Homeಮುಖಪುಟನಿಷೇಧಿತ 'ಸಿಮಿ' ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ನಿಷೇಧಿತ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ(ಸಿಮಿ) ಸಭೆಗಳನ್ನು ನಡೆಸಿದ ಮತ್ತು ಕರಪತ್ರಗಳನ್ನು ವಿತರಿಸಿದ ಆರೋಪದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿ 18 ವರ್ಷಗಳ ನಂತರ, ನಾಗ್ಪುರದ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ ಎಂದು ವರದಿಯಾಗಿದೆ.

ಸಭೆಗಳಲ್ಲಿ ಭಾಗವಹಿಸುವುದು, ಸಂವಹನ, ಪ್ರಚಾರ ಅಥವಾ ಯಾವುದೇ ಆರ್ಥಿಕ ನೆರವು ನೀಡಿದ ಬಗ್ಗೆ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು indianexpress.com ವರದಿ ವಿವರಿಸಿದೆ.

2006ರಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದಾಗ 30ರ ಹರೆಯದ ಆಸುಪಾಸಿನವರಾಗಿದ್ದ ಈ 8 ಮಂದಿ ಪುರುಷರನ್ನು, ಆಗಸ್ಟ್ 13ರಂದು ನಾಗ್ಪುರದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಖುಲಾಸೆಗೊಳಿಸಿದೆ.

ಈ ವ್ಯಕ್ತಿಗಳು ಸಿಮಿ ಜೊತೆ ಭಾಗಿಯಾಗಿರುವ ಬಗ್ಗೆ ಗೌಪ್ಯ ಮಾಹಿತಿ ಸಿಕ್ಕಿದೆ ಎಂದು ಪ್ರಕರಣ ದಾಖಲಿಸಿ ಬಂಧಿಸುವಾಗ ಪೊಲೀಸರು ಹೇಳಿಕೊಂಡಿದ್ದರು.

ಆದರೆ, ವಿಚಾರಣೆಯ ಸಮಯದಲ್ಲಿ, ಗೌಪ್ಯ ಮಾಹಿತಿಯನ್ನು ಸ್ವೀಕರಿಸಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ದಾಖಲಿಸಲಾಗಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ನೀಡಲು ಪೊಲೀಸರಿಗೆ ಸಾಧ್ಯವಾಗಿಲ್ಲ.

ಪೊಲೀಸರು ಆರೋಪಿಗಳ ನಿವಾಸದಲ್ಲಿ ಅಪರಾಧ ಸಾಬೀತಾದ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿಕೊಂಡಿದ್ದರು. ಆದರೆ, ನ್ಯಾಯಾಲಯದ ಮುಂದೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು indianexpress.com ವರದಿ ಹೇಳಿದೆ.

ಪೊಲೀಸರನ್ನು ಹೊರತುಪಡಿಸಿ, ಆರೋಪಿಗಳ ಚಟುವಟಿಕೆಗಳ ಬಗ್ಗೆ ತಿಳಿದಿತ್ತು ಎಂದು ಪೊಲೀಸರು ಹೇಳಿಕೊಂಡಿದ್ದ ಸ್ವತಂತ್ರ ಸಾಕ್ಷಿಗಳು ಸೇರಿದಂತೆ ಇತರ ಸಾಕ್ಷಿಗಳು ಪೊಲೀಸರ ಪ್ರಕರಣವನ್ನು ಬೆಂಬಲಿಸಿಲ್ಲ.

ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ, ಪೊಲೀಸರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸ್ವತಂತ್ರ ಸಾಕ್ಷಿಗಳಿಲ್ಲ ಎಂದು ಪುರುಷರು ಕೂಡ ವಾದಿಸಿದ್ದರು.

ಶಕೀಲ್ ವಾರ್ಸಿ, ಶಾಕಿರ್ ಅಹ್ಮದ್ ನಾಸಿರ್ ಅಹ್ಮದ್, ಮೊಹಮ್ಮದ್ ರೆಹಾನ್ ಅತುಲ್ಲಾಖಾನ್, ಜಿಯಾವುರ್ ರೆಹಮಾನ್ ಮಹೆಬೂಬ್ ಖಾನ್, ವಾಕರ್ ಬೇಗ್ ಯೂಸುಫ್ ಬೇಗ್, ಇಮ್ತಿಯಾಜ್ ಅಹ್ಮದ್ ನಿಸಾರ್ ಅಹ್ಮದ್, ಮೊಹಮ್ಮದ್ ಅಬ್ರಾರ್ ಆರಿಫ್ ಮೊಹಮ್ಮದ್ ಕಾಶಿಮ್ ಮತ್ತು ಶೇಖ್ ಅಹ್ಮದ್ ಶೇಖ್ ಅವರನ್ನು ಯುಎಪಿಎ ಸೆಕ್ಷನ್ 10 ಮತ್ತು 13 ರ ಆರೋಪಗಳಿಂದ ಮುಕ್ತಗೊಳಿಸಲಾಗಿದೆ.

ವಿಚಾರಣೆ ಬಾಕಿ ಇರುವಾಗ ಈ ವ್ಯಕ್ತಿಗಳು ಜಾಮೀನಿನ ಮೇಲೆ ಹೊರಬಂದಿದ್ದರು ಎಂದು indianexpress.com ತಿಳಿಸಿದೆ.

ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...