Homeಮುಖಪುಟನಿಷೇಧಿತ 'ಸಿಮಿ' ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ನಿಷೇಧಿತ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ(ಸಿಮಿ) ಸಭೆಗಳನ್ನು ನಡೆಸಿದ ಮತ್ತು ಕರಪತ್ರಗಳನ್ನು ವಿತರಿಸಿದ ಆರೋಪದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿ 18 ವರ್ಷಗಳ ನಂತರ, ನಾಗ್ಪುರದ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ ಎಂದು ವರದಿಯಾಗಿದೆ.

ಸಭೆಗಳಲ್ಲಿ ಭಾಗವಹಿಸುವುದು, ಸಂವಹನ, ಪ್ರಚಾರ ಅಥವಾ ಯಾವುದೇ ಆರ್ಥಿಕ ನೆರವು ನೀಡಿದ ಬಗ್ಗೆ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು indianexpress.com ವರದಿ ವಿವರಿಸಿದೆ.

2006ರಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದಾಗ 30ರ ಹರೆಯದ ಆಸುಪಾಸಿನವರಾಗಿದ್ದ ಈ 8 ಮಂದಿ ಪುರುಷರನ್ನು, ಆಗಸ್ಟ್ 13ರಂದು ನಾಗ್ಪುರದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಖುಲಾಸೆಗೊಳಿಸಿದೆ.

ಈ ವ್ಯಕ್ತಿಗಳು ಸಿಮಿ ಜೊತೆ ಭಾಗಿಯಾಗಿರುವ ಬಗ್ಗೆ ಗೌಪ್ಯ ಮಾಹಿತಿ ಸಿಕ್ಕಿದೆ ಎಂದು ಪ್ರಕರಣ ದಾಖಲಿಸಿ ಬಂಧಿಸುವಾಗ ಪೊಲೀಸರು ಹೇಳಿಕೊಂಡಿದ್ದರು.

ಆದರೆ, ವಿಚಾರಣೆಯ ಸಮಯದಲ್ಲಿ, ಗೌಪ್ಯ ಮಾಹಿತಿಯನ್ನು ಸ್ವೀಕರಿಸಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ದಾಖಲಿಸಲಾಗಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ನೀಡಲು ಪೊಲೀಸರಿಗೆ ಸಾಧ್ಯವಾಗಿಲ್ಲ.

ಪೊಲೀಸರು ಆರೋಪಿಗಳ ನಿವಾಸದಲ್ಲಿ ಅಪರಾಧ ಸಾಬೀತಾದ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿಕೊಂಡಿದ್ದರು. ಆದರೆ, ನ್ಯಾಯಾಲಯದ ಮುಂದೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು indianexpress.com ವರದಿ ಹೇಳಿದೆ.

ಪೊಲೀಸರನ್ನು ಹೊರತುಪಡಿಸಿ, ಆರೋಪಿಗಳ ಚಟುವಟಿಕೆಗಳ ಬಗ್ಗೆ ತಿಳಿದಿತ್ತು ಎಂದು ಪೊಲೀಸರು ಹೇಳಿಕೊಂಡಿದ್ದ ಸ್ವತಂತ್ರ ಸಾಕ್ಷಿಗಳು ಸೇರಿದಂತೆ ಇತರ ಸಾಕ್ಷಿಗಳು ಪೊಲೀಸರ ಪ್ರಕರಣವನ್ನು ಬೆಂಬಲಿಸಿಲ್ಲ.

ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ, ಪೊಲೀಸರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸ್ವತಂತ್ರ ಸಾಕ್ಷಿಗಳಿಲ್ಲ ಎಂದು ಪುರುಷರು ಕೂಡ ವಾದಿಸಿದ್ದರು.

ಶಕೀಲ್ ವಾರ್ಸಿ, ಶಾಕಿರ್ ಅಹ್ಮದ್ ನಾಸಿರ್ ಅಹ್ಮದ್, ಮೊಹಮ್ಮದ್ ರೆಹಾನ್ ಅತುಲ್ಲಾಖಾನ್, ಜಿಯಾವುರ್ ರೆಹಮಾನ್ ಮಹೆಬೂಬ್ ಖಾನ್, ವಾಕರ್ ಬೇಗ್ ಯೂಸುಫ್ ಬೇಗ್, ಇಮ್ತಿಯಾಜ್ ಅಹ್ಮದ್ ನಿಸಾರ್ ಅಹ್ಮದ್, ಮೊಹಮ್ಮದ್ ಅಬ್ರಾರ್ ಆರಿಫ್ ಮೊಹಮ್ಮದ್ ಕಾಶಿಮ್ ಮತ್ತು ಶೇಖ್ ಅಹ್ಮದ್ ಶೇಖ್ ಅವರನ್ನು ಯುಎಪಿಎ ಸೆಕ್ಷನ್ 10 ಮತ್ತು 13 ರ ಆರೋಪಗಳಿಂದ ಮುಕ್ತಗೊಳಿಸಲಾಗಿದೆ.

ವಿಚಾರಣೆ ಬಾಕಿ ಇರುವಾಗ ಈ ವ್ಯಕ್ತಿಗಳು ಜಾಮೀನಿನ ಮೇಲೆ ಹೊರಬಂದಿದ್ದರು ಎಂದು indianexpress.com ತಿಳಿಸಿದೆ.

ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...