Homeಮುಖಪುಟನಿಷೇಧಿತ 'ಸಿಮಿ' ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ನಿಷೇಧಿತ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ(ಸಿಮಿ) ಸಭೆಗಳನ್ನು ನಡೆಸಿದ ಮತ್ತು ಕರಪತ್ರಗಳನ್ನು ವಿತರಿಸಿದ ಆರೋಪದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿ 18 ವರ್ಷಗಳ ನಂತರ, ನಾಗ್ಪುರದ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ ಎಂದು ವರದಿಯಾಗಿದೆ.

ಸಭೆಗಳಲ್ಲಿ ಭಾಗವಹಿಸುವುದು, ಸಂವಹನ, ಪ್ರಚಾರ ಅಥವಾ ಯಾವುದೇ ಆರ್ಥಿಕ ನೆರವು ನೀಡಿದ ಬಗ್ಗೆ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು indianexpress.com ವರದಿ ವಿವರಿಸಿದೆ.

2006ರಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದಾಗ 30ರ ಹರೆಯದ ಆಸುಪಾಸಿನವರಾಗಿದ್ದ ಈ 8 ಮಂದಿ ಪುರುಷರನ್ನು, ಆಗಸ್ಟ್ 13ರಂದು ನಾಗ್ಪುರದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಖುಲಾಸೆಗೊಳಿಸಿದೆ.

ಈ ವ್ಯಕ್ತಿಗಳು ಸಿಮಿ ಜೊತೆ ಭಾಗಿಯಾಗಿರುವ ಬಗ್ಗೆ ಗೌಪ್ಯ ಮಾಹಿತಿ ಸಿಕ್ಕಿದೆ ಎಂದು ಪ್ರಕರಣ ದಾಖಲಿಸಿ ಬಂಧಿಸುವಾಗ ಪೊಲೀಸರು ಹೇಳಿಕೊಂಡಿದ್ದರು.

ಆದರೆ, ವಿಚಾರಣೆಯ ಸಮಯದಲ್ಲಿ, ಗೌಪ್ಯ ಮಾಹಿತಿಯನ್ನು ಸ್ವೀಕರಿಸಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ದಾಖಲಿಸಲಾಗಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ನೀಡಲು ಪೊಲೀಸರಿಗೆ ಸಾಧ್ಯವಾಗಿಲ್ಲ.

ಪೊಲೀಸರು ಆರೋಪಿಗಳ ನಿವಾಸದಲ್ಲಿ ಅಪರಾಧ ಸಾಬೀತಾದ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿಕೊಂಡಿದ್ದರು. ಆದರೆ, ನ್ಯಾಯಾಲಯದ ಮುಂದೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು indianexpress.com ವರದಿ ಹೇಳಿದೆ.

ಪೊಲೀಸರನ್ನು ಹೊರತುಪಡಿಸಿ, ಆರೋಪಿಗಳ ಚಟುವಟಿಕೆಗಳ ಬಗ್ಗೆ ತಿಳಿದಿತ್ತು ಎಂದು ಪೊಲೀಸರು ಹೇಳಿಕೊಂಡಿದ್ದ ಸ್ವತಂತ್ರ ಸಾಕ್ಷಿಗಳು ಸೇರಿದಂತೆ ಇತರ ಸಾಕ್ಷಿಗಳು ಪೊಲೀಸರ ಪ್ರಕರಣವನ್ನು ಬೆಂಬಲಿಸಿಲ್ಲ.

ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ, ಪೊಲೀಸರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸ್ವತಂತ್ರ ಸಾಕ್ಷಿಗಳಿಲ್ಲ ಎಂದು ಪುರುಷರು ಕೂಡ ವಾದಿಸಿದ್ದರು.

ಶಕೀಲ್ ವಾರ್ಸಿ, ಶಾಕಿರ್ ಅಹ್ಮದ್ ನಾಸಿರ್ ಅಹ್ಮದ್, ಮೊಹಮ್ಮದ್ ರೆಹಾನ್ ಅತುಲ್ಲಾಖಾನ್, ಜಿಯಾವುರ್ ರೆಹಮಾನ್ ಮಹೆಬೂಬ್ ಖಾನ್, ವಾಕರ್ ಬೇಗ್ ಯೂಸುಫ್ ಬೇಗ್, ಇಮ್ತಿಯಾಜ್ ಅಹ್ಮದ್ ನಿಸಾರ್ ಅಹ್ಮದ್, ಮೊಹಮ್ಮದ್ ಅಬ್ರಾರ್ ಆರಿಫ್ ಮೊಹಮ್ಮದ್ ಕಾಶಿಮ್ ಮತ್ತು ಶೇಖ್ ಅಹ್ಮದ್ ಶೇಖ್ ಅವರನ್ನು ಯುಎಪಿಎ ಸೆಕ್ಷನ್ 10 ಮತ್ತು 13 ರ ಆರೋಪಗಳಿಂದ ಮುಕ್ತಗೊಳಿಸಲಾಗಿದೆ.

ವಿಚಾರಣೆ ಬಾಕಿ ಇರುವಾಗ ಈ ವ್ಯಕ್ತಿಗಳು ಜಾಮೀನಿನ ಮೇಲೆ ಹೊರಬಂದಿದ್ದರು ಎಂದು indianexpress.com ತಿಳಿಸಿದೆ.

ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...