Homeಮುಖಪುಟಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: 'ಹೈ ರಿಸ್ಕ್‌' ಟು 'ಸೇಫ್‌'-19 ಕಂಪೆನಿಗಳ...

ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

- Advertisement -
- Advertisement -

ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡಲು ಚುನಾವಣಾ ಬಾಂಡ್‌ಗಳನ್ನು ಖರೀದಿಸಿರುವ ಕಂಪನಿಗಳ ಪಟ್ಟಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಣಕಾಸು ಸಚಿವಾಲಯದಿಂದ ಕಾನೂನು ಕ್ರಮ ಎದುರಿಸುತ್ತಿರುವ ಕನಿಷ್ಠ 19 ಕಂಪನಿಗಳು ಎಲೆಕ್ಟ್ರಾಲ್‌ ಬಾಂಡ್‌ ಖರೀದಿ ಮಾಡಿರುವುದು ಕಂಡು ಬರುತ್ತಿದೆ. ಈ 19 ಕಂಪನಿಗಳು ಒಟ್ಟಾಗಿ 2,717 ಕೋಟಿ ರೂಪಾಯಿಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ಇವುಗಳಲ್ಲಿ 16 ಕಂಪೆನಿಗಳು ಕೋಲ್ಕತ್ತಾದಲ್ಲಿ ನೋಂದಣಿಯಾಗಿರುವುದು ಕಂಡುಬಂದಿದೆ.

ಹಣಕಾಸು ಸಚಿವಾಲಯದ ಹಣಕಾಸು ಗುಪ್ತಚರ ಘಟಕ (ಎಫ್‌ಐಯು) 2018ರಲ್ಲಿ ಮೊದಲ ಬಾರಿಗೆ 9,491 “ಹೆಚ್ಚಿನ ಅಪಾಯದ ಹಣಕಾಸು ಸಂಸ್ಥೆಗಳ” ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಪಟ್ಟಿಯು, ಈ ಸಂಸ್ಥೆಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಉಲ್ಲಂಘನೆ ಮಾಡುತ್ತಿದೆ ಎಂದು ಕೂಡ ಜಾರಿ ನಿರ್ದೇಶನಾಲಯಕ್ಕೆ ಸುಳಿವು ನೀಡಿತ್ತು.

ಎಫ್‌ಐಯು ಮೂಲಗಳನ್ನು ಉಲ್ಲೇಖಿಸಿ, ಬ್ಯುಸಿನೆಸ್ ಸ್ಟ್ಯಾಂಡರ್ಡ್ ವರದಿಯನ್ನು ಮಾಡಿದ್ದು, ವರದಿಯಲ್ಲಿ ಈ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನವೆಂಬರ್ 2016ರಲ್ಲಿ ನೋಟುಗಳ ಅಮಾನ್ಯೀಕರಣದ ನಂತರ ಎಫ್‌ಐಯು ನಿಗಾ ಇಟ್ಟಿತ್ತು. ಎಫ್‌ಐಯು ‘ಹೆಚ್ಚಿನ ಅಪಾಯದ ಸಂಸ್ಥೆಗಳು’ ಎಂದು ಗುರುತಿಸಿದ ಎಲ್ಲಾ 19 ಕಂಪನಿಗಳು  ಚುನಾವಣಾ ಬಾಂಡ್‌ ಕುರಿತ 2018ರ ಪಟ್ಟಿಯಲ್ಲಿ ಸೇರಿದೆ ಎಂದು ಹೇಳಲಾಗಿದೆ. ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಈ 19 ಕಂಪನಿಗಳಲ್ಲಿ 18 ಕಂಪನಿಗಳು ಕಾಕತಾಳೀಯವಾಗಿ ಎಫ್‌ಐಯುನ ನಂತರದ ‘ಹೆಚ್ಚಿನ ಅಪಾಯದ’ ವಾರ್ಷಿಕ ಪಟ್ಟಿಗಳಲ್ಲಿ ಕಾಣಿಸಿಕೊಂಡಿಲ್ಲ. ಹಾಗಾಗಿ ಬಾಂಡ್‌ಗಳನ್ನು ಖರೀದಿಸಿರುವುದು ಕಂಡುಬಂದಿರುವ ‘ಹೈ ರಿಸ್ಕ್’ ಕಂಪನಿಗಳಲ್ಲಿ ಕೇವಲ ಒಂದು ಮಾತ್ರ ಕಂಡು ಬಂದಿದೆ ಎಂದು ಅವಲೋಕನದ ವೇಳೆ ಬಯಲಾಗಿದ್ದು, ಉಳಿದ ಕಂಪೆನಿಗಳು ಸೇಫ್‌ ಆಗಿದೆ ಎನ್ನಲಾಗಿದೆ.

2018ರ ಪಟ್ಟಿಯನ್ನು FIU ಹೊರತಂದ ವಾರಗಳ ನಂತರ, ಹಣಕಾಸು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿದ PTI ವರದಿಯು, 2018ರ ‘ಹೈ ರಿಸ್ಕ್’ ಪಟ್ಟಿಯಲ್ಲಿ ಹೆಸರಿಸಲಾದ 9,491 ಕಂಪನಿಗಳಲ್ಲಿ 1200ಕ್ಕೂ ಹೆಚ್ಚು ಕಂಪೆನಿಗಳು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ ಎಂದು ಹೇಳಿದೆ.

ರೇಣುಕಾ ಇನ್ವೆಸ್ಟ್ಮೆಂಟ್ ಫೈನಾನ್ಸ್ ಲಿಮಿಟೆಡ್

‘ಹೆಚ್ಚಿನ ಅಪಾಯದ’ ಕಂಪೆನಿಗಳ ಪಟ್ಟಿಗಳಲ್ಲಿ ಕಂಪನಿಯು ರೇಣುಕಾ ಇನ್ವೆಸ್ಟ್‌ಮೆಂಟ್ ಫೈನಾನ್ಸ್ ಲಿಮಿಟೆಡ್ ಕಂಡು ಬಂದಿದೆ. ಉತ್ತರ ಪ್ರದೇಶದ ಸೋನ್‌ಭದ್ರದಲ್ಲಿ ನೋಂದಾಯಿತ ರೇಣುಕಾ ಇನ್ವೆಸ್ಟ್‌ಮೆಂಟ್ ಫೈನಾನ್ಸ್ ಲಿಮಿಟೆಡ್ 2018, 2019, 2021, ಮತ್ತು 2022 ರಲ್ಲಿ FIU ನ ವಾರ್ಷಿಕ ‘ಹೈ-ರಿಸ್ಕ್’ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಏಪ್ರಿಲ್ 12, 2019ರಂದು ಕಂಪನಿಯು ರೂ 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. SBI ಇನ್ನೂ ಖರೀದಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸದಿರುವುದರಿಂದ, ಯಾವ ರಾಜಕೀಯ ಪಕ್ಷವು ಈ ಹಣವನ್ನು ಪಡೆದುಕೊಂಡಿದೆ ಎಂಬುದು ಸ್ಪಷ್ಟವಾಗಿಲ್ಲ.

2018ರ ಹೆಚ್ಚಿನ ಅಪಾಯದ ಪಟ್ಟಿಯಲ್ಲಿದ್ದ ಇತರ ಕಂಪೆನಿಗಳು

ಪಿಎಂಎಲ್‌ಎ ಕಾಯ್ದೆಯನ್ನು ಉಲ್ಲಂಘಿಸಿದ ಕಾರಣಕ್ಕೆ 2018ರ ಎಫ್‌ಐಯುನ ‘ಹೈ ರಿಸ್ಕ್’ ಪಟ್ಟಿಯಲ್ಲಿದ್ದ ಇತರ ಕಂಪೆನಿಗಳು:

ಕಾಮ್ನಾ ಕ್ರೆಡಿಟ್ಸ್ ಮತ್ತು ಪ್ರಮೋಟರ್ಸ್ ಪ್ರೈ. ಲಿ.

2018ರ ಪಟ್ಟಿಯಲ್ಲಿ FIU ಕಾಮ್ನಾ ಕ್ರೆಡಿಟ್ಸ್ ಮತ್ತು ಪ್ರಮೋಟರ್ಸ್ ಪ್ರೈವೇಟ್ ಲಿಮಿಟೆಡ್ PMLA ಮತ್ತು PML ನಿಯಮಗಳನ್ನು ಪಾಲಿಸಿಲ್ಲ ಎಂದು ಕಂಡು ಹಿಡಿದಿತ್ತು. ಕೋಲ್ಕತ್ತಾ ಮೂಲದ ಈ ಕಂಪೆನಿ, ಇದು ಜನವರಿ 4, 2022ರಂದು 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಚುನಾವಣಾ ಆಯೋಗ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ವಿಧಾನಸಭಾ ಚುನಾವಣೆ ಘೋಷಿಸಿದ 4 ದಿನಗಳ ಬಳಿಕ ಈ ಬೆಳವಣಿಗೆ ನಡೆದಿತ್ತು.

ಇನ್ನೋಸೆಂಟ್ ಮರ್ಚಂಡೈಸ್ ಪ್ರೈ. ಲಿ.

PMLA ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 2018ರಲ್ಲಿ ಇನೋಸೆಂಟ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ‘ಹೈ-ರಿಸ್ಕ್’ ಕಂಪನಿಯ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಕೋಲ್ಕತ್ತಾ ಮೂಲದ ಈ ಕಂಪೆನಿಯು ಏಪ್ರಿಲ್ 12, 2019 ರಂದು 25 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ನಂತರ ಒಂದು ದಿನದ ನಂತರ ಈ ಬಾಂಡ್‌ಗಳನ್ನು ಖರೀದಿಸಲಾಗಿದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರಿಯಾಗಿ ಮಾಹಿತಿ ನೀಡದ ಕಾರಣ ಯಾವ ಪಕ್ಷಕ್ಕೆ ನೀಡಲಾಗಿದೆ ಎಂಬುವುದು ಅಸ್ಪಷ್ಟವಾಗಿದೆ.

ಆಲ್ಮೈಟಿ ಫೈನಾನ್ಸ್ ಅಂಡ್ ಇನ್ವೆಸ್ಟ್‌ಮೆಂಟ್ ಪ್ರೈ. ಲಿಮಿಟೆಡ್

ಕೋಲ್ಕತ್ತಾ ಮೂಲದ ಆಲ್ಮೈಟಿ ಫೈನಾನ್ಸ್ ಅಂಡ್ ಇನ್ವೆಸ್ಟ್‌ಮೆಂಟ್ ಪ್ರೈ. ಲಿಮಿಟೆಡ್ ಜುಲೈ 5, 2019ರಂದು  20 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಈ ದೇಣಿಗೆ ಯಾವ ಪಕ್ಷಕ್ಕೆ  ಹೋಗಿದೆ ಎಂಬುದು ತಿಳಿದಿಲ್ಲವಾದರೂ, ಈ ವೇಳೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ಉಪ ಚುನಾವಣೆಗಳು ನಡೆದಿವೆ.

ಅರಿಹಂತ್ ಎಂಟರ್‌ಪ್ರೈಸಸ್ ಲಿ.

ಅರಿಹಂತ್ ಎಂಟರ್‌ಪ್ರೈಸಸ್ ಲಿಮಿಟೆಡ್ ಕೂಡ ಕೋಲ್ಕತ್ತಾ ಮೂಲದ ಕಂಪನಿಯಾಗಿದೆ. 2019 ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತ ಪೂರ್ಣಗೊಂಡ ಒಂದು ದಿನದ ನಂತರ, ಏಪ್ರಿಲ್ 12, 2019ರಂದು 40 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಈ ಕಂಪೆನಿ ಖರೀದಿಸಿತ್ತು. ಇದಲ್ಲದೆ ಜುಲೈ 2019ರಲ್ಲಿ ಮತ್ತೆ 10 ಕೋಟಿ ರೂ. ಬಾಂಡ್‌ಗಳನ್ನು ಖರೀದಿಸಿತ್ತು. ಒಟ್ಟಾರೆಯಾಗಿ ಈ ಕಂಪೆನಿಯು 50 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿತ್ತು.

ಆಶಿಶ್ ಫೈನಾನ್ಸ್ ಪ್ರೈ.ಲಿಮಿಟೆಡ್

ಇದು ಕೂಡ ಕೋಲ್ಕತ್ತಾದಲ್ಲಿ ನೋಂದಾಯಿತ ಕಂಪೆನಿಯಾಗಿದೆ. ಆಶಿಶ್ ಫೈನಾನ್ಸ್ ಪ್ರೈ.ಲಿಮಿಟೆಡ್ ಜನವರಿ 4 ರಂದು 250 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಆಟಮ್ ಇನ್ವೆಸ್ಟ್ಮೆಂಟ್ & ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್

ಆಟಮ್ ಇನ್ವೆಸ್ಟ್ಮೆಂಟ್ & ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮುಂಬೈ-ನೋಂದಾಯಿತ ಕಂಪೆನಿಯಾಗಿದೆ. ಇದು ಏಪ್ರಿಲ್ 7, 2022 ರಂದು 10 ಕೋಟಿ ರೂ.ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ. ಏಪ್ರಿಲ್ 2022ರ ನಂತರ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ಉಪ ಚುನಾವಣೆಗಳು ನಡೆದಿವೆ. ಇದಲ್ಲದೆ ಜನವರಿ 24, 2023ರಂದು ಅದು ಮತ್ತೆ 15 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2022-23ರ ನಡುವೆ ಕಂಪೆನಿಯು ಒಟ್ಟು 25 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಬನ್ಸಾಲ್ ಬಿಸಿನೆಸ್ ಪ್ರೈ. ಲಿಮಿಟೆಡ್

ಬನ್ಸಾಲ್ ಬಿಸಿನೆಸ್ ಪ್ರೈ. ಲಿಮಿಟೆಡ್ ಮತ್ತೊಂದು ಕೋಲ್ಕತ್ತಾ ಮೂಲದ ಕಂಪೆನಿ. ಈ ಕಂಪೆನಿ ಗೋವಾ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಉತ್ತರಪ್ರದೇಶ ರಾಜ್ಯಗಳ ಅಸೆಂಬ್ಲಿ ಚುನಾವಣೆಗೆ ಮುನ್ನ, ಅಂದರೆ ಜನವರಿ 3, 2022ರಂದು 40 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಏಪ್ರಿಲ್ 10, 2023ರಂದು ಅದು ಮತ್ತೆ 50 ಕೋಟಿ ರೂ.ಮೌಲ್ಯದ ಚುನಾವಣೆ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟು ಈ ಸಂಸ್ಥೆ 90 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಕ್ಲಿಕ್ಸ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್

ಕ್ಲಿಕ್ಸ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್ ಕೋಲ್ಕತ್ತಾ-ನೋಂದಾಯಿತ ಕಂಪೆನಿ. ಇದು ಜನವರಿ 3, 2022ರಂದು 35 ಕೋಟಿ ರೂ. ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಕ್ರೋಚೆಟ್ ಟ್ರೇಡ್ ಅಂಡ್ ಇನ್ವೆಸ್ಟ್ಮೆಂಟ್ ಲಿ.

ಕೋಲ್ಕತ್ತಾದ ಲಾಲ್ ಬಜಾರ್ ಪ್ರದೇಶದಲ್ಲಿ ನೋಂದಾಯಿತ ಕ್ರೋಚೆಟ್ ಟ್ರೇಡ್ ಅಂಡ್ ಇನ್ವೆಸ್ಟ್‌ಮೆಂಟ್ ಲಿಮಿಟೆಡ್ ಗಮನಾರ್ಹವಾಗಿ ಅಕ್ಟೋಬರ್ 8, 2021 ರಂದು 200 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಜುಲೈ 7, 2023 ರಂದು ಮತ್ತೆ 150 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟಾರೆಯಾಗಿ ಕಂಪೆನಿಯು 350 ಕೋಟಿ.ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಜುಪಿಟರ್ ಮರ್ಚಂಟೈಲ್ ಪ್ರೈ. ಲಿಮಿಟೆಡ್

ಕೋಲ್ಕತ್ತಾ ಮೂಲದ ಜುಪಿಟರ್ ಮರ್ಚಂಟೈಲ್ ಪ್ರೈ. ಲಿಮಿಟೆಡ್ ಕಂಪೆನಿ ಏಪ್ರಿಲ್ 17, 2019ರಂದು 25 ಕೋಟಿ ರೂ.ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಲೈಫ್‌ಲೈನ್ ಮಾರ್ಕೆಟಿಂಗ್ ಪ್ರೈ. ಲಿಮಿಟೆಡ್

ಲೈಫ್‌ಲೈನ್ ಮಾರ್ಕೆಟಿಂಗ್ ಪ್ರೈ.ಲಿಮಿಟೆಡ್ ಕೋಲ್ಕತ್ತಾ ಮೂಲದ ಕಂಪೆನಿ, ಇದು ಅಕ್ಟೋಬರ್ 7, 2021ರಂದು 200ಕೋಟಿ ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಮನು ವ್ಯಾಪಾರ್ ಪ್ರೈ. ಲಿಮಿಟೆಡ್

ಮನು ವ್ಯಾಪಾರ್ ಪ್ರೈ.ಲಿಮಿಟೆಡ್ ಕೋಲ್ಕತ್ತಾದಲ್ಲಿ ನೋಂದಾಯಿಸಲಾದ ಕಂಪೆನಿಯಾಗಿದೆ, ಈ ಕಂಪೆನಿಯು ಚುನಾವಣಾ ಬಾಂಡ್‌ಗಳನ್ನು ಜನವರಿ 24, 2023ರಂದು 300 ಕೋಟಿ ರೂ. ಮತ್ತು  ಜನವರಿ 11, 2024 ರಂದು 200 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಅಂದರೆ ಒಟ್ಟಾರೆ 500 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಪ್ಲುಟೊ ಫೈನಾನ್ಸ್ ಪ್ರೈ. ಲಿಮಿಟೆಡ್

ಪ್ಲುಟೊ ಫೈನಾನ್ಸ್ ಪ್ರೈ. ಲಿಮಿಟೆಡ್ ಕೂಡ ಕೋಲ್ಕತ್ತಾ ಮೂಲದ ಕಂಪನಿ. ಜುಲೈ 6, 2021ರಂದು 22 ಕೋಟಿ ರೂ.ಮೌಲ್ಯದ ಬಾಂಡ್‌ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್‌ಬಿಐ) ಈ ಕಂಪೆನಿ ಖರೀದಿಸಿದೆ.

ಜನವರಿ 4, 2024ರಂದು, 25 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಆ ಬಳಿಕ 50 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟಾರೆಯಾಗಿ ಈ ಕಂಪೆನಿ  97 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ.

ರಾಮೋಲಿ ಡೀಲರ್ ಪ್ರೈ. ಲಿ.

ರಾಮೋಲಿ ಡೀಲರ್ಸ್ ಕೂಡ ಕೋಲ್ಕತ್ತಾ ನೋಂದಾಯಿತ ಕಂಪನಿಯಾಗಿದೆ. ಇದು ಜನವರಿ 3, 2022ರಂದು 25 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ರಾಣಿ ಸತಿ ಮರ್ಕೆಂಟೈಲ್ ಪ್ರೈ. ಲಿಮಿಟೆಡ್

ರಾಣಿ ಸತಿ ಮರ್ಕೆಂಟೈಲ್ ಪ್ರೈ.ಲಿಮಿಟೆಡ್ ಕೋಲ್ಕತ್ತಾ ಮೂಲದ ಕಂಪನಿ, ಅಕ್ಟೋಬರ್ 5, 2021ರಂದು 30 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಮತ್ತು ಜನವರಿ 6, 2024 ರಂದು 75 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದೆ.

ರೈಟ್ ಏಡ್ ಕನ್ಸಲ್ಟೆಂಟ್ಸ್ ಪ್ರೈ.ಲಿಮಿಟೆಡ್

ಕೋಲ್ಕತ್ತಾ ಲಾಲ್ ಬಜಾರ್ ಮೂಲದ ಈ ಕಂಪನಿಯು ಅಕ್ಟೋಬರ್ 8, 2021ರಂದು 150 ಕೋಟಿ ರೂ. ಮೌಲ್ಯದ ಮತ್ತು ಜುಲೈ 10, 2023 ರಂದು 150 ಕೋಟಿ ರೂ. ಮೌಲ್ಯದ ಹೆಚ್ಚಿನ ಬಾಂಡ್‌ಗಳನ್ನು ಖರೀದಿಸಿದೆ.

ಸಿಲ್ವರ್ಟೋನ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್

ಇದು ಕೂಡ ಕೋಲ್ಕತ್ತಾದ ಲಾಲ್ ಬಜಾರ್‌ನಲ್ಲಿ ನೋಂದಾಯಿತ ಕಂಪನಿಯಾಗಿದೆ. ಅಕ್ಟೋಬರ್ 2021ರಂದು 200 ಕೋಟಿ ರೂ. ಮೌಲ್ಯದ ಮತ್ತು ಜುಲೈ 10, 2023 ರಂದು 150 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಶ್ರೀನಾಥ್ ಫಿನ್ವೆಸ್ಟ್ ಪ್ರೈ. ಲಿಮಿಟೆಡ್

ಇದು ಕೂಡ ಕೋಲ್ಕತ್ತಾ ಮೂಲದ ಕಂಪನಿ. ಇದು ಜುಲೈ 7, 2021ರಂದು 10 ಕೋಟಿ ರೂ.ಮೌಲ್ಯದ ಮತ್ತು ಜನವರಿ 7, 2022 ರಂದು 20 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಸುಧಾ ಕಮರ್ಷಿಯಲ್ ಕಂಪನಿ ಲಿ.

ಇದು ಕೋಲ್ಕತ್ತಾ-ನೋಂದಾಯಿತ ಕಂಪೆನಿ, ಏಪ್ರಿಲ್ 20, 2019ರಂದು 30 ಕೋಟಿ ರೂ. ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಶ್ವೇತಾ ಎಸ್ಟೇಟ್ಸ್ ಪ್ರೈ. ಲಿಮಿಟೆಡ್

ದೆಹಲಿಯ ಏರೋ ಸಿಟಿಯಲ್ಲಿ ನೋಂದಣಿಯಾಗಿರುವ ಈ ಕಂಪನಿಯು ಏಪ್ರಿಲ್ 16, 2019ರಂದು 200 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...