Homeಚಳವಳಿಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌ ವಿರುದ್ಧ ದೇಶಾದ್ಯಂತ ದನಿಯೆತ್ತಿದ ಕಲಾವಿದರು: ಬೆಂಬಲದ ಮಹಾಪೂರ

- Advertisement -
- Advertisement -

49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ಖಂಡಿಸಿ, ಸಾಂಸ್ಕೃತಿಕ ಸಮುದಾಯದ 185 ಸೆಲೆಬ್ರಿಟಿಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಬಿಹಾರದ ಮುಜಫ್ಫರ್‍ಪುರದಲ್ಲಿ ನಡೆದ ಸಾಮೂಹಿಕ ಹಲ್ಲೆ ಖಂಡಿಸಿ, ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದ 49 ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಕ್ರಮವನ್ನು ದೇಶದ ಎಲ್ಲ ಭಾಗದ ಸೆಲೆಬ್ರಿಟಿಗಳು ಖಂಡಿಸಿದ್ದಾರೆ.

ನಟ ನಾಸಿರುದ್ದೀನ್ ಶಾ, ಡ್ಯಾನ್ಸರ್ ಮಲ್ಲಿಕಾ ಸಾರಾಬಾಯಿ, ಲೇಖಕ ಅಶೋಕ್ ವಾಜಪೇಯಿ, ನಯನತಾರಾ ಸೆಹಗಲ್, ಶಶಿ ದೇಶಪಾಂಡೆ, ರೋಮಿಲಾ ಥಾಪರ್, ಟಿ.ಎಂ ಕೃಷ್ಣಾ, ವಿವನ್ ಸುಂದರನ್ ಸೇರಿದಂತೆ 185 ಸೆಲೆಬ್ರಿಟಿಗಳು, 49 ಸೆಲೆಬ್ರಿಟಿಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಪತ್ರದ ಮೂಲಕ ಸೆಲೆಬ್ರಿಟಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ದೇಶದ್ರೋಹದ ಕೇಸ್ ದಾಖಲಿಸಿರುವುದನ್ನು ವಿರೋಧಿಸಿದ್ದಾರೆ.

ನಾಗರಿಕ ಸಮಾಜದ ಗೌರವಾನ್ವಿತ ಸದಸ್ಯರಂತೆ ಕರ್ತವ್ಯ ನಿರ್ವಹಿಸಿದ ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮೂಹಿಕ ಹಲ್ಲೆ, ಗುಂಪುಗಳ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ್ದೇ ಅಪರಾಧದಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಂತಿಯುತವಾಗಿ ಬದುಕು ನಡೆಸುತ್ತಿರುವ ಜನತೆಯನ್ನು ಪ್ರೀತಿಸಬೇಕು. ನಮ್ಮ ಸಂವಿಧಾನ ಜಾತ್ಯಾತೀತ ರಾಷ್ಟ್ರವನ್ನಾಗಿಸಿದೆ. ಇಲ್ಲಿ ಎಲ್ಲಾ ಜಾತಿ, ಸಮುದಾಯ ಹಾಗೂ ಜನರಿಗೆ ಸಮಾನ ಹಕ್ಕು ಮತ್ತು ಕರ್ತವ್ಯಗಳಿವೆ. ಮುಸ್ಲಿಂ ಮತ್ತು ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ ಪ್ರಕಾರ, 2016ರಲ್ಲಿ ದಲಿತರ ವಿರುದ್ಧ 840ಕ್ಕಿಂತ ಹೆಚ್ಚು ದೌರ್ಜನ್ಯ ನಡೆದಿರುವ ಬಗ್ಗೆ ವರದಿಯಾಗಿದೆ. ಜನವರಿ 1, 2009ರಿಂದ ಅಕ್ಟೋಬರ್ 29, 2018ರವರೆಗೆ ಧಾರ್ಮಿಕ ವಿಚಾರವಾಗಿ 254 ಅಪರಾಧ ವರದಿಗಳಾಗಿವೆ. ಧಾರ್ಮಿಕ ವಿಚಾರವಾಗಿ ನಡೆದ ಅಪರಾಧಗಳಲ್ಲಿ ಕನಿಷ್ಠ 91 ಮಂದಿ ಮೃತಪಟ್ಟಿದ್ದು, 579 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದೆ. ನಾಗರಿಕರ ಧಾರ್ಮಿಕ ಅಪರಾಧ ವರದಿ ಪ್ರಕಾರ, ಭಾರತದ ಜನಸಂಖ್ಯೆಯ ಶೇ.14ರಲ್ಲಿ, ಮುಸ್ಲಿಮರು ಶೇ. 62 ಪ್ರಕರಣಗಳಲ್ಲಿ ಬಲಿಪಶುವಾಗಿದ್ದಾರೆ. ಶೇ. 14 ರಷ್ಟು ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ಬಲಿಯಾಗಿದ್ದಾರೆ. ಅಷ್ಟೇ ಅಲ್ಲ 2014ರಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸುಮಾರು ಶೇ. 90ರಷ್ಟು ದಾಳಿ ನಡದಿರುವ ಪ್ರಕರಣಗಳು ವರದಿ ಆಗಿರುವುದನ್ನು ಉಲ್ಲೇಖಿಸಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಯುದ್ಧದ ಭಯದ ವಾತಾವರಣ ನಿರ್ಮಿಸಿದೆ. ಧಾರ್ಮಿಕತೆಯ ಹೆಸರಲ್ಲಿ ಹಲವು ಘಟನೆಗಳು ನಡೆದಿವೆ. ಧರ್ಮದ ಹೆಸರಲ್ಲಿ ಸಾಮೂಹಿಕ ಹಲ್ಲೆಗಳು ನಡೆದಿದ್ದು, ದೇಶದಲ್ಲಿ ಭೀತಿ ಹುಟ್ಟಿಸಿವೆ ಎಂದು ಸೆಲೆಬ್ರಿಟಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಂದ್ರ ಸರ್ಕಾರದ ದೌರ್ಜನ್ಯ ಮತ್ತು ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...