Homeಮುಖಪುಟನಿಷೇಧಿತ 'ಸಿಮಿ' ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ನಿಷೇಧಿತ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ(ಸಿಮಿ) ಸಭೆಗಳನ್ನು ನಡೆಸಿದ ಮತ್ತು ಕರಪತ್ರಗಳನ್ನು ವಿತರಿಸಿದ ಆರೋಪದ ಮೇಲೆ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿ 18 ವರ್ಷಗಳ ನಂತರ, ನಾಗ್ಪುರದ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ ಎಂದು ವರದಿಯಾಗಿದೆ.

ಸಭೆಗಳಲ್ಲಿ ಭಾಗವಹಿಸುವುದು, ಸಂವಹನ, ಪ್ರಚಾರ ಅಥವಾ ಯಾವುದೇ ಆರ್ಥಿಕ ನೆರವು ನೀಡಿದ ಬಗ್ಗೆ ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬುವುದಾಗಿ ನ್ಯಾಯಾಲಯ ಹೇಳಿದೆ ಎಂದು indianexpress.com ವರದಿ ವಿವರಿಸಿದೆ.

2006ರಲ್ಲಿ ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದಾಗ 30ರ ಹರೆಯದ ಆಸುಪಾಸಿನವರಾಗಿದ್ದ ಈ 8 ಮಂದಿ ಪುರುಷರನ್ನು, ಆಗಸ್ಟ್ 13ರಂದು ನಾಗ್ಪುರದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಖುಲಾಸೆಗೊಳಿಸಿದೆ.

ಈ ವ್ಯಕ್ತಿಗಳು ಸಿಮಿ ಜೊತೆ ಭಾಗಿಯಾಗಿರುವ ಬಗ್ಗೆ ಗೌಪ್ಯ ಮಾಹಿತಿ ಸಿಕ್ಕಿದೆ ಎಂದು ಪ್ರಕರಣ ದಾಖಲಿಸಿ ಬಂಧಿಸುವಾಗ ಪೊಲೀಸರು ಹೇಳಿಕೊಂಡಿದ್ದರು.

ಆದರೆ, ವಿಚಾರಣೆಯ ಸಮಯದಲ್ಲಿ, ಗೌಪ್ಯ ಮಾಹಿತಿಯನ್ನು ಸ್ವೀಕರಿಸಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ದಾಖಲಿಸಲಾಗಿದೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ನೀಡಲು ಪೊಲೀಸರಿಗೆ ಸಾಧ್ಯವಾಗಿಲ್ಲ.

ಪೊಲೀಸರು ಆರೋಪಿಗಳ ನಿವಾಸದಲ್ಲಿ ಅಪರಾಧ ಸಾಬೀತಾದ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿಕೊಂಡಿದ್ದರು. ಆದರೆ, ನ್ಯಾಯಾಲಯದ ಮುಂದೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು indianexpress.com ವರದಿ ಹೇಳಿದೆ.

ಪೊಲೀಸರನ್ನು ಹೊರತುಪಡಿಸಿ, ಆರೋಪಿಗಳ ಚಟುವಟಿಕೆಗಳ ಬಗ್ಗೆ ತಿಳಿದಿತ್ತು ಎಂದು ಪೊಲೀಸರು ಹೇಳಿಕೊಂಡಿದ್ದ ಸ್ವತಂತ್ರ ಸಾಕ್ಷಿಗಳು ಸೇರಿದಂತೆ ಇತರ ಸಾಕ್ಷಿಗಳು ಪೊಲೀಸರ ಪ್ರಕರಣವನ್ನು ಬೆಂಬಲಿಸಿಲ್ಲ.

ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ, ಪೊಲೀಸರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸ್ವತಂತ್ರ ಸಾಕ್ಷಿಗಳಿಲ್ಲ ಎಂದು ಪುರುಷರು ಕೂಡ ವಾದಿಸಿದ್ದರು.

ಶಕೀಲ್ ವಾರ್ಸಿ, ಶಾಕಿರ್ ಅಹ್ಮದ್ ನಾಸಿರ್ ಅಹ್ಮದ್, ಮೊಹಮ್ಮದ್ ರೆಹಾನ್ ಅತುಲ್ಲಾಖಾನ್, ಜಿಯಾವುರ್ ರೆಹಮಾನ್ ಮಹೆಬೂಬ್ ಖಾನ್, ವಾಕರ್ ಬೇಗ್ ಯೂಸುಫ್ ಬೇಗ್, ಇಮ್ತಿಯಾಜ್ ಅಹ್ಮದ್ ನಿಸಾರ್ ಅಹ್ಮದ್, ಮೊಹಮ್ಮದ್ ಅಬ್ರಾರ್ ಆರಿಫ್ ಮೊಹಮ್ಮದ್ ಕಾಶಿಮ್ ಮತ್ತು ಶೇಖ್ ಅಹ್ಮದ್ ಶೇಖ್ ಅವರನ್ನು ಯುಎಪಿಎ ಸೆಕ್ಷನ್ 10 ಮತ್ತು 13 ರ ಆರೋಪಗಳಿಂದ ಮುಕ್ತಗೊಳಿಸಲಾಗಿದೆ.

ವಿಚಾರಣೆ ಬಾಕಿ ಇರುವಾಗ ಈ ವ್ಯಕ್ತಿಗಳು ಜಾಮೀನಿನ ಮೇಲೆ ಹೊರಬಂದಿದ್ದರು ಎಂದು indianexpress.com ತಿಳಿಸಿದೆ.

ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...