ಬಿಐ) ಈ ಕಂಪೆನಿ ಖರೀದಿಸಿದೆ.

ಜನವರಿ 4, 2024ರಂದು, 25 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಆ ಬಳಿಕ 50 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟಾರೆಯಾಗಿ ಈ ಕಂಪೆನಿ  97 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ.

ರಾಮೋಲಿ ಡೀಲರ್ ಪ್ರೈ. ಲಿ.

ರಾಮೋಲಿ ಡೀಲರ್ಸ್ ಕೂಡ ಕೋಲ್ಕತ್ತಾ ನೋಂದಾಯಿತ ಕಂಪನಿಯಾಗಿದೆ. ಇದು ಜನವರಿ 3, 2022ರಂದು 25 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ರಾಣಿ ಸತಿ ಮರ್ಕೆಂಟೈಲ್ ಪ್ರೈ. ಲಿಮಿಟೆಡ್

ರಾಣಿ ಸತಿ ಮರ್ಕೆಂಟೈಲ್ ಪ್ರೈ.ಲಿಮಿಟೆಡ್ ಕೋಲ್ಕತ್ತಾ ಮೂಲದ ಕಂಪನಿ, ಅಕ್ಟೋಬರ್ 5, 2021ರಂದು 30 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಮತ್ತು ಜನವರಿ 6, 2024 ರಂದು 75 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದೆ.

ರೈಟ್ ಏಡ್ ಕನ್ಸಲ್ಟೆಂಟ್ಸ್ ಪ್ರೈ.ಲಿಮಿಟೆಡ್

ಕೋಲ್ಕತ್ತಾ ಲಾಲ್ ಬಜಾರ್ ಮೂಲದ ಈ ಕಂಪನಿಯು ಅಕ್ಟೋಬರ್ 8, 2021ರಂದು 150 ಕೋಟಿ ರೂ. ಮೌಲ್ಯದ ಮತ್ತು ಜುಲೈ 10, 2023 ರಂದು 150 ಕೋಟಿ ರೂ. ಮೌಲ್ಯದ ಹೆಚ್ಚಿನ ಬಾಂಡ್‌ಗಳನ್ನು ಖರೀದಿಸಿದೆ.

ಸಿಲ್ವರ್ಟೋನ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್

ಇದು ಕೂಡ ಕೋಲ್ಕತ್ತಾದ ಲಾಲ್ ಬಜಾರ್‌ನಲ್ಲಿ ನೋಂದಾಯಿತ ಕಂಪನಿಯಾಗಿದೆ. ಅಕ್ಟೋಬರ್ 2021ರಂದು 200 ಕೋಟಿ ರೂ. ಮೌಲ್ಯದ ಮತ್ತು ಜುಲೈ 10, 2023 ರಂದು 150 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಶ್ರೀನಾಥ್ ಫಿನ್ವೆಸ್ಟ್ ಪ್ರೈ. ಲಿಮಿಟೆಡ್

ಇದು ಕೂಡ ಕೋಲ್ಕತ್ತಾ ಮೂಲದ ಕಂಪನಿ. ಇದು ಜುಲೈ 7, 2021ರಂದು 10 ಕೋಟಿ ರೂ.ಮೌಲ್ಯದ ಮತ್ತು ಜನವರಿ 7, 2022 ರಂದು 20 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಸುಧಾ ಕಮರ್ಷಿಯಲ್ ಕಂಪನಿ ಲಿ.

ಇದು ಕೋಲ್ಕತ್ತಾ-ನೋಂದಾಯಿತ ಕಂಪೆನಿ, ಏಪ್ರಿಲ್ 20, 2019ರಂದು 30 ಕೋಟಿ ರೂ. ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಶ್ವೇತಾ ಎಸ್ಟೇಟ್ಸ್ ಪ್ರೈ. ಲಿಮಿಟೆಡ್

ದೆಹಲಿಯ ಏರೋ ಸಿಟಿಯಲ್ಲಿ ನೋಂದಣಿಯಾಗಿರುವ ಈ ಕಂಪನಿಯು ಏಪ್ರಿಲ್ 16, 2019ರಂದು 200 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...